ಕಳೆದ 20ವರ್ಷಗಳಿಂದ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಹುಟ್ಟೂರಿಗೆ ಬಂದ ಯೋಧ ಅನಂತ ರಾಜಗೋಪಾಲ ಅವರಿಗೆ ಗ್ರಾಮಸ್ಥರು, ಕುಟುಂಬದವರು, ಗೆಳೆಯರು ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಭವ್ಯ ಸ್ವಾಗತ ಕೋರಿದರು.
ತೆರೆದ ವಾಹನದಲ್ಲಿ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮೂಲಕ ಕರೆ ಕರೆತರಲಾಯಿತು. ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಹಲವಾರು ಯುವಕರ ಕೈಯಲ್ಲಿ ರಾಷ್ಟ್ರ ದ್ವಜ ಹಾರಾಡುತ್ತಿತ್ತು.
ಇದು ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದ ಸಂಭ್ರಮ. ತೂಬಗೆರೆ ಗ್ರಾಮದ ವೆಂಕಟೇಶಪ್ಪ- ಶಾಂತಮ್ಮ ದಂಪತಿಯ ಪುತ್ರನಾದ ಅನಂತ ರಾಜಗೋಪಾಲ ಅವರು ಸಿಆರ್ಪಿಎಫ್ನಲ್ಲಿ ಕೋಬ್ರಾ ಕಮಾಂಡೋ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಭಾನುವಾರ ಸ್ವಗ್ರಾಮಕ್ಕೆ ಮರಳಿದ ಅವರನ್ನು ಪಶು ಆಸ್ಪತ್ರೆಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.
ಯೋಧನ ಸೇವೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿ ಗೌರವ ಸಮರ್ಪಿಸಿದರು. ಭಾರತ್ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಹೂವಿನ ಸುರಿಮಳೆಯ ಜೊತೆಗೆ ಗೋಪಾಲ ಅವರಿಗೆ ಆರತಿ ಎತ್ತಿ ಸ್ವಾಗತಿಸುವ ಮೂಲಕ ಯೋಧನಿಗೆ ಪ್ರೀತಿ, ಅಭಿಮಾನದ ಗೌರವ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.
ಅನಂತ ರಾಜಗೋಪಾಲ್ ಅವರು ಸಿಆರ್ಪಿಎಫ್ ಯೋಧನಾಗಿ ದೇಶದ ವಿವಿಧ ರಾಜ್ಯಗಳಾದ ಜಮ್ಮು -ಕಾಶ್ಮೀರ, ರಾಜಸ್ಥಾನ, ಗುಜರಾತ್, ಪಂಜಾಬ್, ಮೇಘಾಲಯ, ಮಣಿಪುರ, ತ್ರಿಪುರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚಿಗೆ ಕಮಾಂಡೋ ಸೇವೆ ಸಲ್ಲಿಸಿ ಬಿಹಾರದ ಗಯಾದಿಂದ ನಿವೃತ್ತಿ ಹೊಂದಿದರು.
ಕಾರ್ಯಕ್ರಮದಲ್ಲಿ ಮಾಜಿ ಯೋಧರಾದ ರಾಘವೇಂದ್ರ, ಮಂಜುನಾಥ್, ತೂಬಗೆರೆ ಹೋಬಳಿ, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಪಂಚಾಯಿತಿ ಸದಸ್ಯ ಕೃಷ್ಣಪ್ಪ,, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಗಂಗಾಧರ್, ರಾಮಾಂಜನಿ, ಮುಖಂಡರಾದ ಸುನಿಲ್, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…