ಕಳೆದ 20ವರ್ಷಗಳಿಂದ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಹುಟ್ಟೂರಿಗೆ ಬಂದ ಯೋಧ ಅನಂತ ರಾಜಗೋಪಾಲ ಅವರಿಗೆ ಗ್ರಾಮಸ್ಥರು, ಕುಟುಂಬದವರು, ಗೆಳೆಯರು ಪಟಾಕಿ ಸಿಡಿಸಿ, ಹೂವಿನ ಮಳೆಗರೆದು ಭವ್ಯ ಸ್ವಾಗತ ಕೋರಿದರು.
ತೆರೆದ ವಾಹನದಲ್ಲಿ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಮೂಲಕ ಕರೆ ಕರೆತರಲಾಯಿತು. ಭಾರತ್ ಮಾತಾಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಹಲವಾರು ಯುವಕರ ಕೈಯಲ್ಲಿ ರಾಷ್ಟ್ರ ದ್ವಜ ಹಾರಾಡುತ್ತಿತ್ತು.
ಇದು ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದ ಸಂಭ್ರಮ. ತೂಬಗೆರೆ ಗ್ರಾಮದ ವೆಂಕಟೇಶಪ್ಪ- ಶಾಂತಮ್ಮ ದಂಪತಿಯ ಪುತ್ರನಾದ ಅನಂತ ರಾಜಗೋಪಾಲ ಅವರು ಸಿಆರ್ಪಿಎಫ್ನಲ್ಲಿ ಕೋಬ್ರಾ ಕಮಾಂಡೋ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಭಾನುವಾರ ಸ್ವಗ್ರಾಮಕ್ಕೆ ಮರಳಿದ ಅವರನ್ನು ಪಶು ಆಸ್ಪತ್ರೆಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.
ಯೋಧನ ಸೇವೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿ ಗೌರವ ಸಮರ್ಪಿಸಿದರು. ಭಾರತ್ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಹೂವಿನ ಸುರಿಮಳೆಯ ಜೊತೆಗೆ ಗೋಪಾಲ ಅವರಿಗೆ ಆರತಿ ಎತ್ತಿ ಸ್ವಾಗತಿಸುವ ಮೂಲಕ ಯೋಧನಿಗೆ ಪ್ರೀತಿ, ಅಭಿಮಾನದ ಗೌರವ ಸಲ್ಲಿಸಿ ಮೆರವಣಿಗೆ ಮಾಡಲಾಯಿತು.
ಅನಂತ ರಾಜಗೋಪಾಲ್ ಅವರು ಸಿಆರ್ಪಿಎಫ್ ಯೋಧನಾಗಿ ದೇಶದ ವಿವಿಧ ರಾಜ್ಯಗಳಾದ ಜಮ್ಮು -ಕಾಶ್ಮೀರ, ರಾಜಸ್ಥಾನ, ಗುಜರಾತ್, ಪಂಜಾಬ್, ಮೇಘಾಲಯ, ಮಣಿಪುರ, ತ್ರಿಪುರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತೀಚಿಗೆ ಕಮಾಂಡೋ ಸೇವೆ ಸಲ್ಲಿಸಿ ಬಿಹಾರದ ಗಯಾದಿಂದ ನಿವೃತ್ತಿ ಹೊಂದಿದರು.
ಕಾರ್ಯಕ್ರಮದಲ್ಲಿ ಮಾಜಿ ಯೋಧರಾದ ರಾಘವೇಂದ್ರ, ಮಂಜುನಾಥ್, ತೂಬಗೆರೆ ಹೋಬಳಿ, ಹಿತರಕ್ಷಣಾ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಪಂಚಾಯಿತಿ ಸದಸ್ಯ ಕೃಷ್ಣಪ್ಪ,, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಗಂಗಾಧರ್, ರಾಮಾಂಜನಿ, ಮುಖಂಡರಾದ ಸುನಿಲ್, ಗ್ರಾಮಸ್ಥರು ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…