Categories: ಕೋಲಾರ

ನೀಟ್ ಅಕ್ರಮ ತನಿಖೆಯೊಂದಿಗೆ ಮರು ಪರೀಕ್ಷೆ ನಡೆಸುವಂತೆ ಎಎಪಿ ಪಕ್ಷ ಒತ್ತಾಯ

ಕೋಲಾರ: ದೇಶಾದ್ಯಂತ ನಡೆದ ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್) 2024ರಲ್ಲಿ ನಡೆದಿರುವ ಅಕ್ರಮದ ಕುರಿತು ಸಿಬಿಐ ತನಿಖೆಗೆ ವಹಿಸಿ ಮರು ಪರೀಕ್ಷೆಗೆ ಆದೇಶಿಸುವಂತೆ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಸುರೇಶ್ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಯಿಂದ ದಕ್ಷಿಣ ಭಾರತದ ವಿಧ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ದೇಶದಲ್ಲಿ ಸುಮಾರು 4700 ಸೆಂಟರ್ ಗಳಲ್ಲಿ ನೀಟ್ ಪರೀಕ್ಷೆ ಬರೆದಿದ್ದಾರೆ‌. ಕೆಲವು ಸೆಂಟರ್ ಗಳಲ್ಲಿ ವಿದ್ಯಾರ್ಥಿಗಳಿಗೆ ಪೂರ್ಣ ಅಂಕ ಗಳಿಸಿದ್ದು, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ 6 ವಿದ್ಯಾರ್ಥಿಗಳು ಟಾಪ‌ರ್ ಆಗಿದ್ದಾರೆ. ಇದು ಅನೇಕ ಅನುಮಾನಗಳು ಮೂಡಿಸಿದೆ ಈ ಬಗ್ಗೆ ಕೇಂದ್ರ ಸರ್ಕಾರವು ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಲಕ್ಷಾಂತರ ವೈದ್ಯಕೀಯ ವಿಧ್ಯಾರ್ಥಿಗಳ ವ್ಯಾಸಂಗದ ಕನಸು ಭಗ್ನವಾಗಿದೆ. ಅವರಿಗೆ ಅನ್ಯಾಯವಾಗಲಿದೆ ನೀಟ್ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳು ಸಾಕಷ್ಟು ನಷ್ಟ ಅನುಭವಿಸಲಿದ್ದು, ವೈದ್ಯಕೀಯ ಕೋರ್ಸ್ ಸೀಟು ಗಿಟ್ಟಿಸಿಕೊಳ್ಳುವುದು ಕಷ್ಟಕರವಾಗಿದೆ ರಾಜ್ಯಗಳಿಗೆ ಸಿಗಬೇಕಾದ ಶೇಕಡಾ 15% ಮೀಸಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಬಾರೀ ಅನ್ಯಾಯವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕನಸ್ಸು ನುಚ್ಚು ನೂರಾಗಿ,ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಹೊಣೆ ಯಾರದು ಎಂದು ಪ್ರಶ್ನಿಸಿದರು.

ಪ್ರತೀ ಸಾಲಿನಲ್ಲಿ 3 ರಿಂದ 4 ವಿದ್ಯಾರ್ಥಿಗಳು ಟಾಪರ್ ಬರುತ್ತಿದ್ದರು, ಆದರೆ ಈ ಭಾರಿ ಸರಿ ಸುಮಾರು 60 ಕ್ಕಿಂತ ಹೆಚ್ಚು ಜನ ಉತ್ತರ ಭಾರತದವರೇ ಟಾಪರ್ ಗಳಾಗಿರುವುದು ಎಲ್ಲರ ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ನಮಗೆ ಇರುವ ಮಾಹಿತಿ ಪ್ರಕಾರ ವೃತ್ತಿಪರ ಡಾಕ್ಟರ್ ಗಳೇ ಈ ಪರೀಕ್ಷೆಯನ್ನು ಬರೆದಿದ್ದು, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಬಿಡುಗಡೆ ಗೊಂಡಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದು, ಕೆಲವು ರಾಜ್ಯಗಳಲ್ಲಿ ಪರೀಕ್ಷೆ ಸಮಯಕ್ಕಿಂತ ಅರ್ಧ ಗಂಟೆ ತಡವಾಗಿ ಪ್ರಶ್ನೆ ಪತ್ರಿಕೆ ಸರಬರಾಜಾಗಿದ್ದು, ಅದಕ್ಕಾಗಿ 60 ರಿಂದ 70 ಗ್ರೇಸ್ ಮಾರ್ಕ್ಸ್ ನೀಡಿರುವುದಾಗಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ, ಇದೆಲ್ಲಾ ಉತ್ತರ ಭಾರತ ವಿದ್ಯಾರ್ಥಿಗಳ ಪಾಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಭಾರತದ ಅದರಲ್ಲೂ ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಾರೀ ಅನ್ಯಾಯವಾಗಿದ್ದು ಕೂಡಲೇ ರಾಜ್ಯ ಸರ್ಕಾರವು ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನ ಸರಿಪಡಿಸುವಲ್ಲಿ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್, ರಾಜ್ಯ ಜಂಟಿ ಕಾರ್ಯದರ್ಶಿ ನಾಗರಾಜ್, ನಗರ ಘಟಕದ ಅಧ್ಯಕ್ಷ ನಿಸ್ವಾನ್ ಇದ್ದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

4 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

10 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

12 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago