Categories: ವಿದೇಶ

ನೂತನ ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್‌ ಆಯ್ಕೆ

ನೂತನ ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್‌ ಆಯ್ಕೆಯಾಗಿದ್ದಾರೆ. ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ನೇಮಕವಾಗಿದ್ದಾರೆ‌.

ಇವರು ಅಮೆರಿಕದ ಮೊದಲ ಪೋಪ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಿವೋಸ್ಟ್ ಲಿಯೋ XIV ಎಂಬ ಹೆಸರನ್ನು ಪಡೆದರು. ಇವರು ಇದೇ ಹೆಸರಿನಿಂದ ಇನ್ನು ಮುಂದೆ ಗುರುತಿಸಿಕೊಳ್ಳಲಿದ್ದಾರೆ.

ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡರು.

ಸಿಸ್ಟೀನ್ ಚಾಪೆಲ್‌ನ ಮೇಲಿರುವ ಚಿಮಣಿಯಿಂದ ಬಿಳಿ ಹೊಗೆ ಹೊರಬಂದ ಸುಮಾರು 70 ನಿಮಿಷಗಳ ನಂತರ ಪೋಪ್ ಲಿಯೋ, ಸೇಂಟ್ ಪೀಟರ್ಸ್ ಬೆಸಿಲಿಕಾದ ಕೇಂದ್ರ ಬಾಲ್ಕನಿಯಲ್ಲಿ ಕಾಣಿಸಿಕೊಂಡರು. ಇದರಲ್ಲಿ ಬಿಳಿ ಹೊಗೆ ಕಾಣಿಸಿಕೊಂಡರೆ ಪೋಪ್‌ ಆಯ್ಕೆ ಅಂತಿಮಗೊಂಡಿದೆ ಎಂದು ಅರ್ಥ. 133 ಕಾರ್ಡಿನಲ್ ಮತದಾರರು 140 ಕೋಟಿ ಸದಸ್ಯರ ಕ್ಯಾಥೋಲಿಕ್ ಚರ್ಚ್‌ಗೆ ಹೊಸ ನಾಯಕನನ್ನು ಆಯ್ಕೆ ಮಾಡಿದ್ದಾರೆ ಎಂಬುದನ್ನು ಇದು ಸೂಚಿಸಿತ್ತು.

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಆಗಿದ್ದ ಮತ್ತು 12 ವರ್ಷಗಳ ಕಾಲ ಚರ್ಚ್ ಅನ್ನು ಮುನ್ನಡೆಸಿದ್ದ ಪೋಪ್ ಫ್ರಾನ್ಸಿಸ್ ಅವರ ಕಳೆದ ತಿಂಗಳು ನಿಧನರಾಗಿದ್ದರು. ಅವರ ನಿಧನದ ನಂತರ ಲಿಯೋ 267ನೇ ಕ್ಯಾಥೋಲಿಕ್ ಪೋಪ್ ಆಗಿ ಆಯ್ಕೆಯಾಗಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

15 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

17 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

23 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

24 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago