Categories: ರಾಜ್ಯ

ನುಡಿದಂತೆ ನಡೆದ ಸಿಎಂ‌ ಸಿದ್ದರಾಮಯ್ಯ: ಐದು ಗ್ಯಾರಂಟಿ ಘೋಷಣೆ

ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ.

1.ಗೃಹಜ್ಯೋತಿ:
ವಾರ್ಷಿಕ ವಿದ್ಯುತ್‌ ಬಿಲ್‌ನ ಸರಾಸರಿಯಲ್ಲಿ 200 ಯೂನಿಟ್‌ ಒಳಗೆ ಬಳಸಿದ್ದರೆ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್‌ ನೀಡಲಾಗುವುದು.

ವಾರ್ಷಿಕ ಸರಾಸರಿ ಮೇಲೂ ಕೂಡ 10%ಅನ್ನು ಉಚಿತ ಎಂದು ಪರಿಗಣಿಸಲಾಗುವುದು.

2.ಗೃಹಲಕ್ಷ್ಮಿ ಗ್ಯಾರಂಟಿ:

ಅರ್ಹ ಫಲಾನುಭವಿಯಾಗಲು ಮನೆಯ ಯಜಮಾನಿಯರು ಜೂನ್‌ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಿ ಮೊಬೈಲ್‌ ಸಂಖ್ಯೆ, ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಮೊದಲಾದ ವಿವರಗಳನ್ನು ನೀಡಬೇಕಿದೆ. ಆಗಸ್ಟ್‌ 15ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮನೆಯ ಯಜಮಾನಿ ಖಾತೆಗೆ ನೇರ 2000 ರೂ. ಜಮಾವಣೆಯಾಗಲಿದೆ.

ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರು, ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರೂ ಕೂಡ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

3.ಶಕ್ತಿ ಗ್ಯಾರಂಟಿ:
ಜೂನ್‌ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಸಿಟಿ ಬಸ್‌ಗಳು ಸೇರಿದಂತೆ ರಾಜ್ಯ ಸಾರಿಗೆಯ ಎಲ್ಲ ಬಸ್‌ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಆದರೆ, ರಾಜ್ಯ ಸಾರಿಗೆ ಬಸ್‌ಗಳಲ್ಲೇ ಹೊರ ರಾಜ್ಯಗಳಿಗೆ ಪ್ರಯಾಣಿಸಲು ಅವಕಾಶವಿಲ್ಲ.

4.ಅನ್ನ ಭಾಗ್ಯ:
ಈಗಾಗಲೇ ಪ್ರಸಕ್ತ ತಿಂಗಳ ಪಡಿತರ ವಿಲೇವಾರಿಯಾಗಿರುವ ಕಾರಣ, ಜುಲೈ 1ರಿಂದ ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.

5.ಯುವನಿಧಿ:
2022-23ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಹೊಂದಿದವರಿಗೆ 6 ತಿಂಗಳ ಗ್ರೇಸ್‌ ಪಿರಿಯಡ್‌ ಇರುತ್ತದೆ. ಆರು ತಿಂಗಳ ನಂತರವೂ ಕೆಲಸ ಸಿಗದಿದ್ದರೆ 24 ತಿಂಗಳುಗಳ ಕಾಲ ಪಧವೀಧರರಿಗೆ ಮಾಸಿಕ 3ಸಾವಿರ ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.

6 ತಿಂಗಳ ಒಳಗೆ ಖಾಸಗಿ/ಸರ್ಕಾರಿ ಕೆಲಸ ದೊರೆತರೆ ಅಥವಾ ಅರ್ಜಿ ಸಲ್ಲಿಸಿದ ನಂತರ ಕೆಲಸ ಸಿಕ್ಕರೂ ಕೂಡ ಅಂತಹವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

59 minutes ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

4 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

8 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

23 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

23 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

24 hours ago