ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಮುಖ್ಯ ಕಾರ್ಯನಿರ್ವಹಣಾಕಾರಿ ಡಾ. ವಾಸಂತಿ ಅಮರ್ ಬಿ.ವಿ ತಿಳಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದಲ್ಲಿನ ಜಿಲ್ಲಾಡಳಿತ ಭವನದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಆರಂಭಿಸಲಾದ ಕಂಟ್ರೋಲ್ ರೂಂಗೆ ಭೇಟಿ ನೀಡಿ, ಸಹಾಯವಾಣಿಗೆ ಬಂದ ಕರೆಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಪಂ ವತಿಯಿಂದ ಬೇಸಿಗೆ ಅವಧಿಯಲ್ಲಿ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಜಿಲ್ಲೆಯ ಯಾವುದೇ ಗ್ರಾಪಂ ವ್ಯಾಪ್ತಿಯಲ್ಲಿ ಸಮಸ್ಯೆಗಳು ಬಂದಲ್ಲಿ ಕರೆ ಮಾಡಲು 08022221050 ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಹಾಯವಾಣಿಗೆ ಸಿಬ್ಬಂದಿ ನೇಮಕ ಮಾಡಲಾಗಿದೆ. ಜನರು ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಆದಲ್ಲಿ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಬಂದ ಕರೆಯನ್ನು ಆಧರಿಸಿ ಶೀಘ್ರವಾಗಿ ಸ್ಪಂದಿಸಲಾಗುತ್ತಿದೆ ಎಂದರು.

ಬೇಸಿಗೆ ನೀರಿನ ನಿರ್ವಹಣೆಯ ಬಗ್ಗೆ ವಾಟ್ಸ್ಆಪ್ ಗ್ರೂಪ್ ಮಾಡಲಾಗಿದ್ದು, ಕರೆಗಳು ಬಂದ ಕೂಡಲೇ ಆಯಾ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿ ನೀರಿನ ಸಮಸ್ಯೆಗಳ ಬಗ್ಗೆ ತಿಳಿಯಲಾಗುತ್ತಿದ್ದು, ಅಗತ್ಯ ಕ್ರಮವಹಿಸಲಾಗುತ್ತಿದೆ. ಎಂದರು.

ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯೊಂದಿಗೆ ಸನ್ನದ್ಧವಾಗಿದೆ.  ಮುಂದಿನ 2 ತಿಂಗಳವರೆಗೂ ಕೂಡ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಬೋರ್‌ವೆಲ್, ಟ್ಯಾಂಕರ್‌ಗಳ ಮೂಲಕ ನೀರಿನ ಪೂರೈಕೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದರು.

ಸಹಾಯವಾಣಿಗೆ 94 ಕರೆಗಳು

ಜಿಲ್ಲಾಡಳಿತ ಭವನದಲ್ಲಿ ಬೇಸಿಗೆ ಹಿನ್ನೆಲೆ ಆರಂಭಿಸಲಾಗಿರುವ ಕಂಟ್ರೋಲ್ ರೂಂನಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಈವರೆಗೆ ಜಿಲ್ಲೆಯ 4 ತಾಲೂಕುಗಳಿಂದ ವಿವಿಧ ಒಟ್ಟು 94 ಕರೆಗಳು ಬಂದಿದೆ. ಜನರ ಸಮಸ್ಯೆಗಳಿಗೆ ಅಗತ್ಯ ಕ್ರಮವಹಿಸಿ, ತಕ್ಷಣ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ.

ಈ ವೇಳೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವುಕುಮಾರ್, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

17 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

21 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago