ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಮುಖ್ಯ ಕಾರ್ಯನಿರ್ವಹಣಾಕಾರಿ ಡಾ. ವಾಸಂತಿ ಅಮರ್ ಬಿ.ವಿ ತಿಳಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದಲ್ಲಿನ ಜಿಲ್ಲಾಡಳಿತ ಭವನದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಆರಂಭಿಸಲಾದ ಕಂಟ್ರೋಲ್ ರೂಂಗೆ ಭೇಟಿ ನೀಡಿ, ಸಹಾಯವಾಣಿಗೆ ಬಂದ ಕರೆಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಪಂ ವತಿಯಿಂದ ಬೇಸಿಗೆ ಅವಧಿಯಲ್ಲಿ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಜಿಲ್ಲೆಯ ಯಾವುದೇ ಗ್ರಾಪಂ ವ್ಯಾಪ್ತಿಯಲ್ಲಿ ಸಮಸ್ಯೆಗಳು ಬಂದಲ್ಲಿ ಕರೆ ಮಾಡಲು 08022221050 ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಹಾಯವಾಣಿಗೆ ಸಿಬ್ಬಂದಿ ನೇಮಕ ಮಾಡಲಾಗಿದೆ. ಜನರು ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಆದಲ್ಲಿ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಬಂದ ಕರೆಯನ್ನು ಆಧರಿಸಿ ಶೀಘ್ರವಾಗಿ ಸ್ಪಂದಿಸಲಾಗುತ್ತಿದೆ ಎಂದರು.

ಬೇಸಿಗೆ ನೀರಿನ ನಿರ್ವಹಣೆಯ ಬಗ್ಗೆ ವಾಟ್ಸ್ಆಪ್ ಗ್ರೂಪ್ ಮಾಡಲಾಗಿದ್ದು, ಕರೆಗಳು ಬಂದ ಕೂಡಲೇ ಆಯಾ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿ ನೀರಿನ ಸಮಸ್ಯೆಗಳ ಬಗ್ಗೆ ತಿಳಿಯಲಾಗುತ್ತಿದ್ದು, ಅಗತ್ಯ ಕ್ರಮವಹಿಸಲಾಗುತ್ತಿದೆ. ಎಂದರು.

ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯೊಂದಿಗೆ ಸನ್ನದ್ಧವಾಗಿದೆ.  ಮುಂದಿನ 2 ತಿಂಗಳವರೆಗೂ ಕೂಡ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಬೋರ್‌ವೆಲ್, ಟ್ಯಾಂಕರ್‌ಗಳ ಮೂಲಕ ನೀರಿನ ಪೂರೈಕೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದರು.

ಸಹಾಯವಾಣಿಗೆ 94 ಕರೆಗಳು

ಜಿಲ್ಲಾಡಳಿತ ಭವನದಲ್ಲಿ ಬೇಸಿಗೆ ಹಿನ್ನೆಲೆ ಆರಂಭಿಸಲಾಗಿರುವ ಕಂಟ್ರೋಲ್ ರೂಂನಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಈವರೆಗೆ ಜಿಲ್ಲೆಯ 4 ತಾಲೂಕುಗಳಿಂದ ವಿವಿಧ ಒಟ್ಟು 94 ಕರೆಗಳು ಬಂದಿದೆ. ಜನರ ಸಮಸ್ಯೆಗಳಿಗೆ ಅಗತ್ಯ ಕ್ರಮವಹಿಸಿ, ತಕ್ಷಣ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ.

ಈ ವೇಳೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವುಕುಮಾರ್, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

2 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

12 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

14 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

19 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

20 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

21 hours ago