ನೀವು ಮತದಾನ ಮಾಡಿ ಮತ್ತೊಬ್ಬರಿಗೂ ಮತದಾನ ಮಾಡಲು ಪ್ರೇರೇಪಿಸಿ- ಜಿಲ್ಲಾಧಿಕಾರಿ ಆರ್ ಲತಾ

ಹಬ್ಬದ ರೀತಿಯಲ್ಲಿ ಮತದಾನ ದಿನವನ್ನು ಆಚರಣೆ ಮಾಡಿ, ನೀವು ಮತದಾನ ಮಾಡಿ ನಿಮ್ಮ ಮನೆಯವರನ್ನು, ನೆರೆಹೊರೆಯವರನ್ನು ಮತದಾನ ಮಾಡಲು ಪ್ರೇರೇಪಿಸಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಆಗಬೇಕು ಎನ್ನುವುದು ನನ್ನ ಆಶಯ ಎನ್ನುವ ಇಂಗಿತವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಪಂಚಾಯ್ತಿ ಏರ್ಪಡಿಸಿದ್ದ “ನಮ್ಮ ನಡೆ ಮತಗಟ್ಟೆಯ ಕಡೆ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಚುನಾವಣಾ ವಿಶೇಷ ಧ್ವಜವನ್ನು ಹಾರಿಸುವುದರ ಮೂಲಕ ಹಾಗೂ ಮತದಾನದ ಮಹತ್ವ ಸಾರುವ ಬಲೂನುಗಳನ್ನು ಆಕಾಶಕ್ಕೆ ಹಾರಿ ಬಿಡುವುದರ ಮೂಲಕ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕುರಿತ ಸ್ವೀಪ್ ಕಾರ್ಯಕ್ರಮಗಳು ಜಿಲ್ಲಾ ಪಂಚಾಯತ್ ವತಿಯಿಂದ ಯಶಸ್ವಿಯಾಗಿ ನಡೆಯುತ್ತಿವೆ. ಮತದಾನ ಪ್ರಕ್ರಿಯೆ ಪಾರದರ್ಶಕ ಹಾಗೂ ನೈತಿಕತೆಯಿಂದ ಕೂಡಿರಬೇಕು. ಜೊತೆಗೆ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ , ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಕರೆ ನೀಡಿದರು.

ಜಿಲ್ಲೆಯಲ್ಲಿ 80 ವರ್ಷ ತುಂಬಿದ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ವಿಶೇಷ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿತ್ತು. 562 ಮತದಾರರು ಇದರ ಸದುಪಯೋಗ ಪಡೆಸಿಕೊಂಡಿದ್ದಾರೆ. ಉಳಿದ ಮತದಾರರು ಇಂದು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಬಾರಿ ಮತದಾರರನ್ನು ಆಕರ್ಷಿಸಲು ಜಿಲ್ಲೆಯಲ್ಲಿ ವಿಷಯಾಧಾರಿತ (ಎಥ್ನಿಕ್ )ಮತಗಟ್ಟೆಗಳು, ಮಾದರಿ ಮತಗಟ್ಟೆಗಳು, ಸಖಿ ಮತಗಟ್ಟೆಗಳು, ಯುವ ಸ್ನೇಹಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ ಮತದಾನದ ಮಹತ್ವ ಅರಿತುಕೊಂಡು ಮೇ. 10 ರಂದು ತಪ್ಪದೇ ಮತದಾನ ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಿ. ಎಲ್ಲರೂ ಮತದಾನ ಮಾಡಿ. ಅಕ್ರಮ ಅಥವಾ ಅನೈತಿಕ ಚುನಾವಣಾ ಚಟುವಟಿಕೆಗಳು ಕಂಡುಬಂದಲ್ಲಿ ಸಿ-ವಿಜಿಲ್ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದರು.

ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ನಾಗರಾಜ್ ಅವರು ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಂಗವಾಗಿ ಮತದಾನದ ಮಹತ್ವ ಸಾರುವ ಬಣ್ಣ ಬಣ್ಣದ ರಂಗೋಲಿಗಳನ್ನು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಕ್ರೀಡಾಂಗಣದಲ್ಲಿ ಬಿಡಿಸಿದ್ದು ವಿಶೇಷವಾಗಿತ್ತು. ಚುನಾವಣಾ ಜಾಗೃತಿ ಗೀತೆಗಳನ್ನು ಪ್ರಸ್ತುತ ಪಡಿಸಲಾಯಿತು. ಕಲಾಜಾಥಾಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಂಗಣದಿಂದ ವೇಣುಗೋಪಾಲ ಸ್ವಾಮಿ ದೇವಾಲಯದವರೆಗೆ ಜಾಥಾದಲ್ಲಿ ತೆರಳಿ ಮತದಾನ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ಮತದಾನ ಜಾಗೃತಿಯ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪೌರಕಾರ್ಮಿಕರು , ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

3 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

4 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

4 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

4 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

6 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

8 hours ago