ನೀವು ಮತದಾನ ಮಾಡಿ ಮತ್ತೊಬ್ಬರಿಗೂ ಮತದಾನ ಮಾಡಲು ಪ್ರೇರೇಪಿಸಿ- ಜಿಲ್ಲಾಧಿಕಾರಿ ಆರ್ ಲತಾ

ಹಬ್ಬದ ರೀತಿಯಲ್ಲಿ ಮತದಾನ ದಿನವನ್ನು ಆಚರಣೆ ಮಾಡಿ, ನೀವು ಮತದಾನ ಮಾಡಿ ನಿಮ್ಮ ಮನೆಯವರನ್ನು, ನೆರೆಹೊರೆಯವರನ್ನು ಮತದಾನ ಮಾಡಲು ಪ್ರೇರೇಪಿಸಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಆಗಬೇಕು ಎನ್ನುವುದು ನನ್ನ ಆಶಯ ಎನ್ನುವ ಇಂಗಿತವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಪಂಚಾಯ್ತಿ ಏರ್ಪಡಿಸಿದ್ದ “ನಮ್ಮ ನಡೆ ಮತಗಟ್ಟೆಯ ಕಡೆ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಚುನಾವಣಾ ವಿಶೇಷ ಧ್ವಜವನ್ನು ಹಾರಿಸುವುದರ ಮೂಲಕ ಹಾಗೂ ಮತದಾನದ ಮಹತ್ವ ಸಾರುವ ಬಲೂನುಗಳನ್ನು ಆಕಾಶಕ್ಕೆ ಹಾರಿ ಬಿಡುವುದರ ಮೂಲಕ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕುರಿತ ಸ್ವೀಪ್ ಕಾರ್ಯಕ್ರಮಗಳು ಜಿಲ್ಲಾ ಪಂಚಾಯತ್ ವತಿಯಿಂದ ಯಶಸ್ವಿಯಾಗಿ ನಡೆಯುತ್ತಿವೆ. ಮತದಾನ ಪ್ರಕ್ರಿಯೆ ಪಾರದರ್ಶಕ ಹಾಗೂ ನೈತಿಕತೆಯಿಂದ ಕೂಡಿರಬೇಕು. ಜೊತೆಗೆ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ , ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಕರೆ ನೀಡಿದರು.

ಜಿಲ್ಲೆಯಲ್ಲಿ 80 ವರ್ಷ ತುಂಬಿದ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ವಿಶೇಷ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿತ್ತು. 562 ಮತದಾರರು ಇದರ ಸದುಪಯೋಗ ಪಡೆಸಿಕೊಂಡಿದ್ದಾರೆ. ಉಳಿದ ಮತದಾರರು ಇಂದು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಬಾರಿ ಮತದಾರರನ್ನು ಆಕರ್ಷಿಸಲು ಜಿಲ್ಲೆಯಲ್ಲಿ ವಿಷಯಾಧಾರಿತ (ಎಥ್ನಿಕ್ )ಮತಗಟ್ಟೆಗಳು, ಮಾದರಿ ಮತಗಟ್ಟೆಗಳು, ಸಖಿ ಮತಗಟ್ಟೆಗಳು, ಯುವ ಸ್ನೇಹಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ ಮತದಾನದ ಮಹತ್ವ ಅರಿತುಕೊಂಡು ಮೇ. 10 ರಂದು ತಪ್ಪದೇ ಮತದಾನ ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾಗಿ. ಎಲ್ಲರೂ ಮತದಾನ ಮಾಡಿ. ಅಕ್ರಮ ಅಥವಾ ಅನೈತಿಕ ಚುನಾವಣಾ ಚಟುವಟಿಕೆಗಳು ಕಂಡುಬಂದಲ್ಲಿ ಸಿ-ವಿಜಿಲ್ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದರು.

ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ನಾಗರಾಜ್ ಅವರು ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ಅಂಗವಾಗಿ ಮತದಾನದ ಮಹತ್ವ ಸಾರುವ ಬಣ್ಣ ಬಣ್ಣದ ರಂಗೋಲಿಗಳನ್ನು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಕ್ರೀಡಾಂಗಣದಲ್ಲಿ ಬಿಡಿಸಿದ್ದು ವಿಶೇಷವಾಗಿತ್ತು. ಚುನಾವಣಾ ಜಾಗೃತಿ ಗೀತೆಗಳನ್ನು ಪ್ರಸ್ತುತ ಪಡಿಸಲಾಯಿತು. ಕಲಾಜಾಥಾಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಂಗಣದಿಂದ ವೇಣುಗೋಪಾಲ ಸ್ವಾಮಿ ದೇವಾಲಯದವರೆಗೆ ಜಾಥಾದಲ್ಲಿ ತೆರಳಿ ಮತದಾನ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ಮತದಾನ ಜಾಗೃತಿಯ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪೌರಕಾರ್ಮಿಕರು , ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

12 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago