ನೀವು ಮತದಾನ ಮಾಡಿ ಮತ್ತೊಬ್ಬರಿಗೂ ಮತದಾನ ಮಾಡಲು ಪ್ರೇರೇಪಿಸಿ- ಜಿಲ್ಲಾಧಿಕಾರಿ ಆರ್ ಲತಾ

ಹಬ್ಬದ ರೀತಿಯಲ್ಲಿ ಮತದಾನ ದಿನವನ್ನು ಆಚರಣೆ ಮಾಡಿ, ನೀವು ಮತದಾನ ಮಾಡಿ ನಿಮ್ಮ ಮನೆಯವರನ್ನು, ನೆರೆಹೊರೆಯವರನ್ನು ಮತದಾನ ಮಾಡಲು ಪ್ರೇರೇಪಿಸಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಆಗಬೇಕು ಎನ್ನುವುದು ನನ್ನ ಆಶಯ ಎನ್ನುವ ಇಂಗಿತವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಪಂಚಾಯ್ತಿ ಏರ್ಪಡಿಸಿದ್ದ “ನಮ್ಮ ನಡೆ ಮತಗಟ್ಟೆಯ ಕಡೆ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಚುನಾವಣಾ ವಿಶೇಷ ಧ್ವಜವನ್ನು ಹಾರಿಸುವುದರ ಮೂಲಕ ಹಾಗೂ ಮತದಾನದ ಮಹತ್ವ ಸಾರುವ ಬಲೂನುಗಳನ್ನು ಆಕಾಶಕ್ಕೆ ಹಾರಿ ಬಿಡುವುದರ ಮೂಲಕ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕುರಿತ ಸ್ವೀಪ್ ಕಾರ್ಯಕ್ರಮಗಳು ಜಿಲ್ಲಾ ಪಂಚಾಯತ್ ವತಿಯಿಂದ ಯಶಸ್ವಿಯಾಗಿ ನಡೆಯುತ್ತಿವೆ. ಮತದಾನ ಪ್ರಕ್ರಿಯೆ ಪಾರದರ್ಶಕ ಹಾಗೂ ನೈತಿಕತೆಯಿಂದ ಕೂಡಿರಬೇಕು. ಜೊತೆಗೆ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ , ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಕರೆ ನೀಡಿದರು.

ಜಿಲ್ಲೆಯಲ್ಲಿ 80 ವರ್ಷ ತುಂಬಿದ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ವಿಶೇಷ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿತ್ತು. 562 ಮತದಾರರು ಇದರ ಸದುಪಯೋಗ ಪಡೆಸಿಕೊಂಡಿದ್ದಾರೆ. ಉಳಿದ ಮತದಾರರು ಇಂದು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಬಾರಿ ಮತದಾರರನ್ನು ಆಕರ್ಷಿಸಲು ಜಿಲ್ಲೆಯಲ್ಲಿ ವಿಷಯಾಧಾರಿತ (ಎಥ್ನಿಕ್ )ಮತಗಟ್ಟೆಗಳು, ಮಾದರಿ ಮತಗಟ್ಟೆಗಳು, ಸಖಿ ಮತಗಟ್ಟೆಗಳು, ಯುವ ಸ್ನೇಹಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ ಮತದಾನದ ಮಹತ್ವ ಅರಿತುಕೊಂಡು ಮೇ. 10 ರಂದು ತಪ್ಪದೇ ಮತದಾನ ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಿ. ಎಲ್ಲರೂ ಮತದಾನ ಮಾಡಿ. ಅಕ್ರಮ ಅಥವಾ ಅನೈತಿಕ ಚುನಾವಣಾ ಚಟುವಟಿಕೆಗಳು ಕಂಡುಬಂದಲ್ಲಿ ಸಿ-ವಿಜಿಲ್ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದರು.

ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ನಾಗರಾಜ್ ಅವರು ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಂಗವಾಗಿ ಮತದಾನದ ಮಹತ್ವ ಸಾರುವ ಬಣ್ಣ ಬಣ್ಣದ ರಂಗೋಲಿಗಳನ್ನು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಕ್ರೀಡಾಂಗಣದಲ್ಲಿ ಬಿಡಿಸಿದ್ದು ವಿಶೇಷವಾಗಿತ್ತು. ಚುನಾವಣಾ ಜಾಗೃತಿ ಗೀತೆಗಳನ್ನು ಪ್ರಸ್ತುತ ಪಡಿಸಲಾಯಿತು. ಕಲಾಜಾಥಾಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಂಗಣದಿಂದ ವೇಣುಗೋಪಾಲ ಸ್ವಾಮಿ ದೇವಾಲಯದವರೆಗೆ ಜಾಥಾದಲ್ಲಿ ತೆರಳಿ ಮತದಾನ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ಮತದಾನ ಜಾಗೃತಿಯ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪೌರಕಾರ್ಮಿಕರು , ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

5 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago