ಹಬ್ಬದ ರೀತಿಯಲ್ಲಿ ಮತದಾನ ದಿನವನ್ನು ಆಚರಣೆ ಮಾಡಿ, ನೀವು ಮತದಾನ ಮಾಡಿ ನಿಮ್ಮ ಮನೆಯವರನ್ನು, ನೆರೆಹೊರೆಯವರನ್ನು ಮತದಾನ ಮಾಡಲು ಪ್ರೇರೇಪಿಸಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಆಗಬೇಕು ಎನ್ನುವುದು ನನ್ನ ಆಶಯ ಎನ್ನುವ ಇಂಗಿತವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ವ್ಯಕ್ತಪಡಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಪಂಚಾಯ್ತಿ ಏರ್ಪಡಿಸಿದ್ದ “ನಮ್ಮ ನಡೆ ಮತಗಟ್ಟೆಯ ಕಡೆ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚುನಾವಣಾ ವಿಶೇಷ ಧ್ವಜವನ್ನು ಹಾರಿಸುವುದರ ಮೂಲಕ ಹಾಗೂ ಮತದಾನದ ಮಹತ್ವ ಸಾರುವ ಬಲೂನುಗಳನ್ನು ಆಕಾಶಕ್ಕೆ ಹಾರಿ ಬಿಡುವುದರ ಮೂಲಕ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲೆಯಲ್ಲಿ 80 ವರ್ಷ ತುಂಬಿದ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ವಿಶೇಷ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿತ್ತು. 562 ಮತದಾರರು ಇದರ ಸದುಪಯೋಗ ಪಡೆಸಿಕೊಂಡಿದ್ದಾರೆ. ಉಳಿದ ಮತದಾರರು ಇಂದು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು.
ಈ ಬಾರಿ ಮತದಾರರನ್ನು ಆಕರ್ಷಿಸಲು ಜಿಲ್ಲೆಯಲ್ಲಿ ವಿಷಯಾಧಾರಿತ (ಎಥ್ನಿಕ್ )ಮತಗಟ್ಟೆಗಳು, ಮಾದರಿ ಮತಗಟ್ಟೆಗಳು, ಸಖಿ ಮತಗಟ್ಟೆಗಳು, ಯುವ ಸ್ನೇಹಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ ಮತದಾನದ ಮಹತ್ವ ಅರಿತುಕೊಂಡು ಮೇ. 10 ರಂದು ತಪ್ಪದೇ ಮತದಾನ ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಿ. ಎಲ್ಲರೂ ಮತದಾನ ಮಾಡಿ. ಅಕ್ರಮ ಅಥವಾ ಅನೈತಿಕ ಚುನಾವಣಾ ಚಟುವಟಿಕೆಗಳು ಕಂಡುಬಂದಲ್ಲಿ ಸಿ-ವಿಜಿಲ್ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದರು.
ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ನಾಗರಾಜ್ ಅವರು ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಂಗವಾಗಿ ಮತದಾನದ ಮಹತ್ವ ಸಾರುವ ಬಣ್ಣ ಬಣ್ಣದ ರಂಗೋಲಿಗಳನ್ನು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಕ್ರೀಡಾಂಗಣದಲ್ಲಿ ಬಿಡಿಸಿದ್ದು ವಿಶೇಷವಾಗಿತ್ತು. ಚುನಾವಣಾ ಜಾಗೃತಿ ಗೀತೆಗಳನ್ನು ಪ್ರಸ್ತುತ ಪಡಿಸಲಾಯಿತು. ಕಲಾಜಾಥಾಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಂಗಣದಿಂದ ವೇಣುಗೋಪಾಲ ಸ್ವಾಮಿ ದೇವಾಲಯದವರೆಗೆ ಜಾಥಾದಲ್ಲಿ ತೆರಳಿ ಮತದಾನ ಜಾಗೃತಿ ಮೂಡಿಸಲಾಯಿತು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ಮತದಾನ ಜಾಗೃತಿಯ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪೌರಕಾರ್ಮಿಕರು , ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…