ಕಳೆದ 20ವರ್ಷಗಳಿಂದ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಹುಟ್ಟೂರಿಗೆ ಬಂದ ಯೋಧ ಅನಂತ ರಾಜಗೋಪಾಲ ಅವರಿಗೆ ಗ್ರಾಮಸ್ಥರು, ಕುಟುಂಬದವರು, ಗೆಳೆಯರು ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಭವ್ಯ ಸ್ವಾಗತ ಕೋರಿದರು.
ತೆರೆದ ವಾಹನದಲ್ಲಿ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮೂಲಕ ಕರೆ ಕರೆತರಲಾಯಿತು. ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಹಲವಾರು ಯುವಕರ ಕೈಯಲ್ಲಿ ರಾಷ್ಟ್ರ ದ್ವಜ ಹಾರಾಡುತ್ತಿತ್ತು.
ಇದು ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದ ಸಂಭ್ರಮ. ತೂಬಗೆರೆ ಗ್ರಾಮದ ವೆಂಕಟೇಶಪ್ಪ- ಶಾಂತಮ್ಮ ದಂಪತಿಯ ಪುತ್ರನಾದ ಅನಂತ ರಾಜಗೋಪಾಲ ಅವರು ಸಿಆರ್ಪಿಎಫ್ನಲ್ಲಿ ಕೋಬ್ರಾ ಕಮಾಂಡೋ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಭಾನುವಾರ ಸ್ವಗ್ರಾಮಕ್ಕೆ ಮರಳಿದ ಅವರನ್ನು ಪಶು ಆಸ್ಪತ್ರೆಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.
ಯೋಧನ ಸೇವೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿ ಗೌರವ ಸಮರ್ಪಿಸಿದರು. ಭಾರತ್ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಹೂವಿನ ಸುರಿಮಳೆಯ ಜೊತೆಗೆ ಗೋಪಾಲ ಅವರಿಗೆ ಆರತಿ ಎತ್ತಿ ಸ್ವಾಗತಿಸುವ ಮೂಲಕ ಯೋಧನಿಗೆ ಪ್ರೀತಿ, ಅಭಿಮಾನದ ಗೌರವ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.
ಅನಂತ ರಾಜಗೋಪಾಲ್ ಅವರು ಸಿಆರ್ಪಿಎಫ್ ಯೋಧನಾಗಿ ದೇಶದ ವಿವಿಧ ರಾಜ್ಯಗಳಾದ ಜಮ್ಮು -ಕಾಶ್ಮೀರ, ರಾಜಸ್ಥಾನ, ಗುಜರಾತ್, ಪಂಜಾಬ್, ಮೇಘಾಲಯ, ಮಣಿಪುರ, ತ್ರಿಪುರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚಿಗೆ ಕಮಾಂಡೋ ಸೇವೆ ಸಲ್ಲಿಸಿ ಬಿಹಾರದ ಗಯಾದಿಂದ ನಿವೃತ್ತಿ ಹೊಂದಿದರು.
ಕಾರ್ಯಕ್ರಮದಲ್ಲಿ ಮಾಜಿ ಯೋಧರಾದ ರಾಘವೇಂದ್ರ, ಮಂಜುನಾಥ್, ತೂಬಗೆರೆ ಹೋಬಳಿ, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಪಂಚಾಯಿತಿ ಸದಸ್ಯ ಕೃಷ್ಣಪ್ಪ,, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಗಂಗಾಧರ್, ರಾಮಾಂಜನಿ, ಮುಖಂಡರಾದ ಸುನಿಲ್, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…