Categories: ರಾಜ್ಯ

ನುಡಿದಂತೆ ನಡೆದ ಸಿಎಂ‌ ಸಿದ್ದರಾಮಯ್ಯ: ಐದು ಗ್ಯಾರಂಟಿ ಘೋಷಣೆ

ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ.

1.ಗೃಹಜ್ಯೋತಿ:
ವಾರ್ಷಿಕ ವಿದ್ಯುತ್‌ ಬಿಲ್‌ನ ಸರಾಸರಿಯಲ್ಲಿ 200 ಯೂನಿಟ್‌ ಒಳಗೆ ಬಳಸಿದ್ದರೆ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್‌ ನೀಡಲಾಗುವುದು.

ವಾರ್ಷಿಕ ಸರಾಸರಿ ಮೇಲೂ ಕೂಡ 10%ಅನ್ನು ಉಚಿತ ಎಂದು ಪರಿಗಣಿಸಲಾಗುವುದು.

2.ಗೃಹಲಕ್ಷ್ಮಿ ಗ್ಯಾರಂಟಿ:

ಅರ್ಹ ಫಲಾನುಭವಿಯಾಗಲು ಮನೆಯ ಯಜಮಾನಿಯರು ಜೂನ್‌ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಿ ಮೊಬೈಲ್‌ ಸಂಖ್ಯೆ, ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಮೊದಲಾದ ವಿವರಗಳನ್ನು ನೀಡಬೇಕಿದೆ. ಆಗಸ್ಟ್‌ 15ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮನೆಯ ಯಜಮಾನಿ ಖಾತೆಗೆ ನೇರ 2000 ರೂ. ಜಮಾವಣೆಯಾಗಲಿದೆ.

ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರು, ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರೂ ಕೂಡ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

3.ಶಕ್ತಿ ಗ್ಯಾರಂಟಿ:
ಜೂನ್‌ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಸಿಟಿ ಬಸ್‌ಗಳು ಸೇರಿದಂತೆ ರಾಜ್ಯ ಸಾರಿಗೆಯ ಎಲ್ಲ ಬಸ್‌ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಆದರೆ, ರಾಜ್ಯ ಸಾರಿಗೆ ಬಸ್‌ಗಳಲ್ಲೇ ಹೊರ ರಾಜ್ಯಗಳಿಗೆ ಪ್ರಯಾಣಿಸಲು ಅವಕಾಶವಿಲ್ಲ.

4.ಅನ್ನ ಭಾಗ್ಯ:
ಈಗಾಗಲೇ ಪ್ರಸಕ್ತ ತಿಂಗಳ ಪಡಿತರ ವಿಲೇವಾರಿಯಾಗಿರುವ ಕಾರಣ, ಜುಲೈ 1ರಿಂದ ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.

5.ಯುವನಿಧಿ:
2022-23ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಹೊಂದಿದವರಿಗೆ 6 ತಿಂಗಳ ಗ್ರೇಸ್‌ ಪಿರಿಯಡ್‌ ಇರುತ್ತದೆ. ಆರು ತಿಂಗಳ ನಂತರವೂ ಕೆಲಸ ಸಿಗದಿದ್ದರೆ 24 ತಿಂಗಳುಗಳ ಕಾಲ ಪಧವೀಧರರಿಗೆ ಮಾಸಿಕ 3ಸಾವಿರ ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.

6 ತಿಂಗಳ ಒಳಗೆ ಖಾಸಗಿ/ಸರ್ಕಾರಿ ಕೆಲಸ ದೊರೆತರೆ ಅಥವಾ ಅರ್ಜಿ ಸಲ್ಲಿಸಿದ ನಂತರ ಕೆಲಸ ಸಿಕ್ಕರೂ ಕೂಡ ಅಂತಹವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

10 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

19 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

23 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago