ದೇಶ ರಕ್ಷಣೆಗಾಗಿ 23 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾದ ಯೋಧನಿಗೆ ಮದಗೊಂಡನಹಳ್ಳಿ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ಕೋರಲಾಯಿತು.
ಯೋಧನಾಗಿ ಜಮ್ಮು-ಕಾಶ್ಮೀರ_ ಜೈಪುರ್ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ತನ್ನ ಗ್ರಾಮಕ್ಕೆ ಮರಳಿದ ಯೋಧನಿಗೆ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮದವರು ಶ್ರೀ ಶಕ್ತಿ ಸಂಘದ ಮಹಿಳೆಯರು, ಶಾಲಾ ಮಕ್ಕಳು ಸ್ನೇಹಿತರು ಸೇರಿ ಕಾಡನೂರು ಕೈಮರದ ಗೇಟ್ನಿಂದ ಬೈಕ್ ರ್ಯಾಲಿ ಮೂಲಕ ಪೂರ್ಣ ಕುಂಭ ಸ್ವಾಗತ ಕೋರಿ ಮೆರವಣಿಗೆ ಮೂಲಕ ಊರಿಗೆ ಬರ ಮಾಡಿಕೊಂಡರು.
ತಾನು ವ್ಯಾಸಂಗ ಮಾಡಿದ ಗ್ರಾಮದ ಶಾಲೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಸೈನಿಕ
ಎಂ. ಆರ್. ಶ್ರೀನಿವಾಸ್ ದೇಶ ಬಲಿಷ್ಠವಾಗಬೇಕಾದರೆ
ಸೈನ್ಯ ಬಲಿಷ್ಠವಾಗಿರಬೇಕು ಎಂದು ಹೇಳಿದರು.
ತನ್ನ 23 ವರ್ಷದ ಸೇವಾ ಅನುಭವವನ್ನು ವಿಸ್ತಾರವಾಗಿ ವಿವರಿಸಿದ ಅವರು ಪ್ರತಿಯೊಂದು ಮನೆಯಲ್ಲೂ ಒಬ್ಬೊಬ್ಬ ಯೋಧ ದೇಶ ಸೇವೆಗೆ ದಾವಿಸಬೇಕು ಆಗ ದೇಶ ಬಲಿಷ್ಠವಾಗುತ್ತದೆ ನಾನು ಸೈನಿಕ ವೃತ್ತಿಯಲ್ಲಿದ್ದು ನಿವೃತ್ತನಾಗಿದ್ದು ನನ್ನ ಮಗನನ್ನು ನಾನು ಸೈನಿಕನನ್ನಾಗಿ ಮಾಡಬೇಕು ಎಂಬ ಹಂಬಲ ನನಗಿದೆ ದೇಶ ಸೇವೆಯೇ ಈಶ ಸೇವೆ ಎಂದರು.
ಈ ವೇದಿಕೆಯಲ್ಲಿ ಕೆಸ್ತೂರು ವಿಎಸ್ಎಸ್ಎನ್ ನಿರ್ದೇಶಕರಾದ ಕೆ.ಎಚ್. ಮಾರೆಗೌಡ್ರು,
ನಾರಾಯಣಪ್ಪ, ಮುಖ್ಯ ಶಿಕ್ಷಕಿ ಮಂಜುಳಾ ನಂಜೇಗೌಡ, ಹೇಮೇಂದ್ರ, ಮನು ಕುಮಾರ್ಮು, ಕೇಶ್ ನಾಗೇಶ್, ಶಿವ ಕುಮಾರ್, ಚಂದ್ರಶೇಖರ್, ಚೇತನ್ ಹಾಗೂ ಬೋಧಕ, ಬೋಧಕೇತರ ವರ್ಗ, ಅಕ್ಕಪಕ್ಕದ ಗ್ರಾಮದವರು ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…