ನಿವೃತ್ತ ಯೋಧನಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ

ಕಳೆದ 20‌ವರ್ಷಗಳಿಂದ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಹುಟ್ಟೂರಿಗೆ ಬಂದ ಯೋಧ ಅನಂತ ರಾಜಗೋಪಾಲ ಅವರಿಗೆ ಗ್ರಾಮಸ್ಥರು, ಕುಟುಂಬದವರು, ಗೆಳೆಯರು ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಭವ್ಯ ಸ್ವಾಗತ ಕೋರಿದರು.

ತೆರೆದ ವಾಹನದಲ್ಲಿ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮೂಲಕ ಕರೆ ಕರೆತರಲಾಯಿತು. ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಹಲವಾರು ಯುವಕರ ಕೈಯಲ್ಲಿ ರಾಷ್ಟ್ರ ದ್ವಜ ಹಾರಾಡುತ್ತಿತ್ತು.

ಇದು ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದ ಸಂಭ್ರಮ. ತೂಬಗೆರೆ ಗ್ರಾಮದ ವೆಂಕಟೇಶಪ್ಪ- ಶಾಂತಮ್ಮ ದಂಪತಿಯ ಪುತ್ರನಾದ ಅನಂತ ರಾಜಗೋಪಾಲ ಅವರು ಸಿಆರ್‌ಪಿಎಫ್‌ನಲ್ಲಿ ಕೋಬ್ರಾ ಕಮಾಂಡೋ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಭಾನುವಾರ ಸ್ವಗ್ರಾಮಕ್ಕೆ‌ ಮರಳಿದ‌ ಅವರನ್ನು ಪಶು ಆಸ್ಪತ್ರೆಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ‌ ಕರೆತರಲಾಯಿತು.

ಮಗನನ್ನು ಸ್ವಾಗತಿಸಲು ತಂದೆ, ತಾಯಿ, ಸಹೋದರಿಯರು, ಮಕ್ಕಳು ಸೇರಿದಂತೆ ಕುಟುಂಬದವರು, ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗೆಳೆಯರ ಬಳಗವೇ ತ್ರಿವರ್ಣ ಧ್ವಜಗಳನ್ನು ಹಿಡಿದು ಹಾರ ತುರಾಯಿಗಳಿಂದ ಬರಮಾಡಿಕೊಂಡರು.

ಯೋಧನ ಸೇವೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿ ಗೌರವ ಸಮರ್ಪಿಸಿದರು. ಭಾರತ್‌ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಹೂವಿನ ಸುರಿಮಳೆಯ ಜೊತೆಗೆ ಗೋಪಾಲ ಅವರಿಗೆ ಆರತಿ ಎತ್ತಿ ಸ್ವಾಗತಿಸುವ ಮೂಲಕ ಯೋಧನಿಗೆ ಪ್ರೀತಿ, ಅಭಿಮಾನದ ಗೌರವ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.

ಅನಂತ ರಾಜಗೋಪಾಲ್ ಅವರು ಸಿಆರ್‌ಪಿಎಫ್ ಯೋಧನಾಗಿ ದೇಶದ ವಿವಿಧ ರಾಜ್ಯಗಳಾದ ಜಮ್ಮು -ಕಾಶ್ಮೀರ, ರಾಜಸ್ಥಾನ, ಗುಜರಾತ್, ಪಂಜಾಬ್, ಮೇಘಾಲಯ, ಮಣಿಪುರ, ತ್ರಿಪುರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚಿಗೆ ಕಮಾಂಡೋ ಸೇವೆ ಸಲ್ಲಿಸಿ ಬಿಹಾರದ ಗಯಾದಿಂದ ನಿವೃತ್ತಿ ಹೊಂದಿದರು.

ಕಾರ್ಯಕ್ರಮದಲ್ಲಿ ಮಾಜಿ ಯೋಧರಾದ ರಾಘವೇಂದ್ರ, ಮಂಜುನಾಥ್, ತೂಬಗೆರೆ ಹೋಬಳಿ, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಪಂಚಾಯಿತಿ ಸದಸ್ಯ ಕೃಷ್ಣಪ್ಪ,, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಗಂಗಾಧರ್, ರಾಮಾಂಜನಿ, ಮುಖಂಡರಾದ ಸುನಿಲ್, ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago