ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ 20X30 ಅಳತೆಗೆ ಬದಲಾಗಿ 20×60 ಅಳತೆಯನಿವೇಶನಗಳನ್ನು ನೀಡಬೇಕು-ತಾಲೂಕು ಪ.ಜಾ, ಪ.ಪಂ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ನಾಗರಾಜು ಬಚ್ಚಹಳ್ಳಿ ಆಗ್ರಹ

ದೊಡ್ಡಬಳ್ಳಾಪುರ : ನಿವೇಶನಕ್ಕಾಗಿ ಬೀದಿಗಿಳಿದು ಹೋರಾಟ ಮಾಡಿದ್ದು ಬಡವರು, ಹೋರಾಟದ ಫಲ ಅಶ್ರಯ ಯೋಜನೆಯ ನಿವೇಶನಗಳ ಹಂಚಿಕೆಗಾಗಿ 5 ಎಕರೆ ಜಮೀನು ಮಂಜೂರಾಗಿದೆ, ಅರ್ಹ ಬಡವರಿಗೆ ಹಂಚ ಬೇಕಾದ ನಿವೇಶನಗಳು ಶ್ರೀಮಂತರ ಪಾಲಾಗುತ್ತಿವೆ, ನಿವೇಶನಕ್ಕಾಗಿ ಮತ್ತೆ ಹೋರಾಟಕ್ಕೆ ಇಳಿದಿದ್ದಾರೆ ಬಚ್ಚಹಳ್ಳಿ ದಲಿತರು.

ದೊಡ್ಡಬಳ್ಳಾಪುರ ತಾಲೂಕು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಚ್ಚಹಳ್ಳಿ ಗ್ರಾಮದ ಸರ್ವೆ ನಂಬರ್ 10ರಲ್ಲಿ 5 ಎಕರೆ ಜಾಗ ಅಶ್ರಯ ಯೋಜನೆಗೆ ಮಂಜೂರಾಗಿದೆ, ನಿವೇಶನಗಳ ಹಂಚಿಕೆ ಮಾಡಲು ಅನ್ ಲೈನ್ ನಲ್ಲಿ ಅರ್ಜಿಯನ್ನ ಕರೆಯಲಾಗಿದೆ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿಯಿಂದ ಫಲಾನುಭವಿಗಳ ಪಟ್ಟಿಯನ್ನ ಮಾಡಲಾಗಿದ್ದು, ಪಟ್ಟಿಯಲ್ಲಿರೋರು ಬಹುತೇಕ ಎಕರೆ ಎಕರೆ ಜಮೀನು ಇರುವ ಶ್ರೀಮಂತರು, ನಿವೇಶನ ರಹಿತರಿಗೆ ಸಿಗಬೇಕಾದ ನಿವೇಶನಗಳನ್ನ ಕಬಳಿಸಲು ಶ್ರೀಮಂತರ ತಂಡವೊಂದು ಸಂಚು ನಡೆಸುತ್ತಿದೆ ಎಂದು ಹೋರಾಟಗಾರರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಹ ಫಲಾನುಭವಿಗಳನ್ನ ಗುರುತಿಸಿ ಫಲಾನುಭವಿಗಳ ಪಟ್ಟಿ ಮಾಡುವಂತೆ ಬಚ್ಚಹಳ್ಳಿ ಮತ್ತು ಗೊಲ್ಲಹಳ್ಳಿ ತಾಂಡದ ದಲಿತರು ಇಂದು ತಾಲೂಕು ಪಂಚಾಯಿತಿ ಕಾರ್ಯಾಲಯದ ಮುಂದೆ ಪ್ರತಿಭಟನೆಯನ್ನ ನಡೆಸಿದರು, ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ದಲಿತ ಮುಖಂಡರಾದ ಬಚ್ಚಹಳ್ಳಿ ನಾಗರಾಜು, ಬಡವರಿಗೆ ನಿವೇಶನ ಕೊಡಿಸಲು 2010ರಿಂದ ನಾವು ಹೋರಾಟ ಮಾಡುತ್ತಿದ್ದೇವೆ, ಅರ್ಹ ಫಲಾನುಭವಿಗಳ ಪಟ್ಟಿಯನ್ನ ಸರ್ಕಾರಕ್ಕೆ ಸಲ್ಲಿಸಿದ್ದೇವು, ನಮ್ಮ ಹೋರಾಟದ ಫಲ ಅಶ್ರಯ ಯೋಜನೆಗಾಗಿ 5 ಎಕರೆ ಜಮೀನು ಮಂಜೂರಾಗಿದೆ.

ಗ್ರಾಮ ಪಂಚಾಯಿತಿಯಿಂದ ನಿವೇಶನಗಳ ಹಂಚಿಕೆ ಪ್ರಾರಂಭವಾಗಿದೆ,ಪಂಚಾಯಿತಿ ಸಿದ್ದಪಡಿಸಿದ ಪಟ್ಟಿಯಲ್ಲಿ ಬಹುತೇಕ ಶ್ರೀಮಂತರಿದ್ದಾರೆ, ನಿವೇಶನಕ್ಕಾಗಿ ಹೋರಾಟ ಮಾಡಿದ ಬಡವರನ್ನ ಫಲಾನುಭವಿಗಳ ಪಟ್ಟಿಗೆ ಸೇರಿಸದಂತೆ ಸಂಚು ನಡೆಸಲಾಗಿದೆ, ಈ ಹಿಂದೆ ಮನೆ ಕಟ್ಟಲು ಅನುದಾನ ತೆಗೆದುಕೊಂಡಿದ್ದಾರೆಂಬ ಒಂದೇ ಕಾರಣವನ್ನಿಟ್ಟು ಬಡವರಿಗೆ ನಿವೇಶನ ಸಿಗದಂತೆ ಷಡ್ಯಂತ್ರ ಮಾಡಲಾಗುತ್ತಿದೆ ಎಂದರು.

ನಮ್ಮ ಆಗ್ರಹ ಇಷ್ಟೇ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳನ್ನು ಒಳಗೊಂಡಂತೆ ಒಂದು ಸಮಿತಿಯನ್ನು ರಚಿಸಬೇಕು. ಆ ಸಮಿತಿಯು ನಮ್ಮ ಗ್ರಾಮದ ಪ್ರತಿ ಮನೆಮನೆಯನ್ನು ಸಮೀಕ್ಷೆಗೆ ಒಳಪಡಿಸಬೇಕು. ಪ್ರತಿ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯನ್ನು ತಿಳಿದುಕೊಂಡು ನೈಜ ಫಲಾನುಭವಿಗಳನ್ನು ಗುರುತಿಸಿ ನಿವೇಶನ ಹಂಚಿಕೆ ಮಾಡಬೇಕು ಎಂದರು.

ಬಚ್ಚಹಳ್ಳಿ ನಿವಾಸಿ ಆನಂದಮ್ಮ ಮಾತನಾಡಿ, 40 ವರ್ಷಗಳ ಹಿಂದೆ ಹಂಚಿಕೆ ಮಾಡಲಾದ ನಿವೇಶನಗಳಲ್ಲಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದೇವೆ, ಒಂದೊಂದು ಕುಟುಂಬಗಳಲ್ಲಿ ನಾಲ್ಕೈದು ಮಕ್ಕಳಿದ್ದು, ಒಂದೇ ನಿವೇಶನವನ್ನ ನಾಲ್ಕೈದು ಭಾಗ ಮಾಡಿಕೊಂಡು 10 x10 ಅಳತೆಯ ಹಂದಿ ಗೂಡಿನಂತ ಶೀಟ್  ಮನೆಗಳಲ್ಲಿ ವಾಸವಾಗಿದ್ದೇವೆ, ಅದರಲ್ಲೇ ಹಸು, ಕೋಳಿ ಸಾಕೊಂಡು ಕಷ್ಟದ ಜೀವನ ಮಾಡುತ್ತಿದ್ದೇವೆ, ಬಡವರಿಗೆ ನಿವೇಶನ ಹಂಚಿಕೆ ಮಾಡಬೇಕು, ಇಲ್ಲದಿದ್ದಾರೆ ಉಗ್ರ ಹೋರಾಟ ಮಾಡುವುದ್ದಾಗಿ ಎಚ್ಚರಿಕೆಯನ್ನ ನೀಡಿದರು.

ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಪರಮೇಶ್, ಮಂಜುಳಮ್ಮ, ಗೀತಾ ಬಾಯಿ, ಮಾಜಿ ಉಪಾಧ್ಯಕ್ಷ ಶ್ರೀನಿವಾಸ, ರೈತ ಸಂಘದ ಮುಖಂಡ ಸತೀಶ್ ಗೊಲ್ಲಹಳ್ಳಿ, ಮುನಿಯಪ್ಪ, ಹರೀಶ್ ನಾಯ್ಕ, ಮಂಜುನಾಯ್ಕ, ವಿಜಿ ನಾಯ್ಕ, ಹನುಮಂತೇಗೌಡ ಮತ್ತು ಬಚ್ಚಹಳ್ಳಿ ಗ್ರಾಮದ ಮಹಿಳೆಯರು ಮತ್ತು ಮುಖಂಡರು ಹಾಜರಿದ್ದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 hour ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

4 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

22 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago