Categories: ರಾಜ್ಯ

ನುಡಿದಂತೆ ನಡೆದ ಸಿಎಂ‌ ಸಿದ್ದರಾಮಯ್ಯ: ಐದು ಗ್ಯಾರಂಟಿ ಘೋಷಣೆ

ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ.

1.ಗೃಹಜ್ಯೋತಿ:
ವಾರ್ಷಿಕ ವಿದ್ಯುತ್‌ ಬಿಲ್‌ನ ಸರಾಸರಿಯಲ್ಲಿ 200 ಯೂನಿಟ್‌ ಒಳಗೆ ಬಳಸಿದ್ದರೆ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್‌ ನೀಡಲಾಗುವುದು.

ವಾರ್ಷಿಕ ಸರಾಸರಿ ಮೇಲೂ ಕೂಡ 10%ಅನ್ನು ಉಚಿತ ಎಂದು ಪರಿಗಣಿಸಲಾಗುವುದು.

2.ಗೃಹಲಕ್ಷ್ಮಿ ಗ್ಯಾರಂಟಿ:

ಅರ್ಹ ಫಲಾನುಭವಿಯಾಗಲು ಮನೆಯ ಯಜಮಾನಿಯರು ಜೂನ್‌ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಿ ಮೊಬೈಲ್‌ ಸಂಖ್ಯೆ, ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಮೊದಲಾದ ವಿವರಗಳನ್ನು ನೀಡಬೇಕಿದೆ. ಆಗಸ್ಟ್‌ 15ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮನೆಯ ಯಜಮಾನಿ ಖಾತೆಗೆ ನೇರ 2000 ರೂ. ಜಮಾವಣೆಯಾಗಲಿದೆ.

ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರು, ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರೂ ಕೂಡ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

3.ಶಕ್ತಿ ಗ್ಯಾರಂಟಿ:
ಜೂನ್‌ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಸಿಟಿ ಬಸ್‌ಗಳು ಸೇರಿದಂತೆ ರಾಜ್ಯ ಸಾರಿಗೆಯ ಎಲ್ಲ ಬಸ್‌ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಆದರೆ, ರಾಜ್ಯ ಸಾರಿಗೆ ಬಸ್‌ಗಳಲ್ಲೇ ಹೊರ ರಾಜ್ಯಗಳಿಗೆ ಪ್ರಯಾಣಿಸಲು ಅವಕಾಶವಿಲ್ಲ.

4.ಅನ್ನ ಭಾಗ್ಯ:
ಈಗಾಗಲೇ ಪ್ರಸಕ್ತ ತಿಂಗಳ ಪಡಿತರ ವಿಲೇವಾರಿಯಾಗಿರುವ ಕಾರಣ, ಜುಲೈ 1ರಿಂದ ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.

5.ಯುವನಿಧಿ:
2022-23ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಹೊಂದಿದವರಿಗೆ 6 ತಿಂಗಳ ಗ್ರೇಸ್‌ ಪಿರಿಯಡ್‌ ಇರುತ್ತದೆ. ಆರು ತಿಂಗಳ ನಂತರವೂ ಕೆಲಸ ಸಿಗದಿದ್ದರೆ 24 ತಿಂಗಳುಗಳ ಕಾಲ ಪಧವೀಧರರಿಗೆ ಮಾಸಿಕ 3ಸಾವಿರ ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.

6 ತಿಂಗಳ ಒಳಗೆ ಖಾಸಗಿ/ಸರ್ಕಾರಿ ಕೆಲಸ ದೊರೆತರೆ ಅಥವಾ ಅರ್ಜಿ ಸಲ್ಲಿಸಿದ ನಂತರ ಕೆಲಸ ಸಿಕ್ಕರೂ ಕೂಡ ಅಂತಹವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

3 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

5 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

5 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

6 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

10 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

11 hours ago