ನಿವೃತ್ತ ಯೋಧನಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ

ಕಳೆದ 20‌ವರ್ಷಗಳಿಂದ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಹುಟ್ಟೂರಿಗೆ ಬಂದ ಯೋಧ ಅನಂತ ರಾಜಗೋಪಾಲ ಅವರಿಗೆ ಗ್ರಾಮಸ್ಥರು, ಕುಟುಂಬದವರು, ಗೆಳೆಯರು ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಭವ್ಯ ಸ್ವಾಗತ ಕೋರಿದರು.

ತೆರೆದ ವಾಹನದಲ್ಲಿ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮೂಲಕ ಕರೆ ಕರೆತರಲಾಯಿತು. ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಹಲವಾರು ಯುವಕರ ಕೈಯಲ್ಲಿ ರಾಷ್ಟ್ರ ದ್ವಜ ಹಾರಾಡುತ್ತಿತ್ತು.

ಇದು ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದ ಸಂಭ್ರಮ. ತೂಬಗೆರೆ ಗ್ರಾಮದ ವೆಂಕಟೇಶಪ್ಪ- ಶಾಂತಮ್ಮ ದಂಪತಿಯ ಪುತ್ರನಾದ ಅನಂತ ರಾಜಗೋಪಾಲ ಅವರು ಸಿಆರ್‌ಪಿಎಫ್‌ನಲ್ಲಿ ಕೋಬ್ರಾ ಕಮಾಂಡೋ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಭಾನುವಾರ ಸ್ವಗ್ರಾಮಕ್ಕೆ‌ ಮರಳಿದ‌ ಅವರನ್ನು ಪಶು ಆಸ್ಪತ್ರೆಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ‌ ಕರೆತರಲಾಯಿತು.

ಮಗನನ್ನು ಸ್ವಾಗತಿಸಲು ತಂದೆ, ತಾಯಿ, ಸಹೋದರಿಯರು, ಮಕ್ಕಳು ಸೇರಿದಂತೆ ಕುಟುಂಬದವರು, ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗೆಳೆಯರ ಬಳಗವೇ ತ್ರಿವರ್ಣ ಧ್ವಜಗಳನ್ನು ಹಿಡಿದು ಹಾರ ತುರಾಯಿಗಳಿಂದ ಬರಮಾಡಿಕೊಂಡರು.

ಯೋಧನ ಸೇವೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿ ಗೌರವ ಸಮರ್ಪಿಸಿದರು. ಭಾರತ್‌ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಹೂವಿನ ಸುರಿಮಳೆಯ ಜೊತೆಗೆ ಗೋಪಾಲ ಅವರಿಗೆ ಆರತಿ ಎತ್ತಿ ಸ್ವಾಗತಿಸುವ ಮೂಲಕ ಯೋಧನಿಗೆ ಪ್ರೀತಿ, ಅಭಿಮಾನದ ಗೌರವ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.

ಅನಂತ ರಾಜಗೋಪಾಲ್ ಅವರು ಸಿಆರ್‌ಪಿಎಫ್ ಯೋಧನಾಗಿ ದೇಶದ ವಿವಿಧ ರಾಜ್ಯಗಳಾದ ಜಮ್ಮು -ಕಾಶ್ಮೀರ, ರಾಜಸ್ಥಾನ, ಗುಜರಾತ್, ಪಂಜಾಬ್, ಮೇಘಾಲಯ, ಮಣಿಪುರ, ತ್ರಿಪುರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚಿಗೆ ಕಮಾಂಡೋ ಸೇವೆ ಸಲ್ಲಿಸಿ ಬಿಹಾರದ ಗಯಾದಿಂದ ನಿವೃತ್ತಿ ಹೊಂದಿದರು.

ಕಾರ್ಯಕ್ರಮದಲ್ಲಿ ಮಾಜಿ ಯೋಧರಾದ ರಾಘವೇಂದ್ರ, ಮಂಜುನಾಥ್, ತೂಬಗೆರೆ ಹೋಬಳಿ, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಪಂಚಾಯಿತಿ ಸದಸ್ಯ ಕೃಷ್ಣಪ್ಪ,, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಗಂಗಾಧರ್, ರಾಮಾಂಜನಿ, ಮುಖಂಡರಾದ ಸುನಿಲ್, ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago