ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ 20X30 ಅಳತೆಗೆ ಬದಲಾಗಿ 20×60 ಅಳತೆಯನಿವೇಶನಗಳನ್ನು ನೀಡಬೇಕು-ತಾಲೂಕು ಪ.ಜಾ, ಪ.ಪಂ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ನಾಗರಾಜು ಬಚ್ಚಹಳ್ಳಿ ಆಗ್ರಹ

ದೊಡ್ಡಬಳ್ಳಾಪುರ : ನಿವೇಶನಕ್ಕಾಗಿ ಬೀದಿಗಿಳಿದು ಹೋರಾಟ ಮಾಡಿದ್ದು ಬಡವರು, ಹೋರಾಟದ ಫಲ ಅಶ್ರಯ ಯೋಜನೆಯ ನಿವೇಶನಗಳ ಹಂಚಿಕೆಗಾಗಿ 5 ಎಕರೆ ಜಮೀನು ಮಂಜೂರಾಗಿದೆ, ಅರ್ಹ ಬಡವರಿಗೆ ಹಂಚ ಬೇಕಾದ ನಿವೇಶನಗಳು ಶ್ರೀಮಂತರ ಪಾಲಾಗುತ್ತಿವೆ, ನಿವೇಶನಕ್ಕಾಗಿ ಮತ್ತೆ ಹೋರಾಟಕ್ಕೆ ಇಳಿದಿದ್ದಾರೆ ಬಚ್ಚಹಳ್ಳಿ ದಲಿತರು.

ದೊಡ್ಡಬಳ್ಳಾಪುರ ತಾಲೂಕು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಚ್ಚಹಳ್ಳಿ ಗ್ರಾಮದ ಸರ್ವೆ ನಂಬರ್ 10ರಲ್ಲಿ 5 ಎಕರೆ ಜಾಗ ಅಶ್ರಯ ಯೋಜನೆಗೆ ಮಂಜೂರಾಗಿದೆ, ನಿವೇಶನಗಳ ಹಂಚಿಕೆ ಮಾಡಲು ಅನ್ ಲೈನ್ ನಲ್ಲಿ ಅರ್ಜಿಯನ್ನ ಕರೆಯಲಾಗಿದೆ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿಯಿಂದ ಫಲಾನುಭವಿಗಳ ಪಟ್ಟಿಯನ್ನ ಮಾಡಲಾಗಿದ್ದು, ಪಟ್ಟಿಯಲ್ಲಿರೋರು ಬಹುತೇಕ ಎಕರೆ ಎಕರೆ ಜಮೀನು ಇರುವ ಶ್ರೀಮಂತರು, ನಿವೇಶನ ರಹಿತರಿಗೆ ಸಿಗಬೇಕಾದ ನಿವೇಶನಗಳನ್ನ ಕಬಳಿಸಲು ಶ್ರೀಮಂತರ ತಂಡವೊಂದು ಸಂಚು ನಡೆಸುತ್ತಿದೆ ಎಂದು ಹೋರಾಟಗಾರರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಹ ಫಲಾನುಭವಿಗಳನ್ನ ಗುರುತಿಸಿ ಫಲಾನುಭವಿಗಳ ಪಟ್ಟಿ ಮಾಡುವಂತೆ ಬಚ್ಚಹಳ್ಳಿ ಮತ್ತು ಗೊಲ್ಲಹಳ್ಳಿ ತಾಂಡದ ದಲಿತರು ಇಂದು ತಾಲೂಕು ಪಂಚಾಯಿತಿ ಕಾರ್ಯಾಲಯದ ಮುಂದೆ ಪ್ರತಿಭಟನೆಯನ್ನ ನಡೆಸಿದರು, ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ದಲಿತ ಮುಖಂಡರಾದ ಬಚ್ಚಹಳ್ಳಿ ನಾಗರಾಜು, ಬಡವರಿಗೆ ನಿವೇಶನ ಕೊಡಿಸಲು 2010ರಿಂದ ನಾವು ಹೋರಾಟ ಮಾಡುತ್ತಿದ್ದೇವೆ, ಅರ್ಹ ಫಲಾನುಭವಿಗಳ ಪಟ್ಟಿಯನ್ನ ಸರ್ಕಾರಕ್ಕೆ ಸಲ್ಲಿಸಿದ್ದೇವು, ನಮ್ಮ ಹೋರಾಟದ ಫಲ ಅಶ್ರಯ ಯೋಜನೆಗಾಗಿ 5 ಎಕರೆ ಜಮೀನು ಮಂಜೂರಾಗಿದೆ.

ಗ್ರಾಮ ಪಂಚಾಯಿತಿಯಿಂದ ನಿವೇಶನಗಳ ಹಂಚಿಕೆ ಪ್ರಾರಂಭವಾಗಿದೆ,ಪಂಚಾಯಿತಿ ಸಿದ್ದಪಡಿಸಿದ ಪಟ್ಟಿಯಲ್ಲಿ ಬಹುತೇಕ ಶ್ರೀಮಂತರಿದ್ದಾರೆ, ನಿವೇಶನಕ್ಕಾಗಿ ಹೋರಾಟ ಮಾಡಿದ ಬಡವರನ್ನ ಫಲಾನುಭವಿಗಳ ಪಟ್ಟಿಗೆ ಸೇರಿಸದಂತೆ ಸಂಚು ನಡೆಸಲಾಗಿದೆ, ಈ ಹಿಂದೆ ಮನೆ ಕಟ್ಟಲು ಅನುದಾನ ತೆಗೆದುಕೊಂಡಿದ್ದಾರೆಂಬ ಒಂದೇ ಕಾರಣವನ್ನಿಟ್ಟು ಬಡವರಿಗೆ ನಿವೇಶನ ಸಿಗದಂತೆ ಷಡ್ಯಂತ್ರ ಮಾಡಲಾಗುತ್ತಿದೆ ಎಂದರು.

ನಮ್ಮ ಆಗ್ರಹ ಇಷ್ಟೇ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳನ್ನು ಒಳಗೊಂಡಂತೆ ಒಂದು ಸಮಿತಿಯನ್ನು ರಚಿಸಬೇಕು. ಆ ಸಮಿತಿಯು ನಮ್ಮ ಗ್ರಾಮದ ಪ್ರತಿ ಮನೆಮನೆಯನ್ನು ಸಮೀಕ್ಷೆಗೆ ಒಳಪಡಿಸಬೇಕು. ಪ್ರತಿ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯನ್ನು ತಿಳಿದುಕೊಂಡು ನೈಜ ಫಲಾನುಭವಿಗಳನ್ನು ಗುರುತಿಸಿ ನಿವೇಶನ ಹಂಚಿಕೆ ಮಾಡಬೇಕು ಎಂದರು.

ಬಚ್ಚಹಳ್ಳಿ ನಿವಾಸಿ ಆನಂದಮ್ಮ ಮಾತನಾಡಿ, 40 ವರ್ಷಗಳ ಹಿಂದೆ ಹಂಚಿಕೆ ಮಾಡಲಾದ ನಿವೇಶನಗಳಲ್ಲಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದೇವೆ, ಒಂದೊಂದು ಕುಟುಂಬಗಳಲ್ಲಿ ನಾಲ್ಕೈದು ಮಕ್ಕಳಿದ್ದು, ಒಂದೇ ನಿವೇಶನವನ್ನ ನಾಲ್ಕೈದು ಭಾಗ ಮಾಡಿಕೊಂಡು 10 x10 ಅಳತೆಯ ಹಂದಿ ಗೂಡಿನಂತ ಶೀಟ್  ಮನೆಗಳಲ್ಲಿ ವಾಸವಾಗಿದ್ದೇವೆ, ಅದರಲ್ಲೇ ಹಸು, ಕೋಳಿ ಸಾಕೊಂಡು ಕಷ್ಟದ ಜೀವನ ಮಾಡುತ್ತಿದ್ದೇವೆ, ಬಡವರಿಗೆ ನಿವೇಶನ ಹಂಚಿಕೆ ಮಾಡಬೇಕು, ಇಲ್ಲದಿದ್ದಾರೆ ಉಗ್ರ ಹೋರಾಟ ಮಾಡುವುದ್ದಾಗಿ ಎಚ್ಚರಿಕೆಯನ್ನ ನೀಡಿದರು.

ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಪರಮೇಶ್, ಮಂಜುಳಮ್ಮ, ಗೀತಾ ಬಾಯಿ, ಮಾಜಿ ಉಪಾಧ್ಯಕ್ಷ ಶ್ರೀನಿವಾಸ, ರೈತ ಸಂಘದ ಮುಖಂಡ ಸತೀಶ್ ಗೊಲ್ಲಹಳ್ಳಿ, ಮುನಿಯಪ್ಪ, ಹರೀಶ್ ನಾಯ್ಕ, ಮಂಜುನಾಯ್ಕ, ವಿಜಿ ನಾಯ್ಕ, ಹನುಮಂತೇಗೌಡ ಮತ್ತು ಬಚ್ಚಹಳ್ಳಿ ಗ್ರಾಮದ ಮಹಿಳೆಯರು ಮತ್ತು ಮುಖಂಡರು ಹಾಜರಿದ್ದರು.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

4 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

6 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

18 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

19 hours ago