Categories: ಕೋಲಾರ

ನೀಟ್ ಅಕ್ರಮ ತನಿಖೆಯೊಂದಿಗೆ ಮರು ಪರೀಕ್ಷೆ ನಡೆಸುವಂತೆ ಎಎಪಿ ಪಕ್ಷ ಒತ್ತಾಯ

ಕೋಲಾರ: ದೇಶಾದ್ಯಂತ ನಡೆದ ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್) 2024ರಲ್ಲಿ ನಡೆದಿರುವ ಅಕ್ರಮದ ಕುರಿತು ಸಿಬಿಐ ತನಿಖೆಗೆ ವಹಿಸಿ ಮರು ಪರೀಕ್ಷೆಗೆ ಆದೇಶಿಸುವಂತೆ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಸುರೇಶ್ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಯಿಂದ ದಕ್ಷಿಣ ಭಾರತದ ವಿಧ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ದೇಶದಲ್ಲಿ ಸುಮಾರು 4700 ಸೆಂಟರ್ ಗಳಲ್ಲಿ ನೀಟ್ ಪರೀಕ್ಷೆ ಬರೆದಿದ್ದಾರೆ‌. ಕೆಲವು ಸೆಂಟರ್ ಗಳಲ್ಲಿ ವಿದ್ಯಾರ್ಥಿಗಳಿಗೆ ಪೂರ್ಣ ಅಂಕ ಗಳಿಸಿದ್ದು, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ 6 ವಿದ್ಯಾರ್ಥಿಗಳು ಟಾಪ‌ರ್ ಆಗಿದ್ದಾರೆ. ಇದು ಅನೇಕ ಅನುಮಾನಗಳು ಮೂಡಿಸಿದೆ ಈ ಬಗ್ಗೆ ಕೇಂದ್ರ ಸರ್ಕಾರವು ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಲಕ್ಷಾಂತರ ವೈದ್ಯಕೀಯ ವಿಧ್ಯಾರ್ಥಿಗಳ ವ್ಯಾಸಂಗದ ಕನಸು ಭಗ್ನವಾಗಿದೆ. ಅವರಿಗೆ ಅನ್ಯಾಯವಾಗಲಿದೆ ನೀಟ್ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳು ಸಾಕಷ್ಟು ನಷ್ಟ ಅನುಭವಿಸಲಿದ್ದು, ವೈದ್ಯಕೀಯ ಕೋರ್ಸ್ ಸೀಟು ಗಿಟ್ಟಿಸಿಕೊಳ್ಳುವುದು ಕಷ್ಟಕರವಾಗಿದೆ ರಾಜ್ಯಗಳಿಗೆ ಸಿಗಬೇಕಾದ ಶೇಕಡಾ 15% ಮೀಸಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಬಾರೀ ಅನ್ಯಾಯವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕನಸ್ಸು ನುಚ್ಚು ನೂರಾಗಿ,ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಹೊಣೆ ಯಾರದು ಎಂದು ಪ್ರಶ್ನಿಸಿದರು.

ಪ್ರತೀ ಸಾಲಿನಲ್ಲಿ 3 ರಿಂದ 4 ವಿದ್ಯಾರ್ಥಿಗಳು ಟಾಪರ್ ಬರುತ್ತಿದ್ದರು, ಆದರೆ ಈ ಭಾರಿ ಸರಿ ಸುಮಾರು 60 ಕ್ಕಿಂತ ಹೆಚ್ಚು ಜನ ಉತ್ತರ ಭಾರತದವರೇ ಟಾಪರ್ ಗಳಾಗಿರುವುದು ಎಲ್ಲರ ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ನಮಗೆ ಇರುವ ಮಾಹಿತಿ ಪ್ರಕಾರ ವೃತ್ತಿಪರ ಡಾಕ್ಟರ್ ಗಳೇ ಈ ಪರೀಕ್ಷೆಯನ್ನು ಬರೆದಿದ್ದು, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಬಿಡುಗಡೆ ಗೊಂಡಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದು, ಕೆಲವು ರಾಜ್ಯಗಳಲ್ಲಿ ಪರೀಕ್ಷೆ ಸಮಯಕ್ಕಿಂತ ಅರ್ಧ ಗಂಟೆ ತಡವಾಗಿ ಪ್ರಶ್ನೆ ಪತ್ರಿಕೆ ಸರಬರಾಜಾಗಿದ್ದು, ಅದಕ್ಕಾಗಿ 60 ರಿಂದ 70 ಗ್ರೇಸ್ ಮಾರ್ಕ್ಸ್ ನೀಡಿರುವುದಾಗಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ, ಇದೆಲ್ಲಾ ಉತ್ತರ ಭಾರತ ವಿದ್ಯಾರ್ಥಿಗಳ ಪಾಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಭಾರತದ ಅದರಲ್ಲೂ ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಾರೀ ಅನ್ಯಾಯವಾಗಿದ್ದು ಕೂಡಲೇ ರಾಜ್ಯ ಸರ್ಕಾರವು ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನ ಸರಿಪಡಿಸುವಲ್ಲಿ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್, ರಾಜ್ಯ ಜಂಟಿ ಕಾರ್ಯದರ್ಶಿ ನಾಗರಾಜ್, ನಗರ ಘಟಕದ ಅಧ್ಯಕ್ಷ ನಿಸ್ವಾನ್ ಇದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago