ನಿಷೇಧಿತ ಮಾಲಿನ್ಯಕಾರಕ ಪಟಾಕಿ ಮಾರಾಟ, ಬಳಕೆ ನಿಷೇಧ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿಂದು ದೀಪಾವಳಿ ಹಬ್ಬದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಮಾಲಿನ್ಯಕಾರಕ , ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂಬ ಸರ್ವೋಚ್ಛ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಹಚ್ಚಲು ಅವಕಾಶವಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳು (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು ಎಂದರು.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಿ ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದೆ ಯಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೊಲು ಹಾಕಿಕೊಳ್ಳಬೇಕು, ಸಾಗಾಟ ಮಾಡುವ ವಾಹನವನ್ನು ವಶಪಡಿಸಿಕೊಳ್ಳಬೇಕು ಎಂದು ಪೋಲಿಸ್ ಅಧಿಕಾರಿಗಳಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಪಟಾಕಿ ಅಂಗಡಿಗಳನ್ನು ತೆರೆದ ಪ್ರದೇಶದಲ್ಲಿ ಮತ್ತು ಅಂಗಡಿಗಳ ನಡುವೆ ಸಾಕಷ್ಟು ಅಂತರ ಇರುವಂತೆ ಮತ್ತು ಅಂಗಡಿಗಳ ಮುಂದೆ ಸಾರ್ವಜನಿಕರು ಹೆಚ್ಚು ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು. ಅಗ್ನಿಶಾಮಕ ದಳದವರೂ ಜಾಗೃತರಾಗಿರಿ ಎಂದರು.

ಪಟಾಕಿಗಳನ್ನು ಹಗಲು ಸಮಯದಲ್ಲಿ ಮಾತ್ರ ಮಾರಾಟ ಮಾಡಬೇಕು. ಪಟಾಕಿ ಅಂಗಡಿಗಳ ಮಾಲೀಕರು ಯಾವುದೇ ಕಾರಣಕ್ಕೂ ಪಾಲಕರ ಸಮಕ್ಷಮ ಇಲ್ಲದೆ 18 ವರ್ಷದೊಳಗಿನ ಮಕ್ಕಳಿಗೆ ಪಟಾಕಿ ನೀಡುವಂತಿಲ್ಲ ಈ ಬಗ್ಗೆ ಮಾರಾಟಗಾರರ ತಿಳುವಳಿಕೆ ನೀಡಿ ಎಂದು ಪೊಲೀಸ್, ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಎಂದು ಜಿಲ್ಲಾಧಿಕಾರಿ ಕೋರಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗ ಶ್ರೀ, ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗೇಶ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಮಟ್ಟದ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

5 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

6 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

7 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

9 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

10 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

21 hours ago