ಕಳೆದ 20ವರ್ಷಗಳಿಂದ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಹುಟ್ಟೂರಿಗೆ ಬಂದ ಯೋಧ ಅನಂತ ರಾಜಗೋಪಾಲ ಅವರಿಗೆ ಗ್ರಾಮಸ್ಥರು, ಕುಟುಂಬದವರು, ಗೆಳೆಯರು ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಭವ್ಯ ಸ್ವಾಗತ ಕೋರಿದರು.
ತೆರೆದ ವಾಹನದಲ್ಲಿ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮೂಲಕ ಕರೆ ಕರೆತರಲಾಯಿತು. ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಹಲವಾರು ಯುವಕರ ಕೈಯಲ್ಲಿ ರಾಷ್ಟ್ರ ದ್ವಜ ಹಾರಾಡುತ್ತಿತ್ತು.
ಇದು ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದ ಸಂಭ್ರಮ. ತೂಬಗೆರೆ ಗ್ರಾಮದ ವೆಂಕಟೇಶಪ್ಪ- ಶಾಂತಮ್ಮ ದಂಪತಿಯ ಪುತ್ರನಾದ ಅನಂತ ರಾಜಗೋಪಾಲ ಅವರು ಸಿಆರ್ಪಿಎಫ್ನಲ್ಲಿ ಕೋಬ್ರಾ ಕಮಾಂಡೋ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಭಾನುವಾರ ಸ್ವಗ್ರಾಮಕ್ಕೆ ಮರಳಿದ ಅವರನ್ನು ಪಶು ಆಸ್ಪತ್ರೆಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.
ಯೋಧನ ಸೇವೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿ ಗೌರವ ಸಮರ್ಪಿಸಿದರು. ಭಾರತ್ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಹೂವಿನ ಸುರಿಮಳೆಯ ಜೊತೆಗೆ ಗೋಪಾಲ ಅವರಿಗೆ ಆರತಿ ಎತ್ತಿ ಸ್ವಾಗತಿಸುವ ಮೂಲಕ ಯೋಧನಿಗೆ ಪ್ರೀತಿ, ಅಭಿಮಾನದ ಗೌರವ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.
ಅನಂತ ರಾಜಗೋಪಾಲ್ ಅವರು ಸಿಆರ್ಪಿಎಫ್ ಯೋಧನಾಗಿ ದೇಶದ ವಿವಿಧ ರಾಜ್ಯಗಳಾದ ಜಮ್ಮು -ಕಾಶ್ಮೀರ, ರಾಜಸ್ಥಾನ, ಗುಜರಾತ್, ಪಂಜಾಬ್, ಮೇಘಾಲಯ, ಮಣಿಪುರ, ತ್ರಿಪುರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚಿಗೆ ಕಮಾಂಡೋ ಸೇವೆ ಸಲ್ಲಿಸಿ ಬಿಹಾರದ ಗಯಾದಿಂದ ನಿವೃತ್ತಿ ಹೊಂದಿದರು.
ಕಾರ್ಯಕ್ರಮದಲ್ಲಿ ಮಾಜಿ ಯೋಧರಾದ ರಾಘವೇಂದ್ರ, ಮಂಜುನಾಥ್, ತೂಬಗೆರೆ ಹೋಬಳಿ, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಪಂಚಾಯಿತಿ ಸದಸ್ಯ ಕೃಷ್ಣಪ್ಪ,, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಗಂಗಾಧರ್, ರಾಮಾಂಜನಿ, ಮುಖಂಡರಾದ ಸುನಿಲ್, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…