Categories: ರಾಜ್ಯ

ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಪಡೆ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಬೀಳುತ್ತೆ ಕೇಸ್‌

 

ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ ಎನ್ನುವಾಗಲೇ ಮಾರುಕಟ್ಟೆಗಳಲ್ಲಿ ಪಟಾಕಿಗಳ ಖರೀದಿ ಭರಾಟೆ ಶುರುವಾಗಿದೆ. ರಾಜ್ಯ ಸರ್ಕಾರದ ಆದೇಶ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನಿರ್ದೇಶನದನ್ವಯ ರಾಜ್ಯ ಪೊಲೀಸರು ಹಸಿರು ಪಟಾಕಿ ಹೊರತುಪಡಿಸಿ ನಿಷೇಧಿತ ಇತರ ಪಟಾಕಿಗಳ ಮಾರಾಟ, ಪೂರೈಕೆ ಮೇಲೆ ರಾಜ್ಯದೆಲ್ಲೆಡೆ ನಿಗಾ ಇರಿಸಿದ್ದಾರೆ.

ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ಪಟಾಕಿ ವಹಿವಾಟು ನಡೆಸಲು ವ್ಯಾಪಾರಿಗಳು ಸಜ್ಜಾಗಿದ್ದಾರೆ. ಆನ್‌ಲೈನ್‌ನಲ್ಲಿ ಪಟಾಕಿ ವ್ಯಾಪಾರವೂ ಜೋರಾಗಿವೆ. ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಬಳಸುವಂತೆ ರಾಜ್ಯ ಸರ್ಕಾರವು ಸಾಕಷ್ಟು ಅರಿವು ಮೂಡಿಸುತ್ತಿದ್ದರೂ, ಕೆಂಪು ಪಟಾಕಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಇದೀಗ ಪರಿಸರಕ್ಕೆ ಹಾನಿಯುಂಟು ಮಾಡುವ ಪಟಾಕಿ ವ್ಯವಹಾರ, ಮಾರಾಟ, ಖರೀದಿ ಬಗ್ಗೆ ನಿಗಾ ಇಡಲು ಖಾಕಿ ಪಡೆ ಸಜ್ಜಾಗಿದೆ.

ಹೊರ ರಾಜ್ಯಗಳಿಂದ ರಾಜ್ಯಕ್ಕೆ ಪೂರೈಕೆಯಾಗುವ ಪಟಾಕಿಗಳನ್ನು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಹೊರ ರಾಜ್ಯಗಳಿಂದ ರಾಜ್ಯಕ್ಕೆ ಪಟಾಕಿ ಸರಬರಾಜು ಮಾಡುವವರ ವಿರುದ್ಧ ಪೊಲೀಸರು ಇನ್ನಷ್ಟು ಬಿಗಿಯಾಗಿ ಕಣ್ಗಾವಲು ಇರಿಸಲು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದಲ್ಲೇಕಿಲ್ಲ ಪಟಾಕಿ ಉತ್ಪಾದನೆ?

ಹಸಿರು ಪಟಾಕಿ ಹೊರತುಪಡಿಸಿ ಇತರ ಪಟಾಕಿಗಳ ಮಾರಾಟ ಮಾಡುವ ಬಗ್ಗೆ ಕೆಎಸ್‌ಪಿಸಿಬಿ ಮೇಲ್ವಿಚಾರಣೆ ಮಾಡುತ್ತಿದೆ. ಪಟಾಕಿ ಉತ್ಪಾದನೆ ಮಾಡುವ ಘಟಕ ಇದ್ದರೆ ಮಾತ್ರ ಅಂತಹ ಕಡೆಗಳಿಗೆ ದಾಳಿ ನಡೆಸಿ ಅವುಗಳನ್ನು ಜಪ್ತಿ ಮಾಡಲು ಕೆಎಸ್‌ಪಿಸಿಬಿಗೆ ಅವಕಾಶಗಳಿವೆ. ಆದರೆ, ಕರ್ನಾಟಕದಲ್ಲಿ ಪಟಾಕಿ ಉತ್ಪಾದನ ಘಟಕಗಳಿಲ್ಲ. ಇಲ್ಲಿನ ವಾತಾವರಣದಲ್ಲಿ ತೇವಾಂಶ ಅಧಿಕವಾಗಿರುವ ಹಿನ್ನಲೆಯಲ್ಲಿ ಪಟಾಕಿ ಉತ್ಪಾದನೆಗೆ ಕರ್ನಾಟಕ ಸೂಕ್ತವಾಗಿಲ್ಲ. ಇಲ್ಲಿ ಪಟಾಕಿ ಉತ್ಪಾದಿಸಿದರೂ ಅದು ಸಿಡಿಸಲು ಯೋಗ್ಯವಾಗಿರುವುದಿಲ್ಲ. ಈ ಎಲ್ಲ ಕಾರಣಗಳಿಂದ ಹೊರ ರಾಜ್ಯ ಪ್ರಮುಖವಾಗಿ ತಮಿಳುನಾಡಿನಿಂದ ಹೆಚ್ಚಾಗಿ ಕರ್ನಾಟಕಕ್ಕೆ ಪಟಾಕಿಗಳು ಬರುತ್ತಿವೆ.

ಆನ್‌ಲೈನ್‌ನಲ್ಲಿ ಮಾರಿದರೂ ಕ್ರಮ

ಮಾರುಕಟ್ಟೆಗಳಲ್ಲಿ ಕೆಂಪು ಪಟಾಕಿಗಳ ಮಾರಾಟ ಮಾಡುವವರು, ಪಟಾಕಿ ಸಿಡಿಸಿರುವವರ ವಿರುದ್ಧವೂ ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಆದರೆ ಆನ್‌ಲೈನ್‌ನಲ್ಲಿ ವಿವಿಧ ಕಂಪೆನಿಗಳು ಕರ್ನಾಟಕದಲ್ಲಿ ನಿಷೇಧಿಸಲಾದ ಪಟಾಕಿಗಳನ್ನು ಮಾರಾಟ ಮಾಡುವ ಆರೋಪಗಳು ಕೇಳಿ ಬಂದಿವೆ. ಇದು ಅಪರಾಧವಾಗಿದ್ದು, ಸೈಬರ್‌ ಕ್ರೈಂ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಂಗಳೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ರಾಯಚೂರು, ಉಡುಪಿ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ಪೊಲೀಸರ ಕಣ್ತಪ್ಪಿಸಿ ನಿಷೇಧಿತ ಕೆಂಪು ಪಟಾಕಿ ಮಾರಾಟ ಮಾಡಲು ವ್ಯಾಪಾರಿಗಳು ಮುಂದಾಗಿರುವ ಆರೋಪ ಕೇಳಿ ಬಂದಿದೆ.

ತಮಿಳುನಾಡಿನಿಂದ ಅತ್ಯಧಿಕ ಪಟಾಕಿ ರಾಜ್ಯಕ್ಕೆ ರವಾನೆ

ಪಟಾಕಿ ಎಂದರೆ ದೇಶದಲ್ಲೇ ಮೊದಲ ಹೆಸರು ಕೇಳಿಬರುವುದು ಕರ್ನಾಟಕದ ನೆರೆ ರಾಜ್ಯವಾಗಿರುವ ತಮಿಳುನಾಡು. ತಮಿಳುನಾಡಿನಿಂದ ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕಕ್ಕೆ ದೊಡ್ಡ ಪ್ರಮಾಣದ ಪಟಾಕಿ ಬರುವ ಸಾಧ್ಯತೆಗಳಿವೆ. ತಮಿಳುನಾಡಿನ ಶಿವಕಾಶಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನಿಷೇಧಿತ ಕೆಂಪು ಪಟಾಕಿ ತಯಾರಿಸಲಾಗಿವೆ ಎಂದು ತಿಳಿದು ಬಂದಿದೆ. ಇದೇ ಪಟಾಕಿಗಳು ರಿಯಾಯಿತಿ ದರದಲ್ಲಿ ರಾಜ್ಯಕ್ಕೆ ಕಾಲಿಡುವ ಸಾಧ್ಯತೆಗಳಿವೆ. ಏಕೆಂದರೆ ತಮಿಳುನಾಡಿನಿಂದ ಕರ್ನಾಟಕ, ಆಂಧ್ರ, ಕೇರಳಕ್ಕೆ ಹೆಚ್ಚಿನ ಸಾಗಾಣಿಕೆ ವೆಚ್ಚ ತಗಲುವುದಿಲ್ಲ. ಹೀಗಾಗಿ ಇಲ್ಲಿನ ಪಟಾಕಿಗಳು ನೆರೆ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬರುತ್ತವೆ ಎನ್ನುತ್ತಾರೆ ಪರಿಸರ ತಜ್ಞರು.

ಹಸಿರು ಪಟಾಕಿ ಖಾತ್ರಿ ಮಾಡಿಕೊಳ್ಳುವುದು ಹೇಗೆ?

ಗ್ರಾಹಕರು ತಾವು ಕೊಳ್ಳುವ ಪಟಾಕಿಗಳು ಹಸಿರು ಪಟಾಕಿ ಹೌದೇ? ಇಲ್ಲವೇ? ಎಂಬುದನ್ನು ಖಾತರಿಪಡಿಸಿಕೊಳ್ಳಲು ಪಟಾಕಿ ಪ್ಯಾಕ್‌ನ ಮೇಲಿರುವ ಕ್ಯೂಆರ್‌ ಕೋಡ್‌ನ್ನು ಸ್ಕ್ಯಾನ್‌ ಮಾಡುವ ಮೂಲಕ ಅರಿತುಕೊಳ್ಳಬಹುದಾಗಿದೆ.

“ದೀಪದಿಂದ ದೀಪ ಹಚ್ಚಿ ದೀಪಾವಳಿ ಆಚರಿಸಬೇಕೇ ಹೊರತು ಪಟಾಕಿ ಹಚ್ಚಿ ಅಲ್ಲ. ಪಟಾಕಿ ಹಚ್ಚಲೇ ಬೇಕು ಎಂದಾದರೆ ಹಸಿರು ಪಟಾಕಿ ಮಾತ್ರ ಸಿಡಿಸಿ. 125 ಡೆಸಿಬಲ್‌ಗಿಂತ ಹೆಚ್ಚು ತೀವ್ರತೆಯ ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿ ಸಿಡಿಸಬಾರದು. ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅರಣ್ಯ ಸಚಿವ ಈಶ್ವರ್ ಖoಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

12 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

17 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago