Categories: ರಾಜ್ಯ

ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಪಡೆ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಬೀಳುತ್ತೆ ಕೇಸ್‌

 

ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ ಎನ್ನುವಾಗಲೇ ಮಾರುಕಟ್ಟೆಗಳಲ್ಲಿ ಪಟಾಕಿಗಳ ಖರೀದಿ ಭರಾಟೆ ಶುರುವಾಗಿದೆ. ರಾಜ್ಯ ಸರ್ಕಾರದ ಆದೇಶ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನಿರ್ದೇಶನದನ್ವಯ ರಾಜ್ಯ ಪೊಲೀಸರು ಹಸಿರು ಪಟಾಕಿ ಹೊರತುಪಡಿಸಿ ನಿಷೇಧಿತ ಇತರ ಪಟಾಕಿಗಳ ಮಾರಾಟ, ಪೂರೈಕೆ ಮೇಲೆ ರಾಜ್ಯದೆಲ್ಲೆಡೆ ನಿಗಾ ಇರಿಸಿದ್ದಾರೆ.

ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ಪಟಾಕಿ ವಹಿವಾಟು ನಡೆಸಲು ವ್ಯಾಪಾರಿಗಳು ಸಜ್ಜಾಗಿದ್ದಾರೆ. ಆನ್‌ಲೈನ್‌ನಲ್ಲಿ ಪಟಾಕಿ ವ್ಯಾಪಾರವೂ ಜೋರಾಗಿವೆ. ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಬಳಸುವಂತೆ ರಾಜ್ಯ ಸರ್ಕಾರವು ಸಾಕಷ್ಟು ಅರಿವು ಮೂಡಿಸುತ್ತಿದ್ದರೂ, ಕೆಂಪು ಪಟಾಕಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಇದೀಗ ಪರಿಸರಕ್ಕೆ ಹಾನಿಯುಂಟು ಮಾಡುವ ಪಟಾಕಿ ವ್ಯವಹಾರ, ಮಾರಾಟ, ಖರೀದಿ ಬಗ್ಗೆ ನಿಗಾ ಇಡಲು ಖಾಕಿ ಪಡೆ ಸಜ್ಜಾಗಿದೆ.

ಹೊರ ರಾಜ್ಯಗಳಿಂದ ರಾಜ್ಯಕ್ಕೆ ಪೂರೈಕೆಯಾಗುವ ಪಟಾಕಿಗಳನ್ನು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಹೊರ ರಾಜ್ಯಗಳಿಂದ ರಾಜ್ಯಕ್ಕೆ ಪಟಾಕಿ ಸರಬರಾಜು ಮಾಡುವವರ ವಿರುದ್ಧ ಪೊಲೀಸರು ಇನ್ನಷ್ಟು ಬಿಗಿಯಾಗಿ ಕಣ್ಗಾವಲು ಇರಿಸಲು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದಲ್ಲೇಕಿಲ್ಲ ಪಟಾಕಿ ಉತ್ಪಾದನೆ?

ಹಸಿರು ಪಟಾಕಿ ಹೊರತುಪಡಿಸಿ ಇತರ ಪಟಾಕಿಗಳ ಮಾರಾಟ ಮಾಡುವ ಬಗ್ಗೆ ಕೆಎಸ್‌ಪಿಸಿಬಿ ಮೇಲ್ವಿಚಾರಣೆ ಮಾಡುತ್ತಿದೆ. ಪಟಾಕಿ ಉತ್ಪಾದನೆ ಮಾಡುವ ಘಟಕ ಇದ್ದರೆ ಮಾತ್ರ ಅಂತಹ ಕಡೆಗಳಿಗೆ ದಾಳಿ ನಡೆಸಿ ಅವುಗಳನ್ನು ಜಪ್ತಿ ಮಾಡಲು ಕೆಎಸ್‌ಪಿಸಿಬಿಗೆ ಅವಕಾಶಗಳಿವೆ. ಆದರೆ, ಕರ್ನಾಟಕದಲ್ಲಿ ಪಟಾಕಿ ಉತ್ಪಾದನ ಘಟಕಗಳಿಲ್ಲ. ಇಲ್ಲಿನ ವಾತಾವರಣದಲ್ಲಿ ತೇವಾಂಶ ಅಧಿಕವಾಗಿರುವ ಹಿನ್ನಲೆಯಲ್ಲಿ ಪಟಾಕಿ ಉತ್ಪಾದನೆಗೆ ಕರ್ನಾಟಕ ಸೂಕ್ತವಾಗಿಲ್ಲ. ಇಲ್ಲಿ ಪಟಾಕಿ ಉತ್ಪಾದಿಸಿದರೂ ಅದು ಸಿಡಿಸಲು ಯೋಗ್ಯವಾಗಿರುವುದಿಲ್ಲ. ಈ ಎಲ್ಲ ಕಾರಣಗಳಿಂದ ಹೊರ ರಾಜ್ಯ ಪ್ರಮುಖವಾಗಿ ತಮಿಳುನಾಡಿನಿಂದ ಹೆಚ್ಚಾಗಿ ಕರ್ನಾಟಕಕ್ಕೆ ಪಟಾಕಿಗಳು ಬರುತ್ತಿವೆ.

ಆನ್‌ಲೈನ್‌ನಲ್ಲಿ ಮಾರಿದರೂ ಕ್ರಮ

ಮಾರುಕಟ್ಟೆಗಳಲ್ಲಿ ಕೆಂಪು ಪಟಾಕಿಗಳ ಮಾರಾಟ ಮಾಡುವವರು, ಪಟಾಕಿ ಸಿಡಿಸಿರುವವರ ವಿರುದ್ಧವೂ ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಆದರೆ ಆನ್‌ಲೈನ್‌ನಲ್ಲಿ ವಿವಿಧ ಕಂಪೆನಿಗಳು ಕರ್ನಾಟಕದಲ್ಲಿ ನಿಷೇಧಿಸಲಾದ ಪಟಾಕಿಗಳನ್ನು ಮಾರಾಟ ಮಾಡುವ ಆರೋಪಗಳು ಕೇಳಿ ಬಂದಿವೆ. ಇದು ಅಪರಾಧವಾಗಿದ್ದು, ಸೈಬರ್‌ ಕ್ರೈಂ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಂಗಳೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ರಾಯಚೂರು, ಉಡುಪಿ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ಪೊಲೀಸರ ಕಣ್ತಪ್ಪಿಸಿ ನಿಷೇಧಿತ ಕೆಂಪು ಪಟಾಕಿ ಮಾರಾಟ ಮಾಡಲು ವ್ಯಾಪಾರಿಗಳು ಮುಂದಾಗಿರುವ ಆರೋಪ ಕೇಳಿ ಬಂದಿದೆ.

ತಮಿಳುನಾಡಿನಿಂದ ಅತ್ಯಧಿಕ ಪಟಾಕಿ ರಾಜ್ಯಕ್ಕೆ ರವಾನೆ

ಪಟಾಕಿ ಎಂದರೆ ದೇಶದಲ್ಲೇ ಮೊದಲ ಹೆಸರು ಕೇಳಿಬರುವುದು ಕರ್ನಾಟಕದ ನೆರೆ ರಾಜ್ಯವಾಗಿರುವ ತಮಿಳುನಾಡು. ತಮಿಳುನಾಡಿನಿಂದ ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕಕ್ಕೆ ದೊಡ್ಡ ಪ್ರಮಾಣದ ಪಟಾಕಿ ಬರುವ ಸಾಧ್ಯತೆಗಳಿವೆ. ತಮಿಳುನಾಡಿನ ಶಿವಕಾಶಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನಿಷೇಧಿತ ಕೆಂಪು ಪಟಾಕಿ ತಯಾರಿಸಲಾಗಿವೆ ಎಂದು ತಿಳಿದು ಬಂದಿದೆ. ಇದೇ ಪಟಾಕಿಗಳು ರಿಯಾಯಿತಿ ದರದಲ್ಲಿ ರಾಜ್ಯಕ್ಕೆ ಕಾಲಿಡುವ ಸಾಧ್ಯತೆಗಳಿವೆ. ಏಕೆಂದರೆ ತಮಿಳುನಾಡಿನಿಂದ ಕರ್ನಾಟಕ, ಆಂಧ್ರ, ಕೇರಳಕ್ಕೆ ಹೆಚ್ಚಿನ ಸಾಗಾಣಿಕೆ ವೆಚ್ಚ ತಗಲುವುದಿಲ್ಲ. ಹೀಗಾಗಿ ಇಲ್ಲಿನ ಪಟಾಕಿಗಳು ನೆರೆ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬರುತ್ತವೆ ಎನ್ನುತ್ತಾರೆ ಪರಿಸರ ತಜ್ಞರು.

ಹಸಿರು ಪಟಾಕಿ ಖಾತ್ರಿ ಮಾಡಿಕೊಳ್ಳುವುದು ಹೇಗೆ?

ಗ್ರಾಹಕರು ತಾವು ಕೊಳ್ಳುವ ಪಟಾಕಿಗಳು ಹಸಿರು ಪಟಾಕಿ ಹೌದೇ? ಇಲ್ಲವೇ? ಎಂಬುದನ್ನು ಖಾತರಿಪಡಿಸಿಕೊಳ್ಳಲು ಪಟಾಕಿ ಪ್ಯಾಕ್‌ನ ಮೇಲಿರುವ ಕ್ಯೂಆರ್‌ ಕೋಡ್‌ನ್ನು ಸ್ಕ್ಯಾನ್‌ ಮಾಡುವ ಮೂಲಕ ಅರಿತುಕೊಳ್ಳಬಹುದಾಗಿದೆ.

“ದೀಪದಿಂದ ದೀಪ ಹಚ್ಚಿ ದೀಪಾವಳಿ ಆಚರಿಸಬೇಕೇ ಹೊರತು ಪಟಾಕಿ ಹಚ್ಚಿ ಅಲ್ಲ. ಪಟಾಕಿ ಹಚ್ಚಲೇ ಬೇಕು ಎಂದಾದರೆ ಹಸಿರು ಪಟಾಕಿ ಮಾತ್ರ ಸಿಡಿಸಿ. 125 ಡೆಸಿಬಲ್‌ಗಿಂತ ಹೆಚ್ಚು ತೀವ್ರತೆಯ ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿ ಸಿಡಿಸಬಾರದು. ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅರಣ್ಯ ಸಚಿವ ಈಶ್ವರ್ ಖoಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

5 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

6 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

7 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

9 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

10 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

21 hours ago