ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನಗಳ ಹಂಚಿಕೆ ಹಾಗೂ ಗೋಮಾಳ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ತಾಲೂಕಿನ ಮೇಲಿನ ಜೂಗಾನಹಳ್ಳಿ, ಗುಂಜೂರು, ಕೆಳಗಿನಜೂಗಾನಹಳ್ಳಿ, ಮಾಕಳಿ ಗ್ರಾಮಗಳ ನಿವೇಶನರಹಿತರು ತಹಶೀಲ್ದಾರ್ ಕಚೇರಿ ಬಳಿ ಧರಣಿ ನಡೆಸಿದರು.
ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೇಲಿನ ಜೂಗಾನಹಳ್ಳಿ ಸರ್ವೇ ನಂ.33 ರಲ್ಲಿ ಎಂಟು ಎಕರೆ ಗೋಮಾಳ ಜಮೀನಿದ್ದು, ನಿವೇಶನರಹಿತರಿಗೆ ಹಂಚಿಕೆ ಮಾಡಬೇಕು. ಇದಕ್ಕೆ ಹೊಂದಿಕೊಂಡ ಸರ್ವೇ ನಂಬರ್ ಜಾಗದಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿಯಿದ್ದು, ಬಲಾಢ್ಯರ ಕಣ್ಣು ಬಿದ್ದಿದೆ.
ಖಾಸಗಿ ರೆಸಾರ್ಟ್ ಮಾಲೀಕರೊಬ್ಬರು ಈಗಾಗಲೇ 30 ಗುಂಟೆ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಒತ್ತುವರಿ ತೆರವುಗೊಳಿಸಿ, ನಿವೇಶನರಹಿತರಿಗೆ ಹಂಚಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಭೂಮಿಯಲ್ಲಿ ಆಶ್ರಯ ಯೋಜನೆ ಫಲಾನುಭವಿಗಳಿಗೆ ಗುರುತಿಸಿದ ಜಮೀನು ಎಂಬ ನಾಮಫಲಕವನ್ನು ನಾಲ್ಕೂ ಗ್ರಾಮಸ್ಥರು ಹಾಕಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದ ಅಧಿಕಾರಿಗಳು ನಾಮಫಲಕ ತೆರವಿಗೆ ಮುಂದಾಗಿದ್ದಾರೆ. ಹಾಗಾಗಿ ತಕ್ಷಣವೇ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ತಹಶೀಲ್ದಾರ್ ಮೋಹನಕುಮಾರಿ ಅವರು ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿ ಶೀಘ್ರ ನಿವೇಶನ ಹಂಚುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಕೀಲ ಪ್ರತಾಪ್ ಆರ್, ಕರ್ನಾಟಕ ರಾಷ್ಟ್ರ ಸಮಿತಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್, ವೆಂಕಟೇಶ್, ಮಾಲಾಶ್ರೀ, ಗೋಪಾಲಕೃಷ್ಣ,ಶಿವಕುಮಾರ್ ಇತರರು ಇದ್ದರು.
ಆಶ್ರಯ ನಿವೇಶನಗಳಿಗೆ 150 ಎಕರೆ ಗುರುತು
ತಾಲೂಕಿನಲ್ಲಿ 150 ಎಕರೆ ಸರ್ಕಾರಿ ಭೂಮಿಯನ್ನು ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆಗೆ ಮಿಸಲಿಡಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಹೇಳಿದರು.
ಮಧುರೆ ಹೋಬಳಿಯಲ್ಲಿ 50 ಎಕರೆ, ತೂಬಗೆರೆ ಹೋಬಳಿಯಲ್ಲಿ 35 ಎಕರೆ ಸೇರಿದಂತೆ ಎಲ್ಲ ಹೋಬಳಿಗಳಲ್ಲಿ ಜಾಗ ಗುರುತಿಸಲಾಗಿದೆ.
ಗ್ರಾಮ ಪಂಚಾಯ್ತಿವಾರು ನಿವೇಶನರಹಿತರ ಮಾಹಿತಿ ಪಡೆದು ನಾಲ್ಕು ದಿನಗಳಲ್ಲಿ ಸಲ್ಲಿಸುವಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಲಾಗಿದೆ. ವರದಿ ಬಂದ ಕೂಡಲೇ ಸ್ಕೆಚ್ ಮಾಡಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಗೋಮಾಳ ಒತ್ತುವರಿಯಾಗಿದ್ದರೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಬಗರ್ ಹುಕುಂನಲ್ಲಿ ಫಾರಂ 57ರಡಿ ಅರ್ಜಿ ಹಾಕಿದ್ದರೆ ಮಾತ್ರ ಸಾಗುವಳಿಗೆ ಅವಕಾಶ ನೀಡಬಹುದು ಎಂದರು.
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…