ಕಳೆದ 20ವರ್ಷಗಳಿಂದ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಹುಟ್ಟೂರಿಗೆ ಬಂದ ಯೋಧ ಅನಂತ ರಾಜಗೋಪಾಲ ಅವರಿಗೆ ಗ್ರಾಮಸ್ಥರು, ಕುಟುಂಬದವರು, ಗೆಳೆಯರು ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಭವ್ಯ ಸ್ವಾಗತ ಕೋರಿದರು.
ತೆರೆದ ವಾಹನದಲ್ಲಿ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮೂಲಕ ಕರೆ ಕರೆತರಲಾಯಿತು. ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಹಲವಾರು ಯುವಕರ ಕೈಯಲ್ಲಿ ರಾಷ್ಟ್ರ ದ್ವಜ ಹಾರಾಡುತ್ತಿತ್ತು.
ಇದು ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದ ಸಂಭ್ರಮ. ತೂಬಗೆರೆ ಗ್ರಾಮದ ವೆಂಕಟೇಶಪ್ಪ- ಶಾಂತಮ್ಮ ದಂಪತಿಯ ಪುತ್ರನಾದ ಅನಂತ ರಾಜಗೋಪಾಲ ಅವರು ಸಿಆರ್ಪಿಎಫ್ನಲ್ಲಿ ಕೋಬ್ರಾ ಕಮಾಂಡೋ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಭಾನುವಾರ ಸ್ವಗ್ರಾಮಕ್ಕೆ ಮರಳಿದ ಅವರನ್ನು ಪಶು ಆಸ್ಪತ್ರೆಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.
ಯೋಧನ ಸೇವೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿ ಗೌರವ ಸಮರ್ಪಿಸಿದರು. ಭಾರತ್ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಹೂವಿನ ಸುರಿಮಳೆಯ ಜೊತೆಗೆ ಗೋಪಾಲ ಅವರಿಗೆ ಆರತಿ ಎತ್ತಿ ಸ್ವಾಗತಿಸುವ ಮೂಲಕ ಯೋಧನಿಗೆ ಪ್ರೀತಿ, ಅಭಿಮಾನದ ಗೌರವ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.
ಅನಂತ ರಾಜಗೋಪಾಲ್ ಅವರು ಸಿಆರ್ಪಿಎಫ್ ಯೋಧನಾಗಿ ದೇಶದ ವಿವಿಧ ರಾಜ್ಯಗಳಾದ ಜಮ್ಮು -ಕಾಶ್ಮೀರ, ರಾಜಸ್ಥಾನ, ಗುಜರಾತ್, ಪಂಜಾಬ್, ಮೇಘಾಲಯ, ಮಣಿಪುರ, ತ್ರಿಪುರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚಿಗೆ ಕಮಾಂಡೋ ಸೇವೆ ಸಲ್ಲಿಸಿ ಬಿಹಾರದ ಗಯಾದಿಂದ ನಿವೃತ್ತಿ ಹೊಂದಿದರು.
ಕಾರ್ಯಕ್ರಮದಲ್ಲಿ ಮಾಜಿ ಯೋಧರಾದ ರಾಘವೇಂದ್ರ, ಮಂಜುನಾಥ್, ತೂಬಗೆರೆ ಹೋಬಳಿ, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಪಂಚಾಯಿತಿ ಸದಸ್ಯ ಕೃಷ್ಣಪ್ಪ,, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಗಂಗಾಧರ್, ರಾಮಾಂಜನಿ, ಮುಖಂಡರಾದ ಸುನಿಲ್, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…