Categories: ವಿದೇಶ

ನೂತನ ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್‌ ಆಯ್ಕೆ

ನೂತನ ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಪ್ರಿವೋಸ್ಟ್‌ ಆಯ್ಕೆಯಾಗಿದ್ದಾರೆ. ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ನೇಮಕವಾಗಿದ್ದಾರೆ‌.

ಇವರು ಅಮೆರಿಕದ ಮೊದಲ ಪೋಪ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಿವೋಸ್ಟ್ ಲಿಯೋ XIV ಎಂಬ ಹೆಸರನ್ನು ಪಡೆದರು. ಇವರು ಇದೇ ಹೆಸರಿನಿಂದ ಇನ್ನು ಮುಂದೆ ಗುರುತಿಸಿಕೊಳ್ಳಲಿದ್ದಾರೆ.

ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡರು.

ಸಿಸ್ಟೀನ್ ಚಾಪೆಲ್‌ನ ಮೇಲಿರುವ ಚಿಮಣಿಯಿಂದ ಬಿಳಿ ಹೊಗೆ ಹೊರಬಂದ ಸುಮಾರು 70 ನಿಮಿಷಗಳ ನಂತರ ಪೋಪ್ ಲಿಯೋ, ಸೇಂಟ್ ಪೀಟರ್ಸ್ ಬೆಸಿಲಿಕಾದ ಕೇಂದ್ರ ಬಾಲ್ಕನಿಯಲ್ಲಿ ಕಾಣಿಸಿಕೊಂಡರು. ಇದರಲ್ಲಿ ಬಿಳಿ ಹೊಗೆ ಕಾಣಿಸಿಕೊಂಡರೆ ಪೋಪ್‌ ಆಯ್ಕೆ ಅಂತಿಮಗೊಂಡಿದೆ ಎಂದು ಅರ್ಥ. 133 ಕಾರ್ಡಿನಲ್ ಮತದಾರರು 140 ಕೋಟಿ ಸದಸ್ಯರ ಕ್ಯಾಥೋಲಿಕ್ ಚರ್ಚ್‌ಗೆ ಹೊಸ ನಾಯಕನನ್ನು ಆಯ್ಕೆ ಮಾಡಿದ್ದಾರೆ ಎಂಬುದನ್ನು ಇದು ಸೂಚಿಸಿತ್ತು.

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಆಗಿದ್ದ ಮತ್ತು 12 ವರ್ಷಗಳ ಕಾಲ ಚರ್ಚ್ ಅನ್ನು ಮುನ್ನಡೆಸಿದ್ದ ಪೋಪ್ ಫ್ರಾನ್ಸಿಸ್ ಅವರ ಕಳೆದ ತಿಂಗಳು ನಿಧನರಾಗಿದ್ದರು. ಅವರ ನಿಧನದ ನಂತರ ಲಿಯೋ 267ನೇ ಕ್ಯಾಥೋಲಿಕ್ ಪೋಪ್ ಆಗಿ ಆಯ್ಕೆಯಾಗಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

16 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago