ನಿವೃತ್ತ ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ದೇಶ ರಕ್ಷಣೆಗಾಗಿ 23 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾದ ಯೋಧನಿಗೆ ಮದಗೊಂಡನಹಳ್ಳಿ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ಕೋರಲಾಯಿತು.

ಯೋಧನಾಗಿ ಜಮ್ಮು-ಕಾಶ್ಮೀರ_ ಜೈಪುರ್ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ತನ್ನ ಗ್ರಾಮಕ್ಕೆ ಮರಳಿದ ಯೋಧನಿಗೆ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮದವರು ಶ್ರೀ ಶಕ್ತಿ ಸಂಘದ ಮಹಿಳೆಯರು, ಶಾಲಾ ಮಕ್ಕಳು ಸ್ನೇಹಿತರು ಸೇರಿ ಕಾಡನೂರು ಕೈಮರದ ಗೇಟ್‌ನಿಂದ ಬೈಕ್ ರ‌್ಯಾಲಿ ಮೂಲಕ ಪೂರ್ಣ ಕುಂಭ ಸ್ವಾಗತ ಕೋರಿ‌ ಮೆರವಣಿಗೆ ಮೂಲಕ ಊರಿಗೆ ಬರ ಮಾಡಿಕೊಂಡರು.

ವಿದ್ಯಾರ್ಥಿಗಳು ಬ್ಯಾಂಡ್ ಸೆಟ್ ಮೂಲಕ ಗ್ರಾಮಕ್ಕೆ ಕರೆತಂದ ನಂತರ ಗ್ರಾಮದ ಮುತ್ತೈದೆಯರು ಆರತಿ ಬೆಳಗಿ ಸ್ವಾಗತಿಸಿದರು.

ತಾನು ವ್ಯಾಸಂಗ ಮಾಡಿದ ಗ್ರಾಮದ ಶಾಲೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಸೈನಿಕ
ಎಂ. ಆರ್. ಶ್ರೀನಿವಾಸ್ ದೇಶ ಬಲಿಷ್ಠವಾಗಬೇಕಾದರೆ
ಸೈನ್ಯ ಬಲಿಷ್ಠವಾಗಿರಬೇಕು ಎಂದು ಹೇಳಿದರು.

ತನ್ನ 23 ವರ್ಷದ ಸೇವಾ ಅನುಭವವನ್ನು ವಿಸ್ತಾರವಾಗಿ ವಿವರಿಸಿದ ಅವರು ಪ್ರತಿಯೊಂದು ಮನೆಯಲ್ಲೂ ಒಬ್ಬೊಬ್ಬ ಯೋಧ ದೇಶ ಸೇವೆಗೆ ದಾವಿಸಬೇಕು ಆಗ ದೇಶ ಬಲಿಷ್ಠವಾಗುತ್ತದೆ ನಾನು ಸೈನಿಕ ವೃತ್ತಿಯಲ್ಲಿದ್ದು ನಿವೃತ್ತನಾಗಿದ್ದು ನನ್ನ ಮಗನನ್ನು ನಾನು ಸೈನಿಕನನ್ನಾಗಿ ಮಾಡಬೇಕು ಎಂಬ ಹಂಬಲ ನನಗಿದೆ ದೇಶ ಸೇವೆಯೇ ಈಶ ಸೇವೆ ಎಂದರು.

ಮದಗೊಂಡನಹಳ್ಳಿ ನಿವಾಸಿ ಕನಕರಾಜ್ ಮಾತನಾಡಿ ನಮ್ಮೂರಿನ ಹಿರಿಮೆ ಹೆಚ್ಚಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗಿರುವ ನಮ್ಮೂರಿನ ಬಾಲಕನೊಬ್ಬ ದೇಶ ಸೇವೆಗೆ ಆಯ್ಕೆಯಾಗಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿರುವುದು ನಮ್ಮೂರಿಗೆ ಹೆಮ್ಮೆಯ ವಿಷಯ ರೈತನ ಮಗ, ಯೋಧನಾಗಿ ಸೇವೆ ಸಲ್ಲಿಸಿದ್ದು ಜೈ ಜವಾನ್ ಜೈ ಕಿಸಾನ್ ಘೋಷಣೆಗೆ ಹಿಡಿದ ಕನ್ನಡಿ ಎಂದರು.

ಈ ವೇದಿಕೆಯಲ್ಲಿ ಕೆಸ್ತೂರು ವಿಎಸ್ಎಸ್ಎನ್ ನಿರ್ದೇಶಕರಾದ ಕೆ.ಎಚ್. ಮಾರೆಗೌಡ್ರು,
ನಾರಾಯಣಪ್ಪ, ಮುಖ್ಯ ಶಿಕ್ಷಕಿ ಮಂಜುಳಾ ನಂಜೇಗೌಡ, ಹೇಮೇಂದ್ರ, ಮನು ಕುಮಾರ್ಮು, ಕೇಶ್ ನಾಗೇಶ್, ಶಿವ ಕುಮಾರ್, ಚಂದ್ರಶೇಖರ್, ಚೇತನ್ ಹಾಗೂ ಬೋಧಕ, ಬೋಧಕೇತರ ವರ್ಗ, ಅಕ್ಕಪಕ್ಕದ ಗ್ರಾಮದವರು ಶಾಲಾ ಮಕ್ಕಳು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago