ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನಗಳ ಹಂಚಿಕೆ ಹಾಗೂ ಗೋಮಾಳ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ತಾಲೂಕಿನ ಮೇಲಿನ ಜೂಗಾನಹಳ್ಳಿ, ಗುಂಜೂರು, ಕೆಳಗಿನಜೂಗಾನಹಳ್ಳಿ, ಮಾಕಳಿ ಗ್ರಾಮಗಳ ನಿವೇಶನರಹಿತರು ತಹಶೀಲ್ದಾರ್ ಕಚೇರಿ ಬಳಿ ಧರಣಿ ನಡೆಸಿದರು.
ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೇಲಿನ ಜೂಗಾನಹಳ್ಳಿ ಸರ್ವೇ ನಂ.33 ರಲ್ಲಿ ಎಂಟು ಎಕರೆ ಗೋಮಾಳ ಜಮೀನಿದ್ದು, ನಿವೇಶನರಹಿತರಿಗೆ ಹಂಚಿಕೆ ಮಾಡಬೇಕು. ಇದಕ್ಕೆ ಹೊಂದಿಕೊಂಡ ಸರ್ವೇ ನಂಬರ್ ಜಾಗದಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿಯಿದ್ದು, ಬಲಾಢ್ಯರ ಕಣ್ಣು ಬಿದ್ದಿದೆ.
ಖಾಸಗಿ ರೆಸಾರ್ಟ್ ಮಾಲೀಕರೊಬ್ಬರು ಈಗಾಗಲೇ 30 ಗುಂಟೆ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಒತ್ತುವರಿ ತೆರವುಗೊಳಿಸಿ, ನಿವೇಶನರಹಿತರಿಗೆ ಹಂಚಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಭೂಮಿಯಲ್ಲಿ ಆಶ್ರಯ ಯೋಜನೆ ಫಲಾನುಭವಿಗಳಿಗೆ ಗುರುತಿಸಿದ ಜಮೀನು ಎಂಬ ನಾಮಫಲಕವನ್ನು ನಾಲ್ಕೂ ಗ್ರಾಮಸ್ಥರು ಹಾಕಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದ ಅಧಿಕಾರಿಗಳು ನಾಮಫಲಕ ತೆರವಿಗೆ ಮುಂದಾಗಿದ್ದಾರೆ. ಹಾಗಾಗಿ ತಕ್ಷಣವೇ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ತಹಶೀಲ್ದಾರ್ ಮೋಹನಕುಮಾರಿ ಅವರು ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿ ಶೀಘ್ರ ನಿವೇಶನ ಹಂಚುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಕೀಲ ಪ್ರತಾಪ್ ಆರ್, ಕರ್ನಾಟಕ ರಾಷ್ಟ್ರ ಸಮಿತಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್, ವೆಂಕಟೇಶ್, ಮಾಲಾಶ್ರೀ, ಗೋಪಾಲಕೃಷ್ಣ,ಶಿವಕುಮಾರ್ ಇತರರು ಇದ್ದರು.
ಆಶ್ರಯ ನಿವೇಶನಗಳಿಗೆ 150 ಎಕರೆ ಗುರುತು
ತಾಲೂಕಿನಲ್ಲಿ 150 ಎಕರೆ ಸರ್ಕಾರಿ ಭೂಮಿಯನ್ನು ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆಗೆ ಮಿಸಲಿಡಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಹೇಳಿದರು.
ಮಧುರೆ ಹೋಬಳಿಯಲ್ಲಿ 50 ಎಕರೆ, ತೂಬಗೆರೆ ಹೋಬಳಿಯಲ್ಲಿ 35 ಎಕರೆ ಸೇರಿದಂತೆ ಎಲ್ಲ ಹೋಬಳಿಗಳಲ್ಲಿ ಜಾಗ ಗುರುತಿಸಲಾಗಿದೆ.
ಗ್ರಾಮ ಪಂಚಾಯ್ತಿವಾರು ನಿವೇಶನರಹಿತರ ಮಾಹಿತಿ ಪಡೆದು ನಾಲ್ಕು ದಿನಗಳಲ್ಲಿ ಸಲ್ಲಿಸುವಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಲಾಗಿದೆ. ವರದಿ ಬಂದ ಕೂಡಲೇ ಸ್ಕೆಚ್ ಮಾಡಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಗೋಮಾಳ ಒತ್ತುವರಿಯಾಗಿದ್ದರೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಬಗರ್ ಹುಕುಂನಲ್ಲಿ ಫಾರಂ 57ರಡಿ ಅರ್ಜಿ ಹಾಕಿದ್ದರೆ ಮಾತ್ರ ಸಾಗುವಳಿಗೆ ಅವಕಾಶ ನೀಡಬಹುದು ಎಂದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…