Categories: ರಾಜ್ಯ

ನುಡಿದಂತೆ ನಡೆದ ಸಿಎಂ‌ ಸಿದ್ದರಾಮಯ್ಯ: ಐದು ಗ್ಯಾರಂಟಿ ಘೋಷಣೆ

ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ.

1.ಗೃಹಜ್ಯೋತಿ:
ವಾರ್ಷಿಕ ವಿದ್ಯುತ್‌ ಬಿಲ್‌ನ ಸರಾಸರಿಯಲ್ಲಿ 200 ಯೂನಿಟ್‌ ಒಳಗೆ ಬಳಸಿದ್ದರೆ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್‌ ನೀಡಲಾಗುವುದು.

ವಾರ್ಷಿಕ ಸರಾಸರಿ ಮೇಲೂ ಕೂಡ 10%ಅನ್ನು ಉಚಿತ ಎಂದು ಪರಿಗಣಿಸಲಾಗುವುದು.

2.ಗೃಹಲಕ್ಷ್ಮಿ ಗ್ಯಾರಂಟಿ:

ಅರ್ಹ ಫಲಾನುಭವಿಯಾಗಲು ಮನೆಯ ಯಜಮಾನಿಯರು ಜೂನ್‌ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಿ ಮೊಬೈಲ್‌ ಸಂಖ್ಯೆ, ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಮೊದಲಾದ ವಿವರಗಳನ್ನು ನೀಡಬೇಕಿದೆ. ಆಗಸ್ಟ್‌ 15ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮನೆಯ ಯಜಮಾನಿ ಖಾತೆಗೆ ನೇರ 2000 ರೂ. ಜಮಾವಣೆಯಾಗಲಿದೆ.

ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರು, ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರೂ ಕೂಡ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

3.ಶಕ್ತಿ ಗ್ಯಾರಂಟಿ:
ಜೂನ್‌ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಸಿಟಿ ಬಸ್‌ಗಳು ಸೇರಿದಂತೆ ರಾಜ್ಯ ಸಾರಿಗೆಯ ಎಲ್ಲ ಬಸ್‌ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಆದರೆ, ರಾಜ್ಯ ಸಾರಿಗೆ ಬಸ್‌ಗಳಲ್ಲೇ ಹೊರ ರಾಜ್ಯಗಳಿಗೆ ಪ್ರಯಾಣಿಸಲು ಅವಕಾಶವಿಲ್ಲ.

4.ಅನ್ನ ಭಾಗ್ಯ:
ಈಗಾಗಲೇ ಪ್ರಸಕ್ತ ತಿಂಗಳ ಪಡಿತರ ವಿಲೇವಾರಿಯಾಗಿರುವ ಕಾರಣ, ಜುಲೈ 1ರಿಂದ ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.

5.ಯುವನಿಧಿ:
2022-23ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಹೊಂದಿದವರಿಗೆ 6 ತಿಂಗಳ ಗ್ರೇಸ್‌ ಪಿರಿಯಡ್‌ ಇರುತ್ತದೆ. ಆರು ತಿಂಗಳ ನಂತರವೂ ಕೆಲಸ ಸಿಗದಿದ್ದರೆ 24 ತಿಂಗಳುಗಳ ಕಾಲ ಪಧವೀಧರರಿಗೆ ಮಾಸಿಕ 3ಸಾವಿರ ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.

6 ತಿಂಗಳ ಒಳಗೆ ಖಾಸಗಿ/ಸರ್ಕಾರಿ ಕೆಲಸ ದೊರೆತರೆ ಅಥವಾ ಅರ್ಜಿ ಸಲ್ಲಿಸಿದ ನಂತರ ಕೆಲಸ ಸಿಕ್ಕರೂ ಕೂಡ ಅಂತಹವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

16 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

21 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago