ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನಗಳ ಹಂಚಿಕೆ ಹಾಗೂ ಗೋಮಾಳ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ತಾಲೂಕಿನ ಮೇಲಿನ ಜೂಗಾನಹಳ್ಳಿ, ಗುಂಜೂರು, ಕೆಳಗಿನಜೂಗಾನಹಳ್ಳಿ, ಮಾಕಳಿ ಗ್ರಾಮಗಳ ನಿವೇಶನರಹಿತರು ತಹಶೀಲ್ದಾರ್ ಕಚೇರಿ ಬಳಿ ಧರಣಿ ನಡೆಸಿದರು.
ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೇಲಿನ ಜೂಗಾನಹಳ್ಳಿ ಸರ್ವೇ ನಂ.33 ರಲ್ಲಿ ಎಂಟು ಎಕರೆ ಗೋಮಾಳ ಜಮೀನಿದ್ದು, ನಿವೇಶನರಹಿತರಿಗೆ ಹಂಚಿಕೆ ಮಾಡಬೇಕು. ಇದಕ್ಕೆ ಹೊಂದಿಕೊಂಡ ಸರ್ವೇ ನಂಬರ್ ಜಾಗದಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿಯಿದ್ದು, ಬಲಾಢ್ಯರ ಕಣ್ಣು ಬಿದ್ದಿದೆ.
ಖಾಸಗಿ ರೆಸಾರ್ಟ್ ಮಾಲೀಕರೊಬ್ಬರು ಈಗಾಗಲೇ 30 ಗುಂಟೆ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಒತ್ತುವರಿ ತೆರವುಗೊಳಿಸಿ, ನಿವೇಶನರಹಿತರಿಗೆ ಹಂಚಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಭೂಮಿಯಲ್ಲಿ ಆಶ್ರಯ ಯೋಜನೆ ಫಲಾನುಭವಿಗಳಿಗೆ ಗುರುತಿಸಿದ ಜಮೀನು ಎಂಬ ನಾಮಫಲಕವನ್ನು ನಾಲ್ಕೂ ಗ್ರಾಮಸ್ಥರು ಹಾಕಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದ ಅಧಿಕಾರಿಗಳು ನಾಮಫಲಕ ತೆರವಿಗೆ ಮುಂದಾಗಿದ್ದಾರೆ. ಹಾಗಾಗಿ ತಕ್ಷಣವೇ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ತಹಶೀಲ್ದಾರ್ ಮೋಹನಕುಮಾರಿ ಅವರು ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿ ಶೀಘ್ರ ನಿವೇಶನ ಹಂಚುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಕೀಲ ಪ್ರತಾಪ್ ಆರ್, ಕರ್ನಾಟಕ ರಾಷ್ಟ್ರ ಸಮಿತಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್, ವೆಂಕಟೇಶ್, ಮಾಲಾಶ್ರೀ, ಗೋಪಾಲಕೃಷ್ಣ,ಶಿವಕುಮಾರ್ ಇತರರು ಇದ್ದರು.
ಆಶ್ರಯ ನಿವೇಶನಗಳಿಗೆ 150 ಎಕರೆ ಗುರುತು
ತಾಲೂಕಿನಲ್ಲಿ 150 ಎಕರೆ ಸರ್ಕಾರಿ ಭೂಮಿಯನ್ನು ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆಗೆ ಮಿಸಲಿಡಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಹೇಳಿದರು.
ಮಧುರೆ ಹೋಬಳಿಯಲ್ಲಿ 50 ಎಕರೆ, ತೂಬಗೆರೆ ಹೋಬಳಿಯಲ್ಲಿ 35 ಎಕರೆ ಸೇರಿದಂತೆ ಎಲ್ಲ ಹೋಬಳಿಗಳಲ್ಲಿ ಜಾಗ ಗುರುತಿಸಲಾಗಿದೆ.
ಗ್ರಾಮ ಪಂಚಾಯ್ತಿವಾರು ನಿವೇಶನರಹಿತರ ಮಾಹಿತಿ ಪಡೆದು ನಾಲ್ಕು ದಿನಗಳಲ್ಲಿ ಸಲ್ಲಿಸುವಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಲಾಗಿದೆ. ವರದಿ ಬಂದ ಕೂಡಲೇ ಸ್ಕೆಚ್ ಮಾಡಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಗೋಮಾಳ ಒತ್ತುವರಿಯಾಗಿದ್ದರೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಬಗರ್ ಹುಕುಂನಲ್ಲಿ ಫಾರಂ 57ರಡಿ ಅರ್ಜಿ ಹಾಕಿದ್ದರೆ ಮಾತ್ರ ಸಾಗುವಳಿಗೆ ಅವಕಾಶ ನೀಡಬಹುದು ಎಂದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…