ಬುಲಂದ್ಶಹರ್: ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಗಂಗಾ ಬ್ಯಾರೇಜ್ನಲ್ಲಿ ಎಂಟು ಅಡಿ ಉದ್ದದ ಮೊಸಳೆಯೊಂದು ಕಾಲುವೆಯಿಂದ ಹೊರಬಂದಿದೆ.
ಈ ಮೊಸಳೆ ಮತ್ತೆ ನೀರಿಗೆ ಹೋಗಲು ಪ್ರಯತ್ನಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿನ ಫುಲ್ ವೈರಲ್ ಆಗಿದೆ. ಈ ಘಟನೆಯು ಸುತ್ತಮುತ್ತಲಿನ ಜನರಲ್ಲಿ ಭಯವನ್ನು ಉಂಟುಮಾಡಿತ್ತು.
ಅರಣ್ಯ ಇಲಾಖೆ ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ನೀರಿಗೆ ಹೋಗಲು ಹೆಣಗಾಡುತ್ತಿದ್ದ ಮೊಸಳೆಯನ್ನು ರಕ್ಷಿಸುವ ಕಾರ್ಯ ನಡೆಸಿದರು.
ಮೊಸಳೆಯನ್ನು ಹಿಡಿದ ನಂತರ, ಅಧಿಕಾರಿಗಳು ಅದರ ಕೈ ಕಾಲುಗಳನ್ನು ಕಟ್ಟಿಹಾಕಿದರು ಮತ್ತು ಜನರು ಅದನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು ಸುರಕ್ಷಿತ ಸ್ಥಳಕ್ಕೆ ಬಿಟ್ಟರು.
ಇದೇ ರೀತಿಯ ನಿದರ್ಶನಗಳು ನಗರದಲ್ಲಿ ನಡೆದಿವೆ. ಅಕ್ಟೋಬರ್ 2022 ರಲ್ಲಿ, ಬುಲಂದ್ಶಹರ್ನ ಕಸ್ಬಾ ಪಹಾಸು ನಿವಾಸಿಗಳಲ್ಲಿ 10-ಅಡಿ ಉದ್ದದ ದೈತ್ಯ ಮೊಸಳೆಯು ಭೀತಿಯನ್ನು ಉಂಟುಮಾಡಿತು. ಸ್ಥಳೀಯರು ಮೊಸಳೆಯನ್ನು ಹಿಡಿದು ಓಡಿಸಲು ಯತ್ನಿಸಿದರಾದರೂ ವಿಫಲವಾಗಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಪೊಲೀಸರು ಮೂರು ಗಂಟೆಗಳ ಬಳಿಕ ಮೊಸಳೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…