ಕಳೆದ 20ವರ್ಷಗಳಿಂದ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಹುಟ್ಟೂರಿಗೆ ಬಂದ ಯೋಧ ಅನಂತ ರಾಜಗೋಪಾಲ ಅವರಿಗೆ ಗ್ರಾಮಸ್ಥರು, ಕುಟುಂಬದವರು, ಗೆಳೆಯರು ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಭವ್ಯ ಸ್ವಾಗತ ಕೋರಿದರು.
ತೆರೆದ ವಾಹನದಲ್ಲಿ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮೂಲಕ ಕರೆ ಕರೆತರಲಾಯಿತು. ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಹಲವಾರು ಯುವಕರ ಕೈಯಲ್ಲಿ ರಾಷ್ಟ್ರ ದ್ವಜ ಹಾರಾಡುತ್ತಿತ್ತು.
ಇದು ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದ ಸಂಭ್ರಮ. ತೂಬಗೆರೆ ಗ್ರಾಮದ ವೆಂಕಟೇಶಪ್ಪ- ಶಾಂತಮ್ಮ ದಂಪತಿಯ ಪುತ್ರನಾದ ಅನಂತ ರಾಜಗೋಪಾಲ ಅವರು ಸಿಆರ್ಪಿಎಫ್ನಲ್ಲಿ ಕೋಬ್ರಾ ಕಮಾಂಡೋ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಭಾನುವಾರ ಸ್ವಗ್ರಾಮಕ್ಕೆ ಮರಳಿದ ಅವರನ್ನು ಪಶು ಆಸ್ಪತ್ರೆಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.
ಯೋಧನ ಸೇವೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿ ಗೌರವ ಸಮರ್ಪಿಸಿದರು. ಭಾರತ್ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಹೂವಿನ ಸುರಿಮಳೆಯ ಜೊತೆಗೆ ಗೋಪಾಲ ಅವರಿಗೆ ಆರತಿ ಎತ್ತಿ ಸ್ವಾಗತಿಸುವ ಮೂಲಕ ಯೋಧನಿಗೆ ಪ್ರೀತಿ, ಅಭಿಮಾನದ ಗೌರವ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.
ಅನಂತ ರಾಜಗೋಪಾಲ್ ಅವರು ಸಿಆರ್ಪಿಎಫ್ ಯೋಧನಾಗಿ ದೇಶದ ವಿವಿಧ ರಾಜ್ಯಗಳಾದ ಜಮ್ಮು -ಕಾಶ್ಮೀರ, ರಾಜಸ್ಥಾನ, ಗುಜರಾತ್, ಪಂಜಾಬ್, ಮೇಘಾಲಯ, ಮಣಿಪುರ, ತ್ರಿಪುರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚಿಗೆ ಕಮಾಂಡೋ ಸೇವೆ ಸಲ್ಲಿಸಿ ಬಿಹಾರದ ಗಯಾದಿಂದ ನಿವೃತ್ತಿ ಹೊಂದಿದರು.
ಕಾರ್ಯಕ್ರಮದಲ್ಲಿ ಮಾಜಿ ಯೋಧರಾದ ರಾಘವೇಂದ್ರ, ಮಂಜುನಾಥ್, ತೂಬಗೆರೆ ಹೋಬಳಿ, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಪಂಚಾಯಿತಿ ಸದಸ್ಯ ಕೃಷ್ಣಪ್ಪ,, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಗಂಗಾಧರ್, ರಾಮಾಂಜನಿ, ಮುಖಂಡರಾದ ಸುನಿಲ್, ಗ್ರಾಮಸ್ಥರು ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…