ಕೋಲಾರ: ದೇಶಾದ್ಯಂತ ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮವಾಗಿದ್ದು ಇದರಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ವಿಧ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕೂಡಲೇ ಉನ್ನತ ಮಟ್ಟದ ಸಂಸ್ಥೆಯಿಂದ ತನಿಖೆ ನಡೆಸುವಂತೆ ಎನ್.ಎಸ್.ಯು.ಐ ಮಾಜಿ ಜಿಲ್ಲಾ ಅಧ್ಯಕ್ಷ ಹಾಗೂ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಕೆಲವರಿಗೆ ಹೆಚ್ಚು ಅಂಕಗಳು ಬಂದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ನೀಟ್ ಪರೀಕ್ಷೆ ಬರೆದ ಆಕಾಂಕ್ಷಿಗಳೇ ಆರೋಪಿಸಿದ್ದಾರೆ. ಈ ಕಾರಣದಿಂದಲೇ ಒಂದೇ ಪರೀಕ್ಷಾ ಕೇಂದ್ರದ 6 ಅಭ್ಯರ್ಥಿಗಳು ಸೇರಿದಂತೆ 67 ಅಭ್ಯರ್ಥಿಗಳು ಪ್ರಥಮ ರ್ಯಾಂಕ್ ಪಡೆಯಲು ಹೇಗೆ ಸಾಧ್ಯವಾಗುತ್ತದೆ ಇದರಿಂದಲೇ ಅಕ್ರಮವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.
ನೀಟ್ ಪರೀಕ್ಷೆ ಹಾಗೂ ಮೌಲ್ಯಮಾಪನ ಸರಿಯಾಗಿ ನಡೆಸಿಲ್ಲ ಜೊತೆಗೆ ಪರೀಕ್ಷೆ ಪ್ರಕ್ರಿಯೆ ಹಾಗೂ ಫಲಿತಾಂಶದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸಿವೆ. ಪರೀಕ್ಷೆ ದಿನವೇ ದೇಶದ ಹಲವೆಡೆ ಅಕ್ರಮಗಳು ನಡೆದಿದೆ ಎಂಬುದು ಬೆಳಕಿಗೆ ಬಂದಿತ್ತು. ಪ್ರಶ್ನೆ ಪತ್ರಿಕೆಗಳ ವಿತರಣೆಯಲ್ಲೂ ಅಕ್ರಮಗಳು ನಡೆದಿದ್ದು ಇದರಿಂದಾಗಿ ದೇಶದ ಭವಿಷ್ಯವನ್ನು ಸೃಷ್ಟಿಸುವ ವಿಧ್ಯಾರ್ಥಿಗಳ ಜೊತೆಗೆ ಕೇಂದ್ರ ಸರಕಾರವೇ ಚಲ್ಲಾಟವಾಡತ್ತಿದೆ ಎಂದು ಆರೋಪಿಸಿದರು
ಕೇಂದ್ರ ಸರ್ಕಾರವೇ ವೈದ್ಯಕೀಯ ಸಂಸ್ಥೆಗಳ ಪ್ರವೇಶಕ್ಕೆ ನಡೆಸುವ ಈ ಪರೀಕ್ಷೆಯ ಪಾರದರ್ಶಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅನುಮಾನ ಬಂದಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಪರೀಕ್ಷೆಯ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಲ್ಲ ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂದು ಸೀಸಂದ್ರ ಗೋಪಾಲಗೌಡ ಎಂದು ಒತ್ತಾಯಿಸಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…