ನೀರಿನ ತೊಟ್ಟಿಗಳಲ್ಲಿ ಪಾಚಿ ಸಂಗ್ರಹ: ಸ್ವಚ್ಛಗೊಳಿಸದೇ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಹಳ್ಳಿ ಗ್ರಾಮದಲ್ಲಿರುವ ನೀರಿನ ತೊಟ್ಟಿಗಳಲ್ಲಿ ಪಾಚಿ(ಕೊಪ್ಪಿಜೊಂಡು) ಸಂಗ್ರಹವಾಗಿದ್ದು, ಸ್ವಚ್ಛಗೊಳಿಸದೇ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ತೊಟ್ಟಿಯಲ್ಲಿ ಸಂಪೂರ್ಣ ಪಾಚಿ ಸಂಗ್ರಹವಾಗಿದ್ದು, ನೀರು ಬಳಕೆಗೆ ಬಾರದಂತಾಗಿದೆ.‌ ಜನ-ಜಾನುವರು, ಆಡು, ಕುರಿ, ಮೇಕೆಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಹಾಗೂ ರೈತರಿಗೆ ಅನುಕೂಲವಾಗಲೆಂದು ಈ ತೊಟ್ಟಿಗಳನ್ನು ನಿರ್ಮಿಸಲಾಗಿದೆ. ತೊಟ್ಟಿಯ ಸುತ್ತ ಮಲಿನ ನೀರು ನಿಂತು ದುರ್ವಾಸನೆ ಬೀರುತ್ತಿದ್ದು, ಕಾಲಿಡಲಾಗದ ಪರಿಸ್ಥಿತಿ ಇದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಪಾಚಿ ನೀರು ಕುಡಿದ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಕೂಡಲೇ ಸಂಬಂಧಿಸಿದ ಗ್ರಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತೊಟ್ಟಿ ಶುಚಿಗೊಳಿಸಿ ಬ್ಲೀಚಿಂಗ್ ಪೌಡರ್ ಹಾಕಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಸಾಕಾಗಿ ಇಂದು ಊರಿನ ಯುವಕರು ಸೇರಿ ಗಿಡಗಂಟಿಗಳನ್ನು ತೆರವುಗೊಲಿಸಿ, ತೊಟ್ಟಿಗಳನ್ನು ಸ್ವಚ್ಛಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ…

ಗ್ರಾಮದಲ್ಲಿ ಒಟ್ಟು 4 ಮಿನಿ ಟ್ಯಾಂಕ್ ಗಳು, ಮೂರು ತೊಟ್ಟಿಗಳನ್ನು ನಿರ್ಮಾಣ‌ ಮಾಡಲಾಗಿದೆ. ಆದರೆ ಇವುಗಳನ್ನು ಹಲವು ತಿಂಗಳುಗಳಿಂದ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ನಿರ್ವಹಣೆ ಮಾಡದೇ ಬೇಜವಾಬ್ದಾರಿ ಮೆರೆಯುತ್ತಿದ್ದಾರೆ. ಇದರಿಂದ ತೊಟ್ಟಿ ಹಾಗೂ ಟ್ಯಾಂಕ್ ಗಳ ಸುತ್ತಾಮುತ್ತಾ ಪಾಚಿ, ಗಿಡಗಂಟಿಗಳು ಬೆಳೆದು ಸೊಳ್ಳೆಗಳ ತಾಣವಾಗಿದೆ. ರೋಗರುಜಿನಗಳ ಭೀತಿಯಲ್ಲಿ ಗ್ರಾಮಸ್ಥರು ಇದ್ದಾರೆ ಎಂದು ಕಿಡಿಕಾರಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

5 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

6 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

7 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

8 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

15 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago