Categories: ವಿದೇಶ

ನೂತನ ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್‌ ಆಯ್ಕೆ

ನೂತನ ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್‌ ಆಯ್ಕೆಯಾಗಿದ್ದಾರೆ. ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ನೇಮಕವಾಗಿದ್ದಾರೆ‌.

ಇವರು ಅಮೆರಿಕದ ಮೊದಲ ಪೋಪ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಿವೋಸ್ಟ್ ಲಿಯೋ XIV ಎಂಬ ಹೆಸರನ್ನು ಪಡೆದರು. ಇವರು ಇದೇ ಹೆಸರಿನಿಂದ ಇನ್ನು ಮುಂದೆ ಗುರುತಿಸಿಕೊಳ್ಳಲಿದ್ದಾರೆ.

ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡರು.

ಸಿಸ್ಟೀನ್ ಚಾಪೆಲ್‌ನ ಮೇಲಿರುವ ಚಿಮಣಿಯಿಂದ ಬಿಳಿ ಹೊಗೆ ಹೊರಬಂದ ಸುಮಾರು 70 ನಿಮಿಷಗಳ ನಂತರ ಪೋಪ್ ಲಿಯೋ, ಸೇಂಟ್ ಪೀಟರ್ಸ್ ಬೆಸಿಲಿಕಾದ ಕೇಂದ್ರ ಬಾಲ್ಕನಿಯಲ್ಲಿ ಕಾಣಿಸಿಕೊಂಡರು. ಇದರಲ್ಲಿ ಬಿಳಿ ಹೊಗೆ ಕಾಣಿಸಿಕೊಂಡರೆ ಪೋಪ್‌ ಆಯ್ಕೆ ಅಂತಿಮಗೊಂಡಿದೆ ಎಂದು ಅರ್ಥ. 133 ಕಾರ್ಡಿನಲ್ ಮತದಾರರು 140 ಕೋಟಿ ಸದಸ್ಯರ ಕ್ಯಾಥೋಲಿಕ್ ಚರ್ಚ್‌ಗೆ ಹೊಸ ನಾಯಕನನ್ನು ಆಯ್ಕೆ ಮಾಡಿದ್ದಾರೆ ಎಂಬುದನ್ನು ಇದು ಸೂಚಿಸಿತ್ತು.

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಆಗಿದ್ದ ಮತ್ತು 12 ವರ್ಷಗಳ ಕಾಲ ಚರ್ಚ್ ಅನ್ನು ಮುನ್ನಡೆಸಿದ್ದ ಪೋಪ್ ಫ್ರಾನ್ಸಿಸ್ ಅವರ ಕಳೆದ ತಿಂಗಳು ನಿಧನರಾಗಿದ್ದರು. ಅವರ ನಿಧನದ ನಂತರ ಲಿಯೋ 267ನೇ ಕ್ಯಾಥೋಲಿಕ್ ಪೋಪ್ ಆಗಿ ಆಯ್ಕೆಯಾಗಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

3 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

6 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

8 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

19 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

20 hours ago