ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ 54 ಲಕ್ಷ ರೂಗಳ ಸಿ.ಎಸ್.‌ಆರ್.‌ ಅನುದಾನದಡಿ ನಿರ್ಮಿಸಲಾದ ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರವನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ರವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ಅಸ್ಟಿಮೋ ಫೈ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಉತ್ಕೃಷ್ಟ ಮಟ್ಟದ ನೂತನ ಶಾಲಾ ಕಟ್ಟಡ ಹಾಗೂ ಅಂಗನವಾಡಿ ನಿರ್ಮಿಸಿ ಕೊಟ್ಟಿದ್ದಕ್ಕಾಗಿ ಧನ್ಯವಾದಗಳು ತಿಳಿಸಿದರು.

ಹಾಗೆಯೇ ಹಿಂದೆ ಇದ್ದ ನಗರಸಭಾ ಸದಸ್ಯರು ಮುಂದೆ ಬರುವ ನಗರಸಭೆ ಸದಸ್ಯರೆಲ್ಲರೂ ಸಿ.ಸಿ.ರಸ್ತೆ,ಚರಂಡಿಗಳನ್ನು ನಿರ್ಮಿಸುತ್ತಾರೆ. ಆದರೆ ತಮ್ಮ ಅಧಿಕಾರಿಯವಧಿಯಲ್ಲಿ ಜನ ಸದಾಕಾಲವೂ ನೆನಪಿನಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಿದಾಗಲೇ ಜನರು ನಮ್ಮಗಳನ್ನು ನೆನೆಯುತ್ತಾರೆ. ಈ ನಿಟ್ಟಿನಲ್ಲಿ ವಾರ್ಡಿನ ನಗರಸಭೆ ಸದಸ್ಯೆ ಬಿ.ನಾಗರತ್ನಮ್ಮ ಕೃಷ್ಣಮೂರ್ತಿ ಉತ್ತಮವಾಗಿ ಕೆಲಸ ಮಾಡ್ತಿದ್ದಾರೆ. ಮುಂದೆ ಸಹ ಜನರು ನೆನಪಿನಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಲಿ. ಹಾಗೇ ಎಲ್ಲಾ ಬಿಜೆಪಿ ನಗರಸಭೆ ಸದಸ್ಯರು ಉತ್ತಮವಾಗಿ ಮತದಾರರ ಆಶಯಗಳನ್ನು ಉಳಿಯುವ ನಿಟ್ಟಿನಲ್ಲಿ ಕೆಲಸ ಮಾಡ್ತಿದ್ದಾರೆ ಇದು ನನಗೆ ವೈಯುಕ್ತಿಕವಾಗಿ ಖುಷಿಯನ್ನು ಕೊಡ್ತಿದೆ. ಹಾಗೇ ವಾರ್ಡಿನಲ್ಲಿ ಏನಾದರೂ ಕೆಲಸ ಕಾರ್ಯಗಳಿದ್ದರೆ ಖಂಡಿತವಾಗಿ ಮಾಡಿ ಕೊಡ್ತಿನಿ ಎಂದರು.

ಬಹಳ ವರ್ಷಗಳಿಂದ ಈ ವಾರ್ಡಿನ ಪಡಿತರ ವಿತರಣೆ ಕೇಂದ್ರ ಇಲ್ಲ. ವಿನಾಯಕನಗರದ ಜನರು ಮಾರುತಿನಗರದ ಪಡಿತರ ಅಂಗಡಿಯಲ್ಲಿ ರೇಷನ್ ಪಡೆಯುತ್ತಿದ್ದು, ಇದರಿಂದಾಗಿ ವಿನಾಯಕನಗರದ ಜನತೆಗೆ ತುಂಬಾ ಸಮಸ್ಯೆ ಆಗುತ್ತಿದೆ ಎಂಬುದರ ಬಗ್ಗೆ ವಾರ್ಡಿನ ನಗರಸಭೆ ಸದಸ್ಯರು ನನ್ನ ಗಮನಕ್ಕೆ ತಂದಿದ್ದಾರೆ ಆ ನಿಟ್ಟಿನಲ್ಲಿ ವಿನಾಯಕನಗರದಲ್ಲಿ ಒಂದು ಪಡಿತರ ಕೇಂದ್ರ ತರುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುವ ಕೆಲಸ ಮಾಡಿ ವಾರ್ಡಿಗೆ ಒಂದು ಪಡಿತರ ವಿತರಣಾ ಕೇಂದ್ರ ವ್ಯವಸ್ಥೆ ಮಾಡುವೆ ಎಂದರು.

ಹಾಗೇ ಈವರೆಗೆ ಶಾಲೆಗೆ ನಗರಸಭೆ ವತಿಯಿಂದ ಖಾತೆಯನ್ನು ಮಾಡದೇ ಇರುವುದರ ಬಗ್ಗೆ ಶಾಲಾ ಶಿಕ್ಷಕರು ಶಾಸಕರ ಗಮನವನ್ನು ಸೆಳೆದಾಗ ಈ ಕೂಡಲೇ ಶಾಲೆ ಹಾಗೂ ಅಂಗನವಾಡಿಗೆ ನಗರಸಭೆ ವತಿಯಿಂದ ಖಾತೆಯನ್ನು ಮಾಡಿ ಕೊಡಬೇಕೆಂದು ಸೂಚಿಸಿದರು.ಇಲ್ಲವಾದರೇ ಸರ್ಕಾರಿ ಜಾಗ ಒತ್ತುವರಿಯಾಗಿ ಅನ್ಯರ ಪಾಲಾಗುತ್ತದೆ ಅದನ್ನು ತಡೆಯ ಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದರು.

ವಾರ್ಡಿನಲ್ಲಿರುವ ಗಣೇಶ ದೇವಸ್ಥಾನದ ಕಾಂಪೌಂಡ್ ನಿರ್ಮಾಣದ ಬಗ್ಗೆ ಸಾರ್ವಜನಿಕರ ಪ್ರಶ್ನೆ ಗೆ ಖಂಡಿತವಾಗಿ ದೇವಸ್ಥಾನದ ಕಾಂಪೌಂಡ್ ನಿರ್ಮಾಣಕ್ಕೆ ನಮ್ಮ ಸಹಕಾರ ಸದಾಕಾಲ  ಇರುತ್ತದೆ ಎಂದೂ ತಿಳಿಸಿದರು‌. ನೂತನ ಶಾಲೆಯಲ್ಲಿ ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವಂತೆ ಶಿಕ್ಷಕರು ಶ್ರಮವಹಿಸಬೇಕೆಂದೂ ಸೂಚಿಸಿದರು.

ಇದೇ ಸಂಧರ್ಭದಲ್ಲಿ ವಾರ್ಡಿನ ನಗರಸಭಾ ಸದಸ್ಯೆ ಬಿ.ನಾಗರತ್ನಮ್ಮ ಕೃಷ್ಣಮೂರ್ತಿ ಹಾಗೂ ಅಸ್ಟಿಮೋ ಫೈ ಪ್ರೈವೇಟ್ ಲಿಮಿಟೆಡ್ ಕಂಪನಿಯ ಎಚ್.ಆರ್ ಮನೋಹರ್ ಹಾಗೂ ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕರಯ್ಯ ನವರು ಹಾಗೂ ಶಿಶು ಯೋಜನಾಧಿಕಾರಿಗಳಾದ ವಿನೋದ್ ರಾಜ್ ಹಾಗೂ ನಗರಸಭೆ ಸದಸ್ಯರಾದ ಬಂತಿ ವೆಂಕಟೇಶ್, ಪದ್ಮನಾಭ, ನವೀನ್,ಸುಧಾರಾಣಿ ಲಕ್ಷ್ಮೀನಾರಾಯಣ್ ಹಾಗೂ ನಿಕಟಪೂರ್ವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿಗಳಾದ ವತ್ಸಲಾ ಜಗನ್ನಾಥ್ ರವರು ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಶಾಲಾ ಮಕ್ಕಳು ಸ್ಥಳೀಯ ನಿವಾಸಿಗರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

11 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

11 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

11 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

11 hours ago

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸರ್ಕಾರದ ಚಿಂತನೆ – ಸಚಿವ ಚಲುವರಾಯಸ್ವಾಮಿ

ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…

17 hours ago

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

19 hours ago