ನೀರಿನ ತೊಟ್ಟಿಗಳಲ್ಲಿ ಪಾಚಿ ಸಂಗ್ರಹ: ಸ್ವಚ್ಛಗೊಳಿಸದೇ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಹಳ್ಳಿ ಗ್ರಾಮದಲ್ಲಿರುವ ನೀರಿನ ತೊಟ್ಟಿಗಳಲ್ಲಿ ಪಾಚಿ(ಕೊಪ್ಪಿಜೊಂಡು) ಸಂಗ್ರಹವಾಗಿದ್ದು, ಸ್ವಚ್ಛಗೊಳಿಸದೇ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ತೊಟ್ಟಿಯಲ್ಲಿ ಸಂಪೂರ್ಣ ಪಾಚಿ ಸಂಗ್ರಹವಾಗಿದ್ದು, ನೀರು ಬಳಕೆಗೆ ಬಾರದಂತಾಗಿದೆ.‌ ಜನ-ಜಾನುವರು, ಆಡು, ಕುರಿ, ಮೇಕೆಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಹಾಗೂ ರೈತರಿಗೆ ಅನುಕೂಲವಾಗಲೆಂದು ಈ ತೊಟ್ಟಿಗಳನ್ನು ನಿರ್ಮಿಸಲಾಗಿದೆ. ತೊಟ್ಟಿಯ ಸುತ್ತ ಮಲಿನ ನೀರು ನಿಂತು ದುರ್ವಾಸನೆ ಬೀರುತ್ತಿದ್ದು, ಕಾಲಿಡಲಾಗದ ಪರಿಸ್ಥಿತಿ ಇದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಪಾಚಿ ನೀರು ಕುಡಿದ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಕೂಡಲೇ ಸಂಬಂಧಿಸಿದ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತೊಟ್ಟಿ ಶುಚಿಗೊಳಿಸಿ ಬ್ಲೀಚಿಂಗ್ ಪೌಡರ್ ಹಾಕಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಸಾಕಾಗಿ ಇಂದು ಊರಿನ ಯುವಕರು ಸೇರಿ ಗಿಡಗಂಟಿಗಳನ್ನು ತೆರವುಗೊಲಿಸಿ, ತೊಟ್ಟಿಗಳನ್ನು ಸ್ವಚ್ಛಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ…

ಗ್ರಾಮದಲ್ಲಿ ಒಟ್ಟು 4 ಮಿನಿ ಟ್ಯಾಂಕ್ ಗಳು, ಮೂರು ತೊಟ್ಟಿಗಳನ್ನು ನಿರ್ಮಾಣ‌ ಮಾಡಲಾಗಿದೆ. ಆದರೆ ಇವುಗಳನ್ನು ಹಲವು ತಿಂಗಳುಗಳಿಂದ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ನಿರ್ವಹಣೆ ಮಾಡದೇ ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಇದರಿಂದ ತೊಟ್ಟಿ ಹಾಗೂ ಟ್ಯಾಂಕ್ ಗಳ ಸುತ್ತಾಮುತ್ತಾ ಪಾಚಿ, ಗಿಡಗಂಟಿಗಳು ಬೆಳೆದು ಸೊಳ್ಳೆಗಳ ತಾಣವಾಗಿದೆ. ರೋಗರುಜಿನಗಳ ಭೀತಿಯಲ್ಲಿ ಗ್ರಾಮಸ್ಥರು ಇದ್ದಾರೆ ಎಂದು ಕಿಡಿಕಾರಿದರು.

Ramesh Babu

Journalist

Recent Posts

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

5 minutes ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

1 hour ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

20 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

23 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

23 hours ago