ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ.
1.ಗೃಹಜ್ಯೋತಿ:
ವಾರ್ಷಿಕ ವಿದ್ಯುತ್ ಬಿಲ್ನ ಸರಾಸರಿಯಲ್ಲಿ 200 ಯೂನಿಟ್ ಒಳಗೆ ಬಳಸಿದ್ದರೆ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್ ನೀಡಲಾಗುವುದು.
ವಾರ್ಷಿಕ ಸರಾಸರಿ ಮೇಲೂ ಕೂಡ 10%ಅನ್ನು ಉಚಿತ ಎಂದು ಪರಿಗಣಿಸಲಾಗುವುದು.
2.ಗೃಹಲಕ್ಷ್ಮಿ ಗ್ಯಾರಂಟಿ:
ಅರ್ಹ ಫಲಾನುಭವಿಯಾಗಲು ಮನೆಯ ಯಜಮಾನಿಯರು ಜೂನ್ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಿ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಮೊದಲಾದ ವಿವರಗಳನ್ನು ನೀಡಬೇಕಿದೆ. ಆಗಸ್ಟ್ 15ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮನೆಯ ಯಜಮಾನಿ ಖಾತೆಗೆ ನೇರ 2000 ರೂ. ಜಮಾವಣೆಯಾಗಲಿದೆ.
ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರು, ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರೂ ಕೂಡ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.
3.ಶಕ್ತಿ ಗ್ಯಾರಂಟಿ:
ಜೂನ್ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಸಿಟಿ ಬಸ್ಗಳು ಸೇರಿದಂತೆ ರಾಜ್ಯ ಸಾರಿಗೆಯ ಎಲ್ಲ ಬಸ್ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಆದರೆ, ರಾಜ್ಯ ಸಾರಿಗೆ ಬಸ್ಗಳಲ್ಲೇ ಹೊರ ರಾಜ್ಯಗಳಿಗೆ ಪ್ರಯಾಣಿಸಲು ಅವಕಾಶವಿಲ್ಲ.
4.ಅನ್ನ ಭಾಗ್ಯ:
ಈಗಾಗಲೇ ಪ್ರಸಕ್ತ ತಿಂಗಳ ಪಡಿತರ ವಿಲೇವಾರಿಯಾಗಿರುವ ಕಾರಣ, ಜುಲೈ 1ರಿಂದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ದಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.
5.ಯುವನಿಧಿ:
2022-23ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಹೊಂದಿದವರಿಗೆ 6 ತಿಂಗಳ ಗ್ರೇಸ್ ಪಿರಿಯಡ್ ಇರುತ್ತದೆ. ಆರು ತಿಂಗಳ ನಂತರವೂ ಕೆಲಸ ಸಿಗದಿದ್ದರೆ 24 ತಿಂಗಳುಗಳ ಕಾಲ ಪಧವೀಧರರಿಗೆ ಮಾಸಿಕ 3ಸಾವಿರ ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.
6 ತಿಂಗಳ ಒಳಗೆ ಖಾಸಗಿ/ಸರ್ಕಾರಿ ಕೆಲಸ ದೊರೆತರೆ ಅಥವಾ ಅರ್ಜಿ ಸಲ್ಲಿಸಿದ ನಂತರ ಕೆಲಸ ಸಿಕ್ಕರೂ ಕೂಡ ಅಂತಹವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…