ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಹಳ್ಳಿ ಗ್ರಾಮದಲ್ಲಿರುವ ನೀರಿನ ತೊಟ್ಟಿಗಳಲ್ಲಿ ಪಾಚಿ(ಕೊಪ್ಪಿಜೊಂಡು) ಸಂಗ್ರಹವಾಗಿದ್ದು, ಸ್ವಚ್ಛಗೊಳಿಸದೇ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ತೊಟ್ಟಿಯಲ್ಲಿ ಸಂಪೂರ್ಣ ಪಾಚಿ ಸಂಗ್ರಹವಾಗಿದ್ದು, ನೀರು ಬಳಕೆಗೆ ಬಾರದಂತಾಗಿದೆ. ಜನ-ಜಾನುವರು, ಆಡು, ಕುರಿ, ಮೇಕೆಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಹಾಗೂ ರೈತರಿಗೆ ಅನುಕೂಲವಾಗಲೆಂದು ಈ ತೊಟ್ಟಿಗಳನ್ನು ನಿರ್ಮಿಸಲಾಗಿದೆ. ತೊಟ್ಟಿಯ ಸುತ್ತ ಮಲಿನ ನೀರು ನಿಂತು ದುರ್ವಾಸನೆ ಬೀರುತ್ತಿದ್ದು, ಕಾಲಿಡಲಾಗದ ಪರಿಸ್ಥಿತಿ ಇದೆ ಎಂದು ಆಕ್ರೋಶವ್ಯಕ್ತಪಡಿಸಿದರು.
ಪಾಚಿ ನೀರು ಕುಡಿದ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಕೂಡಲೇ ಸಂಬಂಧಿಸಿದ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತೊಟ್ಟಿ ಶುಚಿಗೊಳಿಸಿ ಬ್ಲೀಚಿಂಗ್ ಪೌಡರ್ ಹಾಕಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಸಾಕಾಗಿ ಇಂದು ಊರಿನ ಯುವಕರು ಸೇರಿ ಗಿಡಗಂಟಿಗಳನ್ನು ತೆರವುಗೊಲಿಸಿ, ತೊಟ್ಟಿಗಳನ್ನು ಸ್ವಚ್ಛಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ…
ಗ್ರಾಮದಲ್ಲಿ ಒಟ್ಟು 4 ಮಿನಿ ಟ್ಯಾಂಕ್ ಗಳು, ಮೂರು ತೊಟ್ಟಿಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇವುಗಳನ್ನು ಹಲವು ತಿಂಗಳುಗಳಿಂದ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ನಿರ್ವಹಣೆ ಮಾಡದೇ ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಇದರಿಂದ ತೊಟ್ಟಿ ಹಾಗೂ ಟ್ಯಾಂಕ್ ಗಳ ಸುತ್ತಾಮುತ್ತಾ ಪಾಚಿ, ಗಿಡಗಂಟಿಗಳು ಬೆಳೆದು ಸೊಳ್ಳೆಗಳ ತಾಣವಾಗಿದೆ. ರೋಗರುಜಿನಗಳ ಭೀತಿಯಲ್ಲಿ ಗ್ರಾಮಸ್ಥರು ಇದ್ದಾರೆ ಎಂದು ಕಿಡಿಕಾರಿದರು.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…