ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ 54 ಲಕ್ಷ ರೂಗಳ ಸಿ.ಎಸ್.‌ಆರ್.‌ ಅನುದಾನದಡಿ ನಿರ್ಮಿಸಲಾದ ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರವನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ರವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ಅಸ್ಟಿಮೋ ಫೈ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಉತ್ಕೃಷ್ಟ ಮಟ್ಟದ ನೂತನ ಶಾಲಾ ಕಟ್ಟಡ ಹಾಗೂ ಅಂಗನವಾಡಿ ನಿರ್ಮಿಸಿ ಕೊಟ್ಟಿದ್ದಕ್ಕಾಗಿ ಧನ್ಯವಾದಗಳು ತಿಳಿಸಿದರು.

ಹಾಗೆಯೇ ಹಿಂದೆ ಇದ್ದ ನಗರಸಭಾ ಸದಸ್ಯರು ಮುಂದೆ ಬರುವ ನಗರಸಭೆ ಸದಸ್ಯರೆಲ್ಲರೂ ಸಿ.ಸಿ.ರಸ್ತೆ,ಚರಂಡಿಗಳನ್ನು ನಿರ್ಮಿಸುತ್ತಾರೆ. ಆದರೆ ತಮ್ಮ ಅಧಿಕಾರಿಯವಧಿಯಲ್ಲಿ ಜನ ಸದಾಕಾಲವೂ ನೆನಪಿನಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಿದಾಗಲೇ ಜನರು ನಮ್ಮಗಳನ್ನು ನೆನೆಯುತ್ತಾರೆ. ಈ ನಿಟ್ಟಿನಲ್ಲಿ ವಾರ್ಡಿನ ನಗರಸಭೆ ಸದಸ್ಯೆ ಬಿ.ನಾಗರತ್ನಮ್ಮ ಕೃಷ್ಣಮೂರ್ತಿ ಉತ್ತಮವಾಗಿ ಕೆಲಸ ಮಾಡ್ತಿದ್ದಾರೆ. ಮುಂದೆ ಸಹ ಜನರು ನೆನಪಿನಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಲಿ. ಹಾಗೇ ಎಲ್ಲಾ ಬಿಜೆಪಿ ನಗರಸಭೆ ಸದಸ್ಯರು ಉತ್ತಮವಾಗಿ ಮತದಾರರ ಆಶಯಗಳನ್ನು ಉಳಿಯುವ ನಿಟ್ಟಿನಲ್ಲಿ ಕೆಲಸ ಮಾಡ್ತಿದ್ದಾರೆ ಇದು ನನಗೆ ವೈಯುಕ್ತಿಕವಾಗಿ ಖುಷಿಯನ್ನು ಕೊಡ್ತಿದೆ. ಹಾಗೇ ವಾರ್ಡಿನಲ್ಲಿ ಏನಾದರೂ ಕೆಲಸ ಕಾರ್ಯಗಳಿದ್ದರೆ ಖಂಡಿತವಾಗಿ ಮಾಡಿ ಕೊಡ್ತಿನಿ ಎಂದರು.

ಬಹಳ ವರ್ಷಗಳಿಂದ ಈ ವಾರ್ಡಿನ ಪಡಿತರ ವಿತರಣೆ ಕೇಂದ್ರ ಇಲ್ಲ. ವಿನಾಯಕನಗರದ ಜನರು ಮಾರುತಿನಗರದ ಪಡಿತರ ಅಂಗಡಿಯಲ್ಲಿ ರೇಷನ್ ಪಡೆಯುತ್ತಿದ್ದು, ಇದರಿಂದಾಗಿ ವಿನಾಯಕನಗರದ ಜನತೆಗೆ ತುಂಬಾ ಸಮಸ್ಯೆ ಆಗುತ್ತಿದೆ ಎಂಬುದರ ಬಗ್ಗೆ ವಾರ್ಡಿನ ನಗರಸಭೆ ಸದಸ್ಯರು ನನ್ನ ಗಮನಕ್ಕೆ ತಂದಿದ್ದಾರೆ ಆ ನಿಟ್ಟಿನಲ್ಲಿ ವಿನಾಯಕನಗರದಲ್ಲಿ ಒಂದು ಪಡಿತರ ಕೇಂದ್ರ ತರುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುವ ಕೆಲಸ ಮಾಡಿ ವಾರ್ಡಿಗೆ ಒಂದು ಪಡಿತರ ವಿತರಣಾ ಕೇಂದ್ರ ವ್ಯವಸ್ಥೆ ಮಾಡುವೆ ಎಂದರು.

ಹಾಗೇ ಈವರೆಗೆ ಶಾಲೆಗೆ ನಗರಸಭೆ ವತಿಯಿಂದ ಖಾತೆಯನ್ನು ಮಾಡದೇ ಇರುವುದರ ಬಗ್ಗೆ ಶಾಲಾ ಶಿಕ್ಷಕರು ಶಾಸಕರ ಗಮನವನ್ನು ಸೆಳೆದಾಗ ಈ ಕೂಡಲೇ ಶಾಲೆ ಹಾಗೂ ಅಂಗನವಾಡಿಗೆ ನಗರಸಭೆ ವತಿಯಿಂದ ಖಾತೆಯನ್ನು ಮಾಡಿ ಕೊಡಬೇಕೆಂದು ಸೂಚಿಸಿದರು.ಇಲ್ಲವಾದರೇ ಸರ್ಕಾರಿ ಜಾಗ ಒತ್ತುವರಿಯಾಗಿ ಅನ್ಯರ ಪಾಲಾಗುತ್ತದೆ ಅದನ್ನು ತಡೆಯ ಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದರು.

ವಾರ್ಡಿನಲ್ಲಿರುವ ಗಣೇಶ ದೇವಸ್ಥಾನದ ಕಾಂಪೌಂಡ್ ನಿರ್ಮಾಣದ ಬಗ್ಗೆ ಸಾರ್ವಜನಿಕರ ಪ್ರಶ್ನೆ ಗೆ ಖಂಡಿತವಾಗಿ ದೇವಸ್ಥಾನದ ಕಾಂಪೌಂಡ್ ನಿರ್ಮಾಣಕ್ಕೆ ನಮ್ಮ ಸಹಕಾರ ಸದಾಕಾಲ  ಇರುತ್ತದೆ ಎಂದೂ ತಿಳಿಸಿದರು‌. ನೂತನ ಶಾಲೆಯಲ್ಲಿ ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವಂತೆ ಶಿಕ್ಷಕರು ಶ್ರಮವಹಿಸಬೇಕೆಂದೂ ಸೂಚಿಸಿದರು.

ಇದೇ ಸಂಧರ್ಭದಲ್ಲಿ ವಾರ್ಡಿನ ನಗರಸಭಾ ಸದಸ್ಯೆ ಬಿ.ನಾಗರತ್ನಮ್ಮ ಕೃಷ್ಣಮೂರ್ತಿ ಹಾಗೂ ಅಸ್ಟಿಮೋ ಫೈ ಪ್ರೈವೇಟ್ ಲಿಮಿಟೆಡ್ ಕಂಪನಿಯ ಎಚ್.ಆರ್ ಮನೋಹರ್ ಹಾಗೂ ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕರಯ್ಯ ನವರು ಹಾಗೂ ಶಿಶು ಯೋಜನಾಧಿಕಾರಿಗಳಾದ ವಿನೋದ್ ರಾಜ್ ಹಾಗೂ ನಗರಸಭೆ ಸದಸ್ಯರಾದ ಬಂತಿ ವೆಂಕಟೇಶ್, ಪದ್ಮನಾಭ, ನವೀನ್,ಸುಧಾರಾಣಿ ಲಕ್ಷ್ಮೀನಾರಾಯಣ್ ಹಾಗೂ ನಿಕಟಪೂರ್ವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿಗಳಾದ ವತ್ಸಲಾ ಜಗನ್ನಾಥ್ ರವರು ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಶಾಲಾ ಮಕ್ಕಳು ಸ್ಥಳೀಯ ನಿವಾಸಿಗರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

3 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

4 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago