Categories: ರಾಜ್ಯ

ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಪಡೆ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಬೀಳುತ್ತೆ ಕೇಸ್‌

 

ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ ಎನ್ನುವಾಗಲೇ ಮಾರುಕಟ್ಟೆಗಳಲ್ಲಿ ಪಟಾಕಿಗಳ ಖರೀದಿ ಭರಾಟೆ ಶುರುವಾಗಿದೆ. ರಾಜ್ಯ ಸರ್ಕಾರದ ಆದೇಶ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನಿರ್ದೇಶನದನ್ವಯ ರಾಜ್ಯ ಪೊಲೀಸರು ಹಸಿರು ಪಟಾಕಿ ಹೊರತುಪಡಿಸಿ ನಿಷೇಧಿತ ಇತರ ಪಟಾಕಿಗಳ ಮಾರಾಟ, ಪೂರೈಕೆ ಮೇಲೆ ರಾಜ್ಯದೆಲ್ಲೆಡೆ ನಿಗಾ ಇರಿಸಿದ್ದಾರೆ.

ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ಪಟಾಕಿ ವಹಿವಾಟು ನಡೆಸಲು ವ್ಯಾಪಾರಿಗಳು ಸಜ್ಜಾಗಿದ್ದಾರೆ. ಆನ್‌ಲೈನ್‌ನಲ್ಲಿ ಪಟಾಕಿ ವ್ಯಾಪಾರವೂ ಜೋರಾಗಿವೆ. ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಬಳಸುವಂತೆ ರಾಜ್ಯ ಸರ್ಕಾರವು ಸಾಕಷ್ಟು ಅರಿವು ಮೂಡಿಸುತ್ತಿದ್ದರೂ, ಕೆಂಪು ಪಟಾಕಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಇದೀಗ ಪರಿಸರಕ್ಕೆ ಹಾನಿಯುಂಟು ಮಾಡುವ ಪಟಾಕಿ ವ್ಯವಹಾರ, ಮಾರಾಟ, ಖರೀದಿ ಬಗ್ಗೆ ನಿಗಾ ಇಡಲು ಖಾಕಿ ಪಡೆ ಸಜ್ಜಾಗಿದೆ.

ಹೊರ ರಾಜ್ಯಗಳಿಂದ ರಾಜ್ಯಕ್ಕೆ ಪೂರೈಕೆಯಾಗುವ ಪಟಾಕಿಗಳನ್ನು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಹೊರ ರಾಜ್ಯಗಳಿಂದ ರಾಜ್ಯಕ್ಕೆ ಪಟಾಕಿ ಸರಬರಾಜು ಮಾಡುವವರ ವಿರುದ್ಧ ಪೊಲೀಸರು ಇನ್ನಷ್ಟು ಬಿಗಿಯಾಗಿ ಕಣ್ಗಾವಲು ಇರಿಸಲು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದಲ್ಲೇಕಿಲ್ಲ ಪಟಾಕಿ ಉತ್ಪಾದನೆ?

ಹಸಿರು ಪಟಾಕಿ ಹೊರತುಪಡಿಸಿ ಇತರ ಪಟಾಕಿಗಳ ಮಾರಾಟ ಮಾಡುವ ಬಗ್ಗೆ ಕೆಎಸ್‌ಪಿಸಿಬಿ ಮೇಲ್ವಿಚಾರಣೆ ಮಾಡುತ್ತಿದೆ. ಪಟಾಕಿ ಉತ್ಪಾದನೆ ಮಾಡುವ ಘಟಕ ಇದ್ದರೆ ಮಾತ್ರ ಅಂತಹ ಕಡೆಗಳಿಗೆ ದಾಳಿ ನಡೆಸಿ ಅವುಗಳನ್ನು ಜಪ್ತಿ ಮಾಡಲು ಕೆಎಸ್‌ಪಿಸಿಬಿಗೆ ಅವಕಾಶಗಳಿವೆ. ಆದರೆ, ಕರ್ನಾಟಕದಲ್ಲಿ ಪಟಾಕಿ ಉತ್ಪಾದನ ಘಟಕಗಳಿಲ್ಲ. ಇಲ್ಲಿನ ವಾತಾವರಣದಲ್ಲಿ ತೇವಾಂಶ ಅಧಿಕವಾಗಿರುವ ಹಿನ್ನಲೆಯಲ್ಲಿ ಪಟಾಕಿ ಉತ್ಪಾದನೆಗೆ ಕರ್ನಾಟಕ ಸೂಕ್ತವಾಗಿಲ್ಲ. ಇಲ್ಲಿ ಪಟಾಕಿ ಉತ್ಪಾದಿಸಿದರೂ ಅದು ಸಿಡಿಸಲು ಯೋಗ್ಯವಾಗಿರುವುದಿಲ್ಲ. ಈ ಎಲ್ಲ ಕಾರಣಗಳಿಂದ ಹೊರ ರಾಜ್ಯ ಪ್ರಮುಖವಾಗಿ ತಮಿಳುನಾಡಿನಿಂದ ಹೆಚ್ಚಾಗಿ ಕರ್ನಾಟಕಕ್ಕೆ ಪಟಾಕಿಗಳು ಬರುತ್ತಿವೆ.

ಆನ್‌ಲೈನ್‌ನಲ್ಲಿ ಮಾರಿದರೂ ಕ್ರಮ

ಮಾರುಕಟ್ಟೆಗಳಲ್ಲಿ ಕೆಂಪು ಪಟಾಕಿಗಳ ಮಾರಾಟ ಮಾಡುವವರು, ಪಟಾಕಿ ಸಿಡಿಸಿರುವವರ ವಿರುದ್ಧವೂ ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಆದರೆ ಆನ್‌ಲೈನ್‌ನಲ್ಲಿ ವಿವಿಧ ಕಂಪೆನಿಗಳು ಕರ್ನಾಟಕದಲ್ಲಿ ನಿಷೇಧಿಸಲಾದ ಪಟಾಕಿಗಳನ್ನು ಮಾರಾಟ ಮಾಡುವ ಆರೋಪಗಳು ಕೇಳಿ ಬಂದಿವೆ. ಇದು ಅಪರಾಧವಾಗಿದ್ದು, ಸೈಬರ್‌ ಕ್ರೈಂ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಂಗಳೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ರಾಯಚೂರು, ಉಡುಪಿ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರಮುಖ ನಗರಗಳಲ್ಲಿ ಪೊಲೀಸರ ಕಣ್ತಪ್ಪಿಸಿ ನಿಷೇಧಿತ ಕೆಂಪು ಪಟಾಕಿ ಮಾರಾಟ ಮಾಡಲು ವ್ಯಾಪಾರಿಗಳು ಮುಂದಾಗಿರುವ ಆರೋಪ ಕೇಳಿ ಬಂದಿದೆ.

ತಮಿಳುನಾಡಿನಿಂದ ಅತ್ಯಧಿಕ ಪಟಾಕಿ ರಾಜ್ಯಕ್ಕೆ ರವಾನೆ

ಪಟಾಕಿ ಎಂದರೆ ದೇಶದಲ್ಲೇ ಮೊದಲ ಹೆಸರು ಕೇಳಿಬರುವುದು ಕರ್ನಾಟಕದ ನೆರೆ ರಾಜ್ಯವಾಗಿರುವ ತಮಿಳುನಾಡು. ತಮಿಳುನಾಡಿನಿಂದ ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕಕ್ಕೆ ದೊಡ್ಡ ಪ್ರಮಾಣದ ಪಟಾಕಿ ಬರುವ ಸಾಧ್ಯತೆಗಳಿವೆ. ತಮಿಳುನಾಡಿನ ಶಿವಕಾಶಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನಿಷೇಧಿತ ಕೆಂಪು ಪಟಾಕಿ ತಯಾರಿಸಲಾಗಿವೆ ಎಂದು ತಿಳಿದು ಬಂದಿದೆ. ಇದೇ ಪಟಾಕಿಗಳು ರಿಯಾಯಿತಿ ದರದಲ್ಲಿ ರಾಜ್ಯಕ್ಕೆ ಕಾಲಿಡುವ ಸಾಧ್ಯತೆಗಳಿವೆ. ಏಕೆಂದರೆ ತಮಿಳುನಾಡಿನಿಂದ ಕರ್ನಾಟಕ, ಆಂಧ್ರ, ಕೇರಳಕ್ಕೆ ಹೆಚ್ಚಿನ ಸಾಗಾಣಿಕೆ ವೆಚ್ಚ ತಗಲುವುದಿಲ್ಲ. ಹೀಗಾಗಿ ಇಲ್ಲಿನ ಪಟಾಕಿಗಳು ನೆರೆ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬರುತ್ತವೆ ಎನ್ನುತ್ತಾರೆ ಪರಿಸರ ತಜ್ಞರು.

ಹಸಿರು ಪಟಾಕಿ ಖಾತ್ರಿ ಮಾಡಿಕೊಳ್ಳುವುದು ಹೇಗೆ?

ಗ್ರಾಹಕರು ತಾವು ಕೊಳ್ಳುವ ಪಟಾಕಿಗಳು ಹಸಿರು ಪಟಾಕಿ ಹೌದೇ? ಇಲ್ಲವೇ? ಎಂಬುದನ್ನು ಖಾತರಿಪಡಿಸಿಕೊಳ್ಳಲು ಪಟಾಕಿ ಪ್ಯಾಕ್‌ನ ಮೇಲಿರುವ ಕ್ಯೂಆರ್‌ ಕೋಡ್‌ನ್ನು ಸ್ಕ್ಯಾನ್‌ ಮಾಡುವ ಮೂಲಕ ಅರಿತುಕೊಳ್ಳಬಹುದಾಗಿದೆ.

“ದೀಪದಿಂದ ದೀಪ ಹಚ್ಚಿ ದೀಪಾವಳಿ ಆಚರಿಸಬೇಕೇ ಹೊರತು ಪಟಾಕಿ ಹಚ್ಚಿ ಅಲ್ಲ. ಪಟಾಕಿ ಹಚ್ಚಲೇ ಬೇಕು ಎಂದಾದರೆ ಹಸಿರು ಪಟಾಕಿ ಮಾತ್ರ ಸಿಡಿಸಿ. 125 ಡೆಸಿಬಲ್‌ಗಿಂತ ಹೆಚ್ಚು ತೀವ್ರತೆಯ ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿ ಸಿಡಿಸಬಾರದು. ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅರಣ್ಯ ಸಚಿವ ಈಶ್ವರ್ ಖoಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

2 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

3 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

4 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

8 hours ago