ದೇಶ ರಕ್ಷಣೆಗಾಗಿ 23 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾದ ಯೋಧನಿಗೆ ಮದಗೊಂಡನಹಳ್ಳಿ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ಕೋರಲಾಯಿತು.
ಯೋಧನಾಗಿ ಜಮ್ಮು-ಕಾಶ್ಮೀರ_ ಜೈಪುರ್ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ತನ್ನ ಗ್ರಾಮಕ್ಕೆ ಮರಳಿದ ಯೋಧನಿಗೆ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮದವರು ಶ್ರೀ ಶಕ್ತಿ ಸಂಘದ ಮಹಿಳೆಯರು, ಶಾಲಾ ಮಕ್ಕಳು ಸ್ನೇಹಿತರು ಸೇರಿ ಕಾಡನೂರು ಕೈಮರದ ಗೇಟ್ನಿಂದ ಬೈಕ್ ರ್ಯಾಲಿ ಮೂಲಕ ಪೂರ್ಣ ಕುಂಭ ಸ್ವಾಗತ ಕೋರಿ ಮೆರವಣಿಗೆ ಮೂಲಕ ಊರಿಗೆ ಬರ ಮಾಡಿಕೊಂಡರು.
ತಾನು ವ್ಯಾಸಂಗ ಮಾಡಿದ ಗ್ರಾಮದ ಶಾಲೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಸೈನಿಕ
ಎಂ. ಆರ್. ಶ್ರೀನಿವಾಸ್ ದೇಶ ಬಲಿಷ್ಠವಾಗಬೇಕಾದರೆ
ಸೈನ್ಯ ಬಲಿಷ್ಠವಾಗಿರಬೇಕು ಎಂದು ಹೇಳಿದರು.
ತನ್ನ 23 ವರ್ಷದ ಸೇವಾ ಅನುಭವವನ್ನು ವಿಸ್ತಾರವಾಗಿ ವಿವರಿಸಿದ ಅವರು ಪ್ರತಿಯೊಂದು ಮನೆಯಲ್ಲೂ ಒಬ್ಬೊಬ್ಬ ಯೋಧ ದೇಶ ಸೇವೆಗೆ ದಾವಿಸಬೇಕು ಆಗ ದೇಶ ಬಲಿಷ್ಠವಾಗುತ್ತದೆ ನಾನು ಸೈನಿಕ ವೃತ್ತಿಯಲ್ಲಿದ್ದು ನಿವೃತ್ತನಾಗಿದ್ದು ನನ್ನ ಮಗನನ್ನು ನಾನು ಸೈನಿಕನನ್ನಾಗಿ ಮಾಡಬೇಕು ಎಂಬ ಹಂಬಲ ನನಗಿದೆ ದೇಶ ಸೇವೆಯೇ ಈಶ ಸೇವೆ ಎಂದರು.
ಈ ವೇದಿಕೆಯಲ್ಲಿ ಕೆಸ್ತೂರು ವಿಎಸ್ಎಸ್ಎನ್ ನಿರ್ದೇಶಕರಾದ ಕೆ.ಎಚ್. ಮಾರೆಗೌಡ್ರು,
ನಾರಾಯಣಪ್ಪ, ಮುಖ್ಯ ಶಿಕ್ಷಕಿ ಮಂಜುಳಾ ನಂಜೇಗೌಡ, ಹೇಮೇಂದ್ರ, ಮನು ಕುಮಾರ್ಮು, ಕೇಶ್ ನಾಗೇಶ್, ಶಿವ ಕುಮಾರ್, ಚಂದ್ರಶೇಖರ್, ಚೇತನ್ ಹಾಗೂ ಬೋಧಕ, ಬೋಧಕೇತರ ವರ್ಗ, ಅಕ್ಕಪಕ್ಕದ ಗ್ರಾಮದವರು ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…