ನಿವೃತ್ತ ಯೋಧನಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ

ಕಳೆದ 20‌ವರ್ಷಗಳಿಂದ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಹುಟ್ಟೂರಿಗೆ ಬಂದ ಯೋಧ ಅನಂತ ರಾಜಗೋಪಾಲ ಅವರಿಗೆ ಗ್ರಾಮಸ್ಥರು, ಕುಟುಂಬದವರು, ಗೆಳೆಯರು ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಭವ್ಯ ಸ್ವಾಗತ ಕೋರಿದರು.

ತೆರೆದ ವಾಹನದಲ್ಲಿ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮೂಲಕ ಕರೆ ಕರೆತರಲಾಯಿತು. ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಹಲವಾರು ಯುವಕರ ಕೈಯಲ್ಲಿ ರಾಷ್ಟ್ರ ದ್ವಜ ಹಾರಾಡುತ್ತಿತ್ತು.

ಇದು ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದ ಸಂಭ್ರಮ. ತೂಬಗೆರೆ ಗ್ರಾಮದ ವೆಂಕಟೇಶಪ್ಪ- ಶಾಂತಮ್ಮ ದಂಪತಿಯ ಪುತ್ರನಾದ ಅನಂತ ರಾಜಗೋಪಾಲ ಅವರು ಸಿಆರ್‌ಪಿಎಫ್‌ನಲ್ಲಿ ಕೋಬ್ರಾ ಕಮಾಂಡೋ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಭಾನುವಾರ ಸ್ವಗ್ರಾಮಕ್ಕೆ‌ ಮರಳಿದ‌ ಅವರನ್ನು ಪಶು ಆಸ್ಪತ್ರೆಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ‌ ಕರೆತರಲಾಯಿತು.

ಮಗನನ್ನು ಸ್ವಾಗತಿಸಲು ತಂದೆ, ತಾಯಿ, ಸಹೋದರಿಯರು, ಮಕ್ಕಳು ಸೇರಿದಂತೆ ಕುಟುಂಬದವರು, ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗೆಳೆಯರ ಬಳಗವೇ ತ್ರಿವರ್ಣ ಧ್ವಜಗಳನ್ನು ಹಿಡಿದು ಹಾರ ತುರಾಯಿಗಳಿಂದ ಬರಮಾಡಿಕೊಂಡರು.

ಯೋಧನ ಸೇವೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿ ಗೌರವ ಸಮರ್ಪಿಸಿದರು. ಭಾರತ್‌ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಹೂವಿನ ಸುರಿಮಳೆಯ ಜೊತೆಗೆ ಗೋಪಾಲ ಅವರಿಗೆ ಆರತಿ ಎತ್ತಿ ಸ್ವಾಗತಿಸುವ ಮೂಲಕ ಯೋಧನಿಗೆ ಪ್ರೀತಿ, ಅಭಿಮಾನದ ಗೌರವ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.

ಅನಂತ ರಾಜಗೋಪಾಲ್ ಅವರು ಸಿಆರ್‌ಪಿಎಫ್ ಯೋಧನಾಗಿ ದೇಶದ ವಿವಿಧ ರಾಜ್ಯಗಳಾದ ಜಮ್ಮು -ಕಾಶ್ಮೀರ, ರಾಜಸ್ಥಾನ, ಗುಜರಾತ್, ಪಂಜಾಬ್, ಮೇಘಾಲಯ, ಮಣಿಪುರ, ತ್ರಿಪುರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚಿಗೆ ಕಮಾಂಡೋ ಸೇವೆ ಸಲ್ಲಿಸಿ ಬಿಹಾರದ ಗಯಾದಿಂದ ನಿವೃತ್ತಿ ಹೊಂದಿದರು.

ಕಾರ್ಯಕ್ರಮದಲ್ಲಿ ಮಾಜಿ ಯೋಧರಾದ ರಾಘವೇಂದ್ರ, ಮಂಜುನಾಥ್, ತೂಬಗೆರೆ ಹೋಬಳಿ, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಪಂಚಾಯಿತಿ ಸದಸ್ಯ ಕೃಷ್ಣಪ್ಪ,, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಗಂಗಾಧರ್, ರಾಮಾಂಜನಿ, ಮುಖಂಡರಾದ ಸುನಿಲ್, ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

6 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

8 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

20 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

21 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

24 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

24 hours ago