Categories: ರಾಜ್ಯ

ನುಡಿದಂತೆ ನಡೆದ ಸಿಎಂ‌ ಸಿದ್ದರಾಮಯ್ಯ: ಐದು ಗ್ಯಾರಂಟಿ ಘೋಷಣೆ

ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ಕೆಳಕಂಡಂತಿವೆ.

1.ಗೃಹಜ್ಯೋತಿ:
ವಾರ್ಷಿಕ ವಿದ್ಯುತ್‌ ಬಿಲ್‌ನ ಸರಾಸರಿಯಲ್ಲಿ 200 ಯೂನಿಟ್‌ ಒಳಗೆ ಬಳಸಿದ್ದರೆ ಅಂತಹ ಕುಟುಂಬಕ್ಕೆ ಉಚಿತ ವಿದ್ಯುತ್‌ ನೀಡಲಾಗುವುದು.

ವಾರ್ಷಿಕ ಸರಾಸರಿ ಮೇಲೂ ಕೂಡ 10%ಅನ್ನು ಉಚಿತ ಎಂದು ಪರಿಗಣಿಸಲಾಗುವುದು.

2.ಗೃಹಲಕ್ಷ್ಮಿ ಗ್ಯಾರಂಟಿ:

ಅರ್ಹ ಫಲಾನುಭವಿಯಾಗಲು ಮನೆಯ ಯಜಮಾನಿಯರು ಜೂನ್‌ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಿ ಮೊಬೈಲ್‌ ಸಂಖ್ಯೆ, ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಮೊದಲಾದ ವಿವರಗಳನ್ನು ನೀಡಬೇಕಿದೆ. ಆಗಸ್ಟ್‌ 15ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮನೆಯ ಯಜಮಾನಿ ಖಾತೆಗೆ ನೇರ 2000 ರೂ. ಜಮಾವಣೆಯಾಗಲಿದೆ.

ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರು, ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರೂ ಕೂಡ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

3.ಶಕ್ತಿ ಗ್ಯಾರಂಟಿ:
ಜೂನ್‌ 11ರಿಂದ ಈ ಯೋಜನೆ ಜಾರಿಗೆ ಬರಲಿದೆ. ಸಿಟಿ ಬಸ್‌ಗಳು ಸೇರಿದಂತೆ ರಾಜ್ಯ ಸಾರಿಗೆಯ ಎಲ್ಲ ಬಸ್‌ಗಳಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಆದರೆ, ರಾಜ್ಯ ಸಾರಿಗೆ ಬಸ್‌ಗಳಲ್ಲೇ ಹೊರ ರಾಜ್ಯಗಳಿಗೆ ಪ್ರಯಾಣಿಸಲು ಅವಕಾಶವಿಲ್ಲ.

4.ಅನ್ನ ಭಾಗ್ಯ:
ಈಗಾಗಲೇ ಪ್ರಸಕ್ತ ತಿಂಗಳ ಪಡಿತರ ವಿಲೇವಾರಿಯಾಗಿರುವ ಕಾರಣ, ಜುಲೈ 1ರಿಂದ ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.

5.ಯುವನಿಧಿ:
2022-23ರ ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆ ಹೊಂದಿದವರಿಗೆ 6 ತಿಂಗಳ ಗ್ರೇಸ್‌ ಪಿರಿಯಡ್‌ ಇರುತ್ತದೆ. ಆರು ತಿಂಗಳ ನಂತರವೂ ಕೆಲಸ ಸಿಗದಿದ್ದರೆ 24 ತಿಂಗಳುಗಳ ಕಾಲ ಪಧವೀಧರರಿಗೆ ಮಾಸಿಕ 3ಸಾವಿರ ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುವುದು.

6 ತಿಂಗಳ ಒಳಗೆ ಖಾಸಗಿ/ಸರ್ಕಾರಿ ಕೆಲಸ ದೊರೆತರೆ ಅಥವಾ ಅರ್ಜಿ ಸಲ್ಲಿಸಿದ ನಂತರ ಕೆಲಸ ಸಿಕ್ಕರೂ ಕೂಡ ಅಂತಹವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

5 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

7 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

10 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago