ನಿವೇಶನ ರಹಿತರಿಗೆ ಆಶ್ರಯ‌ ಯೋಜನೆಯಡಿ‌ ನಿವೇಶನಗಳ ಹಂಚಿಕೆಗೆ ಆಗ್ರಹ

ನಿವೇಶನ‌ ರಹಿತರಿಗೆ ಆಶ್ರಯ‌ ಯೋಜನೆಯಡಿ‌ ನಿವೇಶನಗಳ ಹಂಚಿಕೆ ಹಾಗೂ ಗೋಮಾಳ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ತಾಲೂಕಿನ ಮೇಲಿನ ಜೂಗಾನಹಳ್ಳಿ, ಗುಂಜೂರು‌, ಕೆಳಗಿನಜೂಗಾನಹಳ್ಳಿ, ಮಾಕಳಿ ಗ್ರಾಮಗಳ ನಿವೇಶನರಹಿತರು ತಹಶೀಲ್ದಾರ್‌ ಕಚೇರಿ‌ ಬಳಿ ಧರಣಿ‌ ನಡೆಸಿದರು.

ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ‌ ಪಂಚಾಯ್ತಿ ವ್ಯಾಪ್ತಿಯ ಮೇಲಿನ ಜೂಗಾನಹಳ್ಳಿ ಸರ್ವೇ ನಂ.33 ರಲ್ಲಿ ಎಂಟು ಎಕರೆ ಗೋಮಾಳ‌ ಜಮೀನಿದ್ದು, ನಿವೇಶನರಹಿತರಿಗೆ ಹಂಚಿಕೆ‌ ಮಾಡಬೇಕು. ಇದಕ್ಕೆ ಹೊಂದಿಕೊಂಡ‌ ಸರ್ವೇ ನಂಬರ್ ಜಾಗದಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿಯಿದ್ದು, ಬಲಾಢ್ಯರ ಕಣ್ಣು ಬಿದ್ದಿದೆ.

ಖಾಸಗಿ ರೆಸಾರ್ಟ್‌ ಮಾಲೀಕರೊಬ್ಬರು ಈಗಾಗಲೇ 30 ಗುಂಟೆ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ‌ ಅಧಿಕಾರಿಗಳು ತಕ್ಷಣವೇ ಒತ್ತುವರಿ ತೆರವುಗೊಳಿಸಿ, ನಿವೇಶನರಹಿತರಿಗೆ ಹಂಚಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಭೂಮಿಯಲ್ಲಿ ಆಶ್ರಯ ಯೋಜನೆ ಫಲಾನುಭವಿಗಳಿಗೆ ಗುರುತಿಸಿದ‌ ಜಮೀನು ಎಂಬ ನಾಮಫಲಕವನ್ನು ನಾಲ್ಕೂ ಗ್ರಾಮಸ್ಥರು ಹಾಕಿದ್ದು, ಪ್ರಭಾವಿಗಳ ಒತ್ತಡಕ್ಕೆ‌ ಮಣಿದ ಅಧಿಕಾರಿಗಳು ನಾಮಫಲಕ ತೆರವಿಗೆ ಮುಂದಾಗಿದ್ದಾರೆ. ಹಾಗಾಗಿ ತಕ್ಷಣವೇ ನಿವೇಶನ ಹಂಚಿಕೆ‌ ಮಾಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಸರ್ಕಾರ‌ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ತಹಶೀಲ್ದಾರ್ ಮೋಹನಕುಮಾರಿ ಅವರು ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿ ಶೀಘ್ರ‌ ನಿವೇಶನ ಹಂಚುವ ಭರವಸೆ ನೀಡಿದರು.

ಈ‌‌ ಸಂದರ್ಭದಲ್ಲಿ ವಕೀಲ ಪ್ರತಾಪ್ ಆರ್, ಕರ್ನಾಟಕ ರಾಷ್ಟ್ರ ಸಮಿತಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್, ವೆಂಕಟೇಶ್, ಮಾಲಾಶ್ರೀ, ಗೋಪಾಲಕೃಷ್ಣ,ಶಿವಕುಮಾರ್ ಇತರರು‌ ಇದ್ದರು.

ಆಶ್ರಯ ನಿವೇಶನಗಳಿಗೆ 150 ಎಕರೆ ಗುರುತು

ತಾಲೂಕಿನಲ್ಲಿ‌ 150 ಎಕರೆ ಸರ್ಕಾರಿ ಭೂಮಿಯನ್ನು ಆಶ್ರಯ ಯೋಜನೆಯಡಿ‌ ನಿವೇಶನ ಹಂಚಿಕೆಗೆ ಮಿಸಲಿಡಲಾಗಿದೆ ಎಂದು ತಹಶೀಲ್ದಾರ್‌ ಮೋಹನಕುಮಾರಿ ಹೇಳಿದರು.

ಮಧುರೆ ಹೋಬಳಿಯಲ್ಲಿ 50 ಎಕರೆ, ತೂಬಗೆರೆ ಹೋಬಳಿಯಲ್ಲಿ 35 ಎಕರೆ ಸೇರಿದಂತೆ ಎಲ್ಲ ಹೋಬಳಿಗಳಲ್ಲಿ ಜಾಗ ಗುರುತಿಸಲಾಗಿದೆ.

ಗ್ರಾಮ ಪಂಚಾಯ್ತಿವಾರು ನಿವೇಶನರಹಿತರ ಮಾಹಿತಿ ಪಡೆದು ನಾಲ್ಕು‌ ದಿನಗಳಲ್ಲಿ ಸಲ್ಲಿಸುವಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗೆ‌ ಸೂಚಿಸಲಾಗಿದೆ‌. ವರದಿ ಬಂದ‌ ಕೂಡಲೇ ಸ್ಕೆಚ್ ಮಾಡಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆಶ್ರಯ ಮನೆ‌ ಮಂಜೂರಾತಿಗೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವಿರೋಧವಿಲ್ಲ. ಆದರೆ ಭೂಮಿ‌ ಮಂಜೂರು ಮಾಡುವ ಅಧಿಕಾರ‌ ಜಿಲ್ಲಾಧಿಕಾರಿಗಳಿಗಿದೆ. ನಾವು ಪ್ರಸ್ತಾವ ಕಳಿಸಬೇಕು. ಅದಕ್ಕಾಗಿ ನಿವೇಶನರಹಿತರ ಪಟ್ಟಿ, ಲಭ್ಯವಿರುವ ಭೂಮಿ, ಫಲಾನುಭವಿಗಳ ಪಟ್ಟಿ ತರಿಸಿಕೊಂಡು ಪ್ರಸ್ತಾವ ಸಲ್ಲಿಸಲಾಗುವುದು‌ ಎಂದು ಹೇಳಿದರು.

ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಗೋಮಾಳ‌ ಒತ್ತುವರಿಯಾಗಿದ್ದರೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಬಗರ್ ಹುಕುಂನಲ್ಲಿ ಫಾರಂ 57ರಡಿ ಅರ್ಜಿ ಹಾಕಿದ್ದರೆ‌ ಮಾತ್ರ ಸಾಗುವಳಿಗೆ‌ ಅವಕಾಶ ನೀಡಬಹುದು ಎಂದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

13 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

15 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

16 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

20 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

22 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago