ಬುಲಂದ್ಶಹರ್: ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಗಂಗಾ ಬ್ಯಾರೇಜ್ನಲ್ಲಿ ಎಂಟು ಅಡಿ ಉದ್ದದ ಮೊಸಳೆಯೊಂದು ಕಾಲುವೆಯಿಂದ ಹೊರಬಂದಿದೆ.
ಈ ಮೊಸಳೆ ಮತ್ತೆ ನೀರಿಗೆ ಹೋಗಲು ಪ್ರಯತ್ನಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿನ ಫುಲ್ ವೈರಲ್ ಆಗಿದೆ. ಈ ಘಟನೆಯು ಸುತ್ತಮುತ್ತಲಿನ ಜನರಲ್ಲಿ ಭಯವನ್ನು ಉಂಟುಮಾಡಿತ್ತು.
ಅರಣ್ಯ ಇಲಾಖೆ ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ನೀರಿಗೆ ಹೋಗಲು ಹೆಣಗಾಡುತ್ತಿದ್ದ ಮೊಸಳೆಯನ್ನು ರಕ್ಷಿಸುವ ಕಾರ್ಯ ನಡೆಸಿದರು.
ಮೊಸಳೆಯನ್ನು ಹಿಡಿದ ನಂತರ, ಅಧಿಕಾರಿಗಳು ಅದರ ಕೈ ಕಾಲುಗಳನ್ನು ಕಟ್ಟಿಹಾಕಿದರು ಮತ್ತು ಜನರು ಅದನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು ಸುರಕ್ಷಿತ ಸ್ಥಳಕ್ಕೆ ಬಿಟ್ಟರು.
ಇದೇ ರೀತಿಯ ನಿದರ್ಶನಗಳು ನಗರದಲ್ಲಿ ನಡೆದಿವೆ. ಅಕ್ಟೋಬರ್ 2022 ರಲ್ಲಿ, ಬುಲಂದ್ಶಹರ್ನ ಕಸ್ಬಾ ಪಹಾಸು ನಿವಾಸಿಗಳಲ್ಲಿ 10-ಅಡಿ ಉದ್ದದ ದೈತ್ಯ ಮೊಸಳೆಯು ಭೀತಿಯನ್ನು ಉಂಟುಮಾಡಿತು. ಸ್ಥಳೀಯರು ಮೊಸಳೆಯನ್ನು ಹಿಡಿದು ಓಡಿಸಲು ಯತ್ನಿಸಿದರಾದರೂ ವಿಫಲವಾಗಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಪೊಲೀಸರು ಮೂರು ಗಂಟೆಗಳ ಬಳಿಕ ಮೊಸಳೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…