ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಹಳ್ಳಿ ಗ್ರಾಮದಲ್ಲಿರುವ ನೀರಿನ ತೊಟ್ಟಿಗಳಲ್ಲಿ ಪಾಚಿ(ಕೊಪ್ಪಿಜೊಂಡು) ಸಂಗ್ರಹವಾಗಿದ್ದು, ಸ್ವಚ್ಛಗೊಳಿಸದೇ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ತೊಟ್ಟಿಯಲ್ಲಿ ಸಂಪೂರ್ಣ ಪಾಚಿ ಸಂಗ್ರಹವಾಗಿದ್ದು, ನೀರು ಬಳಕೆಗೆ ಬಾರದಂತಾಗಿದೆ. ಜನ-ಜಾನುವರು, ಆಡು, ಕುರಿ, ಮೇಕೆಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಹಾಗೂ ರೈತರಿಗೆ ಅನುಕೂಲವಾಗಲೆಂದು ಈ ತೊಟ್ಟಿಗಳನ್ನು ನಿರ್ಮಿಸಲಾಗಿದೆ. ತೊಟ್ಟಿಯ ಸುತ್ತ ಮಲಿನ ನೀರು ನಿಂತು ದುರ್ವಾಸನೆ ಬೀರುತ್ತಿದ್ದು, ಕಾಲಿಡಲಾಗದ ಪರಿಸ್ಥಿತಿ ಇದೆ ಎಂದು ಆಕ್ರೋಶವ್ಯಕ್ತಪಡಿಸಿದರು.
ಪಾಚಿ ನೀರು ಕುಡಿದ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಕೂಡಲೇ ಸಂಬಂಧಿಸಿದ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತೊಟ್ಟಿ ಶುಚಿಗೊಳಿಸಿ ಬ್ಲೀಚಿಂಗ್ ಪೌಡರ್ ಹಾಕಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಸಾಕಾಗಿ ಇಂದು ಊರಿನ ಯುವಕರು ಸೇರಿ ಗಿಡಗಂಟಿಗಳನ್ನು ತೆರವುಗೊಲಿಸಿ, ತೊಟ್ಟಿಗಳನ್ನು ಸ್ವಚ್ಛಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ…
ಗ್ರಾಮದಲ್ಲಿ ಒಟ್ಟು 4 ಮಿನಿ ಟ್ಯಾಂಕ್ ಗಳು, ಮೂರು ತೊಟ್ಟಿಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಇವುಗಳನ್ನು ಹಲವು ತಿಂಗಳುಗಳಿಂದ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ನಿರ್ವಹಣೆ ಮಾಡದೇ ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಇದರಿಂದ ತೊಟ್ಟಿ ಹಾಗೂ ಟ್ಯಾಂಕ್ ಗಳ ಸುತ್ತಾಮುತ್ತಾ ಪಾಚಿ, ಗಿಡಗಂಟಿಗಳು ಬೆಳೆದು ಸೊಳ್ಳೆಗಳ ತಾಣವಾಗಿದೆ. ರೋಗರುಜಿನಗಳ ಭೀತಿಯಲ್ಲಿ ಗ್ರಾಮಸ್ಥರು ಇದ್ದಾರೆ ಎಂದು ಕಿಡಿಕಾರಿದರು.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…