ನೀವು ಮತದಾನ ಮಾಡಿ ಮತ್ತೊಬ್ಬರಿಗೂ ಮತದಾನ ಮಾಡಲು ಪ್ರೇರೇಪಿಸಿ- ಜಿಲ್ಲಾಧಿಕಾರಿ ಆರ್ ಲತಾ

ಹಬ್ಬದ ರೀತಿಯಲ್ಲಿ ಮತದಾನ ದಿನವನ್ನು ಆಚರಣೆ ಮಾಡಿ, ನೀವು ಮತದಾನ ಮಾಡಿ ನಿಮ್ಮ ಮನೆಯವರನ್ನು, ನೆರೆಹೊರೆಯವರನ್ನು ಮತದಾನ ಮಾಡಲು ಪ್ರೇರೇಪಿಸಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಆಗಬೇಕು ಎನ್ನುವುದು ನನ್ನ ಆಶಯ ಎನ್ನುವ ಇಂಗಿತವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಪಂಚಾಯ್ತಿ ಏರ್ಪಡಿಸಿದ್ದ “ನಮ್ಮ ನಡೆ ಮತಗಟ್ಟೆಯ ಕಡೆ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಚುನಾವಣಾ ವಿಶೇಷ ಧ್ವಜವನ್ನು ಹಾರಿಸುವುದರ ಮೂಲಕ ಹಾಗೂ ಮತದಾನದ ಮಹತ್ವ ಸಾರುವ ಬಲೂನುಗಳನ್ನು ಆಕಾಶಕ್ಕೆ ಹಾರಿ ಬಿಡುವುದರ ಮೂಲಕ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕುರಿತ ಸ್ವೀಪ್ ಕಾರ್ಯಕ್ರಮಗಳು ಜಿಲ್ಲಾ ಪಂಚಾಯತ್ ವತಿಯಿಂದ ಯಶಸ್ವಿಯಾಗಿ ನಡೆಯುತ್ತಿವೆ. ಮತದಾನ ಪ್ರಕ್ರಿಯೆ ಪಾರದರ್ಶಕ ಹಾಗೂ ನೈತಿಕತೆಯಿಂದ ಕೂಡಿರಬೇಕು. ಜೊತೆಗೆ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ , ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಕರೆ ನೀಡಿದರು.

ಜಿಲ್ಲೆಯಲ್ಲಿ 80 ವರ್ಷ ತುಂಬಿದ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ವಿಶೇಷ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿತ್ತು. 562 ಮತದಾರರು ಇದರ ಸದುಪಯೋಗ ಪಡೆಸಿಕೊಂಡಿದ್ದಾರೆ. ಉಳಿದ ಮತದಾರರು ಇಂದು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಬಾರಿ ಮತದಾರರನ್ನು ಆಕರ್ಷಿಸಲು ಜಿಲ್ಲೆಯಲ್ಲಿ ವಿಷಯಾಧಾರಿತ (ಎಥ್ನಿಕ್ )ಮತಗಟ್ಟೆಗಳು, ಮಾದರಿ ಮತಗಟ್ಟೆಗಳು, ಸಖಿ ಮತಗಟ್ಟೆಗಳು, ಯುವ ಸ್ನೇಹಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ ಮತದಾನದ ಮಹತ್ವ ಅರಿತುಕೊಂಡು ಮೇ. 10 ರಂದು ತಪ್ಪದೇ ಮತದಾನ ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಿ. ಎಲ್ಲರೂ ಮತದಾನ ಮಾಡಿ. ಅಕ್ರಮ ಅಥವಾ ಅನೈತಿಕ ಚುನಾವಣಾ ಚಟುವಟಿಕೆಗಳು ಕಂಡುಬಂದಲ್ಲಿ ಸಿ-ವಿಜಿಲ್ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದರು.

ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ನಾಗರಾಜ್ ಅವರು ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಂಗವಾಗಿ ಮತದಾನದ ಮಹತ್ವ ಸಾರುವ ಬಣ್ಣ ಬಣ್ಣದ ರಂಗೋಲಿಗಳನ್ನು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಕ್ರೀಡಾಂಗಣದಲ್ಲಿ ಬಿಡಿಸಿದ್ದು ವಿಶೇಷವಾಗಿತ್ತು. ಚುನಾವಣಾ ಜಾಗೃತಿ ಗೀತೆಗಳನ್ನು ಪ್ರಸ್ತುತ ಪಡಿಸಲಾಯಿತು. ಕಲಾಜಾಥಾಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಂಗಣದಿಂದ ವೇಣುಗೋಪಾಲ ಸ್ವಾಮಿ ದೇವಾಲಯದವರೆಗೆ ಜಾಥಾದಲ್ಲಿ ತೆರಳಿ ಮತದಾನ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ಮತದಾನ ಜಾಗೃತಿಯ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪೌರಕಾರ್ಮಿಕರು , ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

4 minutes ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

3 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

5 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

16 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

21 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

22 hours ago