Categories: Home

ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್. ಜಾಲಪ್ಪ ಇನ್ಸ್ಟಿಟ್ಯೂಷನ್ಸ್ ಹಾಗೂ ಅಕ್ಷಯ ಲಿಯೋ ಕ್ಲಬ್ ನ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ನಗರದ ಆರ್.ಎಲ್.ಜಾಲಪ್ಪ ಕ್ಯಾಂಪಸ್ ನಲ್ಲಿರುವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ನೂತನ 2024-25 ನೇ ಸಾಲಿನ ಎಲ್ಲಾ ಪದಾಧಿಕಾರಿಗಳು ಲಯನ್ ಬಿ.ಎಸ್. ರಾಜಶೇಖರಯ್ಯನವರ ಸಮ್ಮುಖದಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದರು. ನಂತರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಸೇವಾ ಚಟುವಟಿಕೆಗಳ ವಿವರಗಳನ್ನು ಕಾರ್ಯದರ್ಶಿ ಎನ್. ಆರ್. ಮುಕೇಶ್ ರವರು ಸಭೆಯಲ್ಲಿ ವಿವರವಾಗಿ ತಿಳಿಸಿದರು.

ಹಣಕಾಸಿನ ವಿಚಾರವನ್ನು ಖಜಾಂಚಿ ಎಸ್.ರವಿಕುಮಾರ್ ಅವರು ಸಭೆಯಲ್ಲಿ ವಿವರವಾಗಿ ತಿಳಿಸಿದರು.

ಈ ವೇಳೆ ಮಲ್ಟಿಪಲ್ ಕೌನ್ಸಿಲ್ ಛೇರ್ ಪರ್ಸನ್ ಲಯನ್ ಬಿ.ಎಸ್. ರಾಜಶೇಖರಯ್ಯ pmjf, ಜಿಲ್ಲಾ ಸಮನ್ವಯಾಧಿಕಾರಿ ಲಯನ್ ಬರ್ನಾಡ್  ಆರ್. ಚಿಟ್ಟಿ pmjf,  ಉಪಾಧ್ಯಕ್ಷರು ಲಿಯೋ ಕ್ಲಬ್ ಜೆ. ರಾಜೇಂದ್ರpmjf, ಪ್ರಾಂತೀಯ ಅಧ್ಯಕ್ಷರು SDUET ಲಯನ್ ಎಂ.ಆರ್. ಶ್ರೀನಿವಾಸ್, pmjf, ವಲಯ್ಯಾಧ್ಯಕ್ಷರು ಲಯನ್ ಎಲ್.ಎನ್. ಪ್ರದೀಪ್ ಕುಮಾರ್, pmjf, ಅಧ್ಯಕ್ಷರು LCDRLJ ಲಯನ್ ಡಾ. ಎಂ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

9 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

12 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

16 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago